ರಕ್ಷಣಾ ಕಾರಿಡಾರ್ ಸ್ಥಾಪನೆ : ಪಿಎಂ ಮೋದಿ
Team Udayavani, Feb 22, 2018, 12:12 PM IST
ಲಕ್ನೋ: ಉತ್ತರಪ್ರದೇಶದ ಅತ್ಯಂತ ಹಿಂದು ಳಿದ ಪ್ರದೇಶಗಳಲ್ಲಿ ಒಂದಾದ ಬುಂದೇಲ್ಖಂಡ್ನಲ್ಲಿ ರಕ್ಷಣಾ ಕೈಗಾರಿಕಾ ಕಾರಿಡಾರ್ ಸ್ಥಾಪಿಸಿ, ಅದರ ಮೂಲಕ ಈ ಪ್ರದೇಶವನ್ನು ಅಭಿವೃದ್ಧಿಯ ಪಥದತ್ತ ಒಯ್ಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಬುಧವಾರ ಲಕ್ನೋದಲ್ಲಿ ನಡೆದ ಹೂಡಿಕೆದಾರರ ಸಮಾವೇಶವನ್ನು ಉದ್ಘಾಟಿಸಿ ಅವರು ಈ ವಿಚಾರ ತಿಳಿಸಿದ್ದಾರೆ. “ಬಜೆಟ್ನಲ್ಲಿ ಘೋಷಿಸಲಾಗಿರುವ 2 ರಕ್ಷಣಾ ಕೈಗಾರಿಕಾ ಕಾರಿಡಾರ್ಗಳ ಪೈಕಿ ಒಂದನ್ನು ಬುಂದೇಲ್ಖಂಡ್ನಲ್ಲಿ ಸ್ಥಾಪಿಸಲಾಗುವುದು. 20 ಸಾವಿರ ಕೋಟಿ ರೂ. ವೆಚ್ಚದಲ್ಲಿ ಇದನ್ನು ನಿರ್ಮಿಸಲಾಗುವುದು. ಇದರಿಂದಾಗಿ 2.5 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ’ ಎಂದು ಮೋದಿ ತಿಳಿಸಿದ್ದಾರೆ. ಇದೇ ವೇಳೆ ಸಿಎಂ ಯೋಗಿ ಆದಿತ್ಯನಾಥ್ರನ್ನು ಶ್ಲಾ ಸಿದ ಅವರು, ಯೋಗಿ ಸರಕಾರವು ಈ ಹಿಂದೆ ರಾಜ್ಯಕ್ಕಿದ್ದ ನೆಗೆಟಿವ್ ಇಮೇಜ್ ಅನ್ನು ಬದಲಿಸಿದರು ಎಂದು ಹೇಳಿದ್ದಾರೆ. ಖುಷಿನಗರದ ಜೇವಾರ್ನಲ್ಲಿ ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪಿಸುವ ಬಗ್ಗೆಯೂ ಪ್ರಧಾನಿ ಘೋಷಿಸಿದ್ದಾರೆ.
ಶಾಸಕ ದುರ್ಮರಣ: ಈ ನಡುವೆ, ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಳ್ಳಲೆಂದು ಬರುತ್ತಿದ್ದ ಬಿಜೆಪಿ ಶಾಸಕ ಲೋಕೇಂದ್ರ ಸಿಂಗ್ ಅಪಘಾತದಲ್ಲಿ ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಅವರು ಸಂಚರಿಸುತ್ತಿದ್ದ ಕಾರು ಕಮಲಾಪುರದಲ್ಲಿ ಚಾಲಕನ ನಿಯಂ ತ್ರಣ ತಪ್ಪಿ ಟ್ರಕ್ಗೆ ಢಿಕ್ಕಿಯಾಗಿ ಅಪಘಾತ ಸಂಭವಿಸಿತು. ಈ ವೇಳೆ ಅವರ ಜತೆಗಿದ್ದ ಇತರೆ ಮೂವರೂ ಸಾವಿಗೀಡಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ