‘ಆ ದೇವರಿಂದಲೂ ನನ್ನನ್ನು ಹಿಡಿಯಲಾಗುವುದಿಲ್ಲ’ ಎಂದ ಆರೋಪಿಯನ್ನು ಜೈಲಿಗಟ್ಟಿದ ಪೊಲೀಸರು
Team Udayavani, Feb 6, 2021, 8:45 PM IST
ಮುಂಬೈ: ಪೊಲೀಸರನ್ನು ಬಿಡಿ, ಆ ದೇವರಿಂದಲೂ ನನ್ನನ್ನು ಹಿಡಿಯಲು ಸಾಧ್ಯವಿಲ್ಲ ಎಂದು ಸವಾಲು ಹಾಕಿದ ವ್ಯಕ್ತಿಯನ್ನು ಪೊಲೀಸರು ಹಿಡಿದು ಕಂಬಿಹಿಂದೆ ಕಳುಹಿಸಿದ ಘಟನೆ ಮುಂಬೈ ನಲ್ಲಿ ನಡೆದಿದೆ.
26 ವರ್ಷದ ಪಪ್ಪು ಹರಿಶ್ಚಂದ್ರ ಅಲಿಯಾಸ್ ಕೋಪ್ಡಿ ಎಂಬಾತನೇ ಮುಂಬೈ ಪೊಲೀಸರಿಗೆ ಸವಾಲು ಹಾಕಿ ಜೈಲು ಸೇರಿದವನು. ಕೋಪ್ಡಿ ವಿರುದ್ದ ಮುಂಬೈ, ಪೋವಯ್, ಸಾಕಿ ನಕಾ, ಎಂಐಡಿಸಿ ಸೇರಿದಂತೆ ಹಲವಾರು ಠಾಣೆಗಳನ್ನು 12 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು. ಪೋವಯ್ ನಿವಾಸಿಯಾಗಿರುವು ಈತ 2013 ರಿಂದಲೂ ಹಲವಾರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಕಣ್ಮರೆಯಾಗಿದ್ದ. ಮಾತ್ರವಲ್ಲದೆ ಅಜ್ಞಾತ ಸ್ಥಳದಲ್ಲಿದ್ದುಕೊಂಡೇ, ಪೊಲೀಸರಿಗೆ ಮಾತ್ರವಲ್ಲ, ಆ ದೇವರಿಗೂ ನನ್ನನ್ನು ಹಿಡಿಯಲು ಸಾಧ್ಯವಿಲ್ಲ ಎಂದು ಸವಾಲು ಹಾಕಿದ್ದ.
ಇದನ್ನೂ ಓದಿ: Backward Body skip ಮಾಡುವ ಮೂಲಕ 6ನೇ ವಿಶ್ವದಾಖಲೆ ನಿರ್ಮಿಸಿದ ತನುಶ್ರೀ ಪಿತ್ರೋಡಿ
ಆರೋಪಿಯು ಪೊಲೀಸರಿಗೆ ಸವಾಲೆಸೆದಿದ್ದರಿಂದ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಕಾರ್ಯಾಚರಣೆ ನಡೆಸಲಾಗಿತ್ತು. ಈ ವೇಳೆ ರಾಯಲ್ ಪಾಮ್ ನಲ್ಲಿ ಕೋಪ್ಡಿಯು ದರೋಡೆ ಮಾಡಲು ಸಂಚು ರೂಪಿಸಿದ್ದಾನೆ ಎಂಬ ಸುಳಿವೊಂದು ದೊರಕಿತು.
ಕೂಡಲೇ ಆತನ ಬಂಧನಕ್ಕೆ ಬಲೆ ಬೀಸಿ ಸೆರೆಹಿಡಿಯಲಾಗಿದೆ. ಈ ವೇಳೆ ಒಂದು ಪಿಸ್ತೂಲ್ ಅನ್ನು ಕೂಡ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಉಲ್ಲಾಸ್ ಕೋಲಾಮ್ ತಿಳಿಸಿದ್ದಾರೆ.
ಇದನ್ನೂ ಓದಿ: ರೈತರ ಪ್ರತಿಭಟನೆ: ದೆಹಲಿಯ ಸಿಂಘು, ಟಿಕ್ರಿ ಗಡಿ ಪ್ರದೇಶಗಳಲ್ಲಿ ಮತ್ತೆ ಇಂಟರ್ನೆಟ್ ಸ್ಥಗಿತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ