ಗಡ್ಡ ಬೋಳಿಸಿದ ಪ್ರಕರಣ: ಕತ್ತು ಸೀಳಿದರೂ ನಾವು ಮುಸ್ಲಿಮರೇ: ಓವೈಸಿ
Team Udayavani, Aug 6, 2018, 11:13 AM IST
ಹೊಸದಿಲ್ಲಿ : ‘ನೀವು ನಮ್ಮ ಕತ್ತನ್ನು ಸೀಳಿದರೂ ನಾವು ಮುಸ್ಲಿಮರಾಗಿಯೇ ಇರುತ್ತೇವೆ’ ಎಂದು ಎಐಎಂಐಎಂ ಪಕ್ಷದ ಮುಖ್ಯಸ್ಥರಾಗಿರುವ ಸಂಸದ ಅಸಾದುದ್ದೀನ್ ಓವೈಸಿ ಗುಡುಗಿದ್ದಾರೆ.
ಹರಿಯಾಣದಲ್ಲಿ ಮುಸ್ಲಿಮ್ ವ್ಯಕ್ತಿಯೊಬ್ಬನ ಗಡ್ಡವನ್ನು ಬಲವಂತದಿಂದ ಬೋಳಿಸಲಾಯಯಿತೆಂಬ ವರದಿಗಳ ಹಿನ್ನೆಲೆಯಲ್ಲಿ ಓವೈಸಿ ಈ ಆಕ್ರೋಶದ ಪ್ರತಿಕ್ರಿಯೆ ನೀಡಿದ್ದಾರೆ.
“ಮುಸ್ಲಿಂ ವ್ಯಕ್ತಿಯೊಬ್ಬನ ಗಡ್ಡವನ್ನು ಬಲವಂತದಿಂದ ಬೋಳಿಸಲಾಯಿತೆಂದು ನಾವು ಕೇಳಿದ್ದೇವೆ. ಈ ಕೃತ್ಯ ಎಸಗಿರುವವರಿಗೆ ಮತ್ತು ಅವರ ಅಪ್ಪಂದಿರಿಗೆ ನಾನು ಎಚ್ಚರಿಸುವುದೇನೆಂದರೆ ನೀವು ನಮ್ಮ ಕತ್ತನ್ನು ಕೊಯ್ದರು ಕೂಡ ನಾವು ಮುಸ್ಲಿಮರಾಗಿಯೇ ಇರುತ್ತೇವೆ. ನಾವು ನಿಮ್ಮನ್ನು ಇಸ್ಲಾಮ್ ಗೆ ಮತಾಂತರಿಸುತ್ತೇವೆ ಮತ್ತು ನೀವು ಗಡ್ಡ ಬಿಡುವಂತೆ ಮಾಡುತ್ತೇವೆ” ಎಂದು ಓವೈಸಿ ಕಿಡಿ ಕಾರಿದರು.
ಕಳೆದ ಗುರುವಾರ ಗುರುಗ್ರಾಮದ ಸೆಕ್ಟರ್ 29ರಲ್ಲಿ ಮುಸ್ಲಿಮ್ ಯುವಕನೊಬ್ಬನ ಗಡ್ಡವನ್ನು ಬಲವಂತದಿಂದ ಬೋಳಿಸಲಾಯಿತೆಂಬ ಘಟನೆ ವರದಿಯಾಗಿತ್ತು.
ಯೂನುಸ್ ಎಂಬ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಇಬ್ಬರು ಅಪರಿಚಿತರೊಂದಿಗೆ ಮಾತಿನ ಜಗಳ ಉಂಟಾಗಿತ್ತು. ಈ ಜಗಳದ ಪರಾಕಾಷ್ಠೆಯಲ್ಲಿ ಅವರು ಯೂನುಸ್ನ ಗಡ್ಡವನ್ನು ಬಲಂತವಾಗಿ ಬೋಳಿಸಿದ್ದರು ಎನ್ನಲಾಗಿತ್ತು.
ಮಾಧ್ಯಮ ವರದಿಗಳ ಪ್ರಕಾರ ಈ ಘಟನೆಯು ಒಂದು ಹೇರ್ ಕಟ್ಟಿಂಗ್ ಸೆಲೂನ್ನ ಒಳಗೆ ನಡೆದಿತ್ತು. ಅಪರಿಚಿತ ದುಷ್ಕರ್ಮಿಗಳು ಮುಸ್ಲಿಂ ಯುವಕನನ್ನು ಸಮೀಪದ ಹೇರ್ ಕಟ್ಟಿಂಗ್ ಸೆಲೂನ್ಗೆ ಎಳೆದೊಯ್ದು ಅಲ್ಲಿ ಆತನ ಗಡ್ಡವನ್ನು ಬಲವಂದಿಂದ ಬೋಳಿಸಿದ್ದರು ಎನ್ನಲಾಗಿತ್ತು.
ಬಲವಂತದಿಂದ ಗಡ್ಡ ಬೋಳಿಸಿಕೊಂಡಿದ್ದ ಸಂತ್ರಸ್ತ ಮುಸ್ಲಿಂ ವ್ಯಕ್ತಿ ಅನಂತರ ಗುರುಗ್ರಾಮ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ