ಪ್ರತಿಯೊಬ್ಬ ಭಾರತೀಯನೂ ಡಿಸೆಂಬರ್ ಒಳಗೆ ಕೋವಿಡ್ ಲಸಿಕೆ ಪಡೆದಿರಬೇಕು: ಕೇಂದ್ರ ಸಚಿವ ಶೇಖಾವತ್
Team Udayavani, May 24, 2021, 8:54 AM IST
ಹೊಸದಿಲ್ಲಿ: ಭಾರತವೂ ಕೋವಿಡ್ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದು, ಲಸಿಕೆ ಉತ್ಪಾದನೆಯು ಅತ್ಯಂತ ವೇಗದಲ್ಲಿ ನಡೆಯುತ್ತಿದೆ. ಹೀಗಾಗಿ ಡಿಸೆಂಬರ್ ತಿಂಗಳೊಳಗೆ ಎಲ್ಲಾ ಪ್ರಜೆಗಳಿಗೂ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದರು.
ವಿಪಕ್ಷಗಳ ವಿರುದ್ದ ಕಿಡಿಕಾರಿದ ಕೇಂದ್ರ ಸಚಿವರು, ಕೋವಿಡ್ ವಿರುದ್ಧದ ಲಸಿಕಾ ಕಾರ್ಯವನ್ನು ವಿಪಕ್ಷಗಳು ರಾಜಕೀಯಗೊಳಿಸುತ್ತಿವೆ ಎಂದರು. ತಮ್ಮ ರಾಜಕೀಯ ಲಾಭಕ್ಕಾಗಿ ಲಸಿಕೆ ವಿರುದ್ಧ ಮಾತನಾಡಿ, ದೇಶದ ಗೌರವಕ್ಕೆ ಕುಂದು ತರುವ ಕೆಲಸ ಮಾಡಿದ್ದರು. ಆದರೆ ಇದೀಗ ಅವರುಗಳೇ ಲಸಿಕೆಗಾಗಿ ಸಾಲು ನಿಂತಿದ್ದಾರೆ ಎಂದರು.
ಇದನ್ನೂ ಓದಿ:ಬಂತು ನೋಡಿ ಆಕಾಶದಲ್ಲಿ ಹಾರಾಡುವ ವಿದ್ಯುತ್ ಚಾಲಿತ ಕಾರು
ಕೋವಿಡ್ ಲಸಿಕೆಯ ಉತ್ಪಾದನೆಯ ವೇಗ ಹೆಚ್ಚಿಸಲು ನಾವು ಸತತವಾಗಿ ಕೆಲಸ ಮಾಡುತ್ತಿದ್ದೇವೆ. ಪ್ರತಿಯೊಬ್ಬ ಭಾರತೀಯನೂ ಡಿಸೆಂಬರ್ ವೇಳೆಗೆ ಕೋವಿಡ್ ಲಸಿಕೆ ಪಡೆದಿರಬೇಕು ಎನ್ನುವುದು ನಮ್ಮ ಗುರಿ. ಇದೊಂದು ದೊಡ್ಡ ದಾಖಲೆಯಾಗಲಿದೆ ಎಂದರು.
ಇದೇ ಮೊದಲ ಬಾರಿಗೆ ಭಾರತ ಸ್ವತಃ ಲಸಿಕೆಗಳನ್ನು ಉತ್ಪಾದನೆ ಮಾಡುತ್ತಿದೆ. ಹಿಂದೆಲ್ಲಾ ಲಸಿಕೆಗಳು ಭಾರತಕ್ಕೆ ಬರಬೇಕಾದರೆ ವರ್ಷಗಳಷ್ಟು ಕಾಯಬೇಕಾಗಿತ್ತು ಎಂದು ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?