ಪ್ರತಿಯೊಬ್ಬ ಭಾರತೀಯನೂ ಡಿಸೆಂಬರ್ ಒಳಗೆ ಕೋವಿಡ್ ಲಸಿಕೆ ಪಡೆದಿರಬೇಕು: ಕೇಂದ್ರ ಸಚಿವ ಶೇಖಾವತ್
Team Udayavani, May 24, 2021, 8:54 AM IST
ಹೊಸದಿಲ್ಲಿ: ಭಾರತವೂ ಕೋವಿಡ್ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದು, ಲಸಿಕೆ ಉತ್ಪಾದನೆಯು ಅತ್ಯಂತ ವೇಗದಲ್ಲಿ ನಡೆಯುತ್ತಿದೆ. ಹೀಗಾಗಿ ಡಿಸೆಂಬರ್ ತಿಂಗಳೊಳಗೆ ಎಲ್ಲಾ ಪ್ರಜೆಗಳಿಗೂ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದರು.
ವಿಪಕ್ಷಗಳ ವಿರುದ್ದ ಕಿಡಿಕಾರಿದ ಕೇಂದ್ರ ಸಚಿವರು, ಕೋವಿಡ್ ವಿರುದ್ಧದ ಲಸಿಕಾ ಕಾರ್ಯವನ್ನು ವಿಪಕ್ಷಗಳು ರಾಜಕೀಯಗೊಳಿಸುತ್ತಿವೆ ಎಂದರು. ತಮ್ಮ ರಾಜಕೀಯ ಲಾಭಕ್ಕಾಗಿ ಲಸಿಕೆ ವಿರುದ್ಧ ಮಾತನಾಡಿ, ದೇಶದ ಗೌರವಕ್ಕೆ ಕುಂದು ತರುವ ಕೆಲಸ ಮಾಡಿದ್ದರು. ಆದರೆ ಇದೀಗ ಅವರುಗಳೇ ಲಸಿಕೆಗಾಗಿ ಸಾಲು ನಿಂತಿದ್ದಾರೆ ಎಂದರು.
ಇದನ್ನೂ ಓದಿ:ಬಂತು ನೋಡಿ ಆಕಾಶದಲ್ಲಿ ಹಾರಾಡುವ ವಿದ್ಯುತ್ ಚಾಲಿತ ಕಾರು
ಕೋವಿಡ್ ಲಸಿಕೆಯ ಉತ್ಪಾದನೆಯ ವೇಗ ಹೆಚ್ಚಿಸಲು ನಾವು ಸತತವಾಗಿ ಕೆಲಸ ಮಾಡುತ್ತಿದ್ದೇವೆ. ಪ್ರತಿಯೊಬ್ಬ ಭಾರತೀಯನೂ ಡಿಸೆಂಬರ್ ವೇಳೆಗೆ ಕೋವಿಡ್ ಲಸಿಕೆ ಪಡೆದಿರಬೇಕು ಎನ್ನುವುದು ನಮ್ಮ ಗುರಿ. ಇದೊಂದು ದೊಡ್ಡ ದಾಖಲೆಯಾಗಲಿದೆ ಎಂದರು.
ಇದೇ ಮೊದಲ ಬಾರಿಗೆ ಭಾರತ ಸ್ವತಃ ಲಸಿಕೆಗಳನ್ನು ಉತ್ಪಾದನೆ ಮಾಡುತ್ತಿದೆ. ಹಿಂದೆಲ್ಲಾ ಲಸಿಕೆಗಳು ಭಾರತಕ್ಕೆ ಬರಬೇಕಾದರೆ ವರ್ಷಗಳಷ್ಟು ಕಾಯಬೇಕಾಗಿತ್ತು ಎಂದು ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ
ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು
ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ
ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು
ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್
ಹೊಸ ಸೇರ್ಪಡೆ
ಆಂಧ್ರಪ್ರದೇಶ: ಸಿಲಿಂಡರ್ ಸ್ಫೋಟ- ಮನೆ ಕುಸಿದು ಬಿದ್ದು 3 ವರ್ಷದ ಮಗು ಸೇರಿ ನಾಲ್ವರು ಸಾವು
ಕನ್ನಡಿಗರಿಗೆ ತೊಂದರೆಯಾದರೆ ಕರ್ನಾಟಕ ಸರ್ಕಾರ ಸಹಿಸಿಕೊಳ್ಳುವುದಿಲ್ಲ: ಸಿಎಂ ಬೊಮ್ಮಾಯಿ
ಗರ್ಭಗುಡಿಯ ಮೂರ್ತಿ ಶ್ರೀಚಕ್ರ ಸ್ಥಳಾಂತರ: ಸ್ಥಳಕ್ಕೆ ಭೇಟಿ ನೀಡದ ಸಚಿವ ಆನಂದ್ ಸಿಂಗ್; ಆಕ್ರೋಶ
‘ವೀಲ್ ಚೇರ್ ರೋಮಿಯೋ’ ಚಿತ್ರ ವಿಮರ್ಶೆ; ವೀಲ್ಚೇರ್ನಿಂದ ಮೇಲೇಳುವ ಸಿನಿಮಾವಿದು…
ಎಸಿಬಿ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಮಾಜಿ ಪೊಲೀಸ್ ಸಿಬ್ಬಂದಿ