ಎಲ್ಲರಿಗೂ ದೇವರ ಆಯ್ಕೆಯ ಹಕ್ಕಿದೆ: ಸುಪ್ರೀಂ ಕೋರ್ಟ್
Team Udayavani, Dec 5, 2022, 11:37 PM IST
ಹೊಸದಿಲ್ಲಿ: ಭಾರತದಲ್ಲಿ ಪ್ರತಿಯೊಬ್ಬರಿಗೂ ತಮ್ಮ ದೇವರನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಜತೆಗೆ ನಿರ್ದಿಷ್ಟ ಆಧ್ಯಾತ್ಮಿಕ ಪುರುಷನನ್ನು “ಪರಮಾತ್ಮ’ ಎಂದು ಘೋಷಿಸಬೇಕೆಂದು ಕೋರಿ ಸಲ್ಲಿಸಿದ್ದ ಪಿಐಎಲ್ ಅನ್ನು ವಜಾಗೊಳಿಸಿದೆ.
ಅರ್ಜಿಯ ವಿಚಾರಣೆ ನಡೆಸಿದ ನ್ಯಾ| ಎಂ.ಆರ್.ಶಾ ಮತ್ತು ಸಿ.ಟಿ.ರವಿಕುಮಾರ್ ಅವರನ್ನು ಒಳಗೊಂಡ ನ್ಯಾಯಪೀಠ, ಅರ್ಜಿದಾರರಾದ ಉಪೇಂದ್ರ ನಾಥ್ ದಲೈ ಅವರಿಗೆ 1 ಲಕ್ಷ ರೂ. ದಂಡ ವಿಧಿಸಿ “ಈಗ ಇಂತಹ ಪಿಐಎಲ್ಗಳನ್ನು ಸಲ್ಲಿಸಲು ಜನರು ಕನಿಷ್ಠ ನಾಲ್ಕು ಬಾರಿ ಯೋಚಿಸುತ್ತಾರೆ,’ ಎಂದು ಹೇಳಿತು.