ಜನರ ಭಾವನೆಗೆ ಬೆಲೆ ಕೊಟ್ಟು ರಾಮ ಮಂದಿರ ನಿರ್ಮಿಸಿ
Team Udayavani, Nov 20, 2018, 4:20 PM IST
ಲಕ್ನೋ: ಸಾರ್ವಜನಿಕರ ಭಾವನೆಯನ್ನು ಗೌರವಿಸಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಬೇಕು ಎಂದು ಉತ್ತರ ಪ್ರದೇಶದ ಸಂಸ್ಕೃತಿ ಸಚಿವ ಲಕ್ಷ್ಮೀನಾರಾಯಣ ಚೌಧರಿ ಹೇಳಿದ್ದಾರೆ. ದೇಗುಲ ನಿರ್ಮಾಣ ಮಾಡುವ ಮೂಲಕ ಅಯೋಧ್ಯೆಯ ವೈಭವವನ್ನು ಮರಳಿಸಬೇಕಿದೆ. ಸರಕಾರವಾಗಲೀ ಅಥವಾ ದೇಶದ ಯಾವುದೇ ಸಂಸ್ಥೆಯಾಗಲಿ ಎಲ್ಲರೂ ಸಾರ್ವಜನಿಕರ ಭಾವನೆಗೆ ಗೌರವ ನೀಡಬೇಕು. ಅಯೋಧ್ಯೆಯಲ್ಲಿ ರಾಮಮಂದಿರವನ್ನು ನಿರ್ಮಾಣ ಮಾಡಬೇಕು ಎಂಬುದೇ ದೇಶಾದ್ಯಂತ ಸಾರ್ವಜನಿಕರ ಭಾವನೆಯಾಗಿದೆ ಎಂದು ಚೌಧರಿ ಹೇಳಿದ್ದಾರೆ.
ಈ ಮಧ್ಯೆ ಶಿಯಾ ವಕ್ಫ್ ಬೋರ್ಡ್ ಮುಖ್ಯಸ್ಥ ಸೈಯದ್ ವಸೀಮ್ ರಿಜ್ವಿ ನಿರ್ಮಿಸಿದ ರಾಮ ಜನ್ಮಭೂಮಿ ಎಂಬ ಸಿನಿಮಾದ ಟ್ರೇಲರ್ ಅನ್ನು ಬಿಡುಗಡೆ ಮಾಡಲಾಗಿದೆ. 1990ರಲ್ಲಿ ರಾಮ ಮಂದಿರ ಚಳವಳಿಯನ್ನು ಕೇಂದ್ರೀಕರಿಸಿ ಈ ಸಿನಿಮಾ ನಿರ್ಮಿಸಲಾಗಿದೆ.
ಚುನಾವಣೆ ಗಿಮಿಕ್: 2019ರ ಲೋಕಸಭೆ ಚುನಾವಣೆಗೂ ಮುನ್ನ ರಾಮ ಮಂದಿರ ವಿಚಾರವನ್ನು ಪ್ರಸ್ತಾಪಿಸುತ್ತಿರುವ ಬಿಜೆಪಿಯದ್ದು ಚುನಾವಣೆ ಗಿಮಿಕ್ ಎಂದು ಸಮಾಜವಾದಿ ಪಕ್ಷ ಟೀಕಿಸಿದೆ. ಎಸ್ಪಿ ಮುಖಂಡ ರಾಜಪಾಲ್ ಕಶ್ಯಪ್ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಯಾವುದೇ ಅಭಿವೃದ್ಧಿಯ ಅಜೆಂಡಾ ಬಿಜೆಪಿ ಬಳಿ ಇಲ್ಲ. ಹೀಗಾಗಿ ಕೋರ್ಟಲ್ಲಿರುವ ವಿಷಯ ಕೈಗೆತ್ತಿಕೊಂಡಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ