ಮುಂಗಾರು ಅಧಿವೇಶನ ರೂಪುರೇಷೆ ಬಿಡುಗಡೆ

ಪ್ರಶ್ನೋತ್ತರ ಅವಧಿ, ಶೂನ್ಯ ವೇಳೆಗೆ ಕತ್ತರಿ: ವಿಪಕ್ಷಗಳು ಸಿಡಿಮಿಡಿ

Team Udayavani, Sep 3, 2020, 7:08 AM IST

ಮುಂಗಾರು ಅಧಿವೇಶನ ರೂಪುರೇಷೆ ಬಿಡುಗಡೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಇದೇ ತಿಂಗಳ 14ರಿಂದ ಅ. 1ರವರೆಗೆ ನಡೆಯಲಿರುವ ಮುಂಗಾರು ಅಧಿವೇಶನದಲ್ಲಿ ಪ್ರಶ್ನೋತ್ತರ ಅವಧಿ, ಶೂನ್ಯ ವೇಳೆಯ ಅವಧಿ ಹಾಗೂ ಖಾಸಗಿ ಸಂಸದರ ಮಸೂದೆ ಮಂಡನೆಗೆ ವಿಧಿಸಲಾಗಿರುವ ನಿರ್ಬಂಧ ಸಂಬಂಧ ವಿವಾದವೇರ್ಪಟ್ಟಿದೆ.

ಈ ಸಂಬಂಧ ಸ್ಪಷ್ಟನೆ ನೀಡಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ, ಕೋವಿಡ್ 19 ಭೀತಿ, ಸಮಯದ ಅಭಾವದಿಂದಾಗಿ ಪ್ರಶ್ನೋತ್ತರ, ಶೂನ್ಯವೇಳೆಯ ಅವಧಿ ಕಡಿತದ ಬಗ್ಗೆ ಮೊದಲೇ ವಿಪಕ್ಷ ನಾಯಕರ ಜತೆ ಚರ್ಚಿಸಲಾಗಿತ್ತು. ಆಗ ಒಪ್ಪಿಗೆಯನ್ನೂ ನೀಡಿದ್ದರು. ಪ್ರಶ್ನೋತ್ತರ ಅವಧಿಯನ್ನು ಸಂಪೂರ್ಣವಾಗಿ ಕಡಿತ ಮಾಡಲಾಗಿಲ್ಲ, ಲಿಖಿತವಾಗಿ ಸಂಸದರ ಪ್ರಶ್ನೆಗಳಿಗೆ ಉತ್ತರ ನೀಡಲಾಗುತ್ತದೆ ಎಂದಿದ್ದಾರೆ.

ರಾಜನಾಥ್ ಮಾಹಿತಿ
ಪ್ರಶ್ನೋತ್ತರಗಳಿಗೆ ಸಿದ್ಧಗೊಳ್ಳಲು ಸಚಿವರು ಸಂಸತ್ತಿನ ತಮ್ಮ ಕಚೇರಿಗಳಿಗೆ ತಮ್ಮ ಇಲಾಖೆಯ ಹಲವಾರು ಅಧಿಕಾರಿಗಳನ್ನು ಕರೆಯಿಸಿಕೊಂಡು ಸಮಾಲೋಚಿಸಬೇಕಾಗುತ್ತದೆ. ಇದರಿಂದ ಸಂಸತ್ತಿಗೆ ಬಂದು ಹೋಗುವವರ ಸಂಖ್ಯೆ ಜಾಸ್ತಿಯಾಗುತ್ತದೆ. ಹಾಗಾಗಿ ಈ ಬಾರಿ ಅವನ್ನು ಕೈಬಿಡಲಾಗಿದೆ ಎಂದು ರಕ್ಷಣ ಸಚಿವ ರಾಜನಾಥ್‌ ಸಿಂಗ್‌ ತಮಗೆ ತಿಳಿಸಿರುವುದಾಗಿ ವಿಪಕ್ಷಗಳ ಸದಸ್ಯರು ಹೇಳಿದ್ದಾರೆ.

ನಾಯ್ಡುಗೆ ಬಿನೋಯ್‌ ಪತ್ರ
ಸರಕಾರದ ಈ ಕ್ರಮ ವಿರೋಧಿಸಿರುವ ರಾಜ್ಯಸಭಾ ಸದಸ್ಯ ಬಿನೋಯ್‌ ವಿಸ್ವಂ, ರಾಜ್ಯ ಸಭಾಪತಿಯಾದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಪತ್ರ ಬರೆದಿದ್ದಾರೆ. ಕೆಲವು ನಿಬಂಧನೆಗಳಿಂದ ನಡೆಸಲಾಗುತ್ತಿದ್ದರೂ ಯಾವಾಗಲೂ ನಡೆಯುತ್ತಿರುವ ಕಲಾಪಗಳಂತೆಯೇ ಈ ಬಾರಿಯೂ ನಡೆಯಲಿದೆ. ಹಾಗಿರುವಾಗ ಪ್ರಶ್ನೋತ್ತರ ಕಲಾಪ ಹಾಗೂ ಶೂನ್ಯ ವೇಳೆಯ ಕಲಾಪ ಎಂದಿನಂತೆ ನಡೆಸಲು ಸೂಚಿಸಬೇಕು ಎಂದು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.