ಥಾರ್ ಮರುಭೂಮಿಯಲ್ಲೂ ನದಿ: 1,72,000 ವರ್ಷಗಳ ಹಿಂದೆ ಹರಿಯುತ್ತಿದ್ದ ನದಿ ಕುರುಹು ಪತ್ತೆ
Team Udayavani, Oct 23, 2020, 6:15 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ರಾಜಸ್ಥಾನ ಥಾರ್ ಮರುಭೂಮಿಯಲ್ಲಿ ನದಿಯೊಂದು ಹರಿಯುತ್ತಿತ್ತು. ಯಾವಾಗ? ಕಳೆದ ವರ್ಷವೋ ಅಥವಾ ಅದಕ್ಕಿಂತ ಹಿಂದಿನ ವರ್ಷವೋ ಎಂದು ವ್ಯಂಗ್ಯವಾಗಿ ಪ್ರಶ್ನೆ ಮಾಡಬೇಡಿ. 1,72,000 ವರ್ಷಗಳ ಹಿಂದೆ ಶಿಲಾಯುಗದಲ್ಲಿ ನದಿ ಹರಿಯುತ್ತಿತ್ತು ಮತ್ತು ಅದು ಜನರ ಜೀವನಾಡಿಯಾಗಿತ್ತು ಎಂದು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್, ಎಜುಕೇಶನ್ ಆ್ಯಂಡ್ ರಿಸರ್ಚ್, ಚೆನ್ನೈನ ಅಣ್ಣಾ ವಿವಿ ಮತ್ತು ಜರ್ಮನಿಯ ಮ್ಯಾಕ್ಸ್ ಪ್ಲಾಂಕ್ ಇನ್ಸ್ಟಿಟ್ಯೂಟ್ ಫಾರ್ ದ ಸೈನ್ಸ್ ಆಫ್ ಹ್ಯೂಮನ್ ಹಿಸ್ಟರಿ (ಎಂಪಿಐ-ಎಸ್ಎಚ್ಎಚ್) ನ ವಿಜ್ಞಾನಿಗಳು ನಡೆಸಿದ ಅಧ್ಯಯನದಲ್ಲಿ ಈ ಅಂಶ ಉಲ್ಲೇಖಗೊಂಡಿದೆ.
ಆ ವರ್ಷಗಳಲ್ಲಿ ಹಲವಾರು ಬಾರಿ ನಾಗರಿಕತೆಗೆ ಇದು ಜೀವ ಸೆಲೆಯಾಗಿದ್ದಿರಬಹುದು ಎಂದು “ಕ್ವಾರ್ಟರ್ಲಿ ಸೈನ್ಸ್ ರಿವ್ಯೂ’ ಎಂಬ ನಿಯತಕಾಲಿಕದಲ್ಲಿ ಪ್ರಕಟವಾಗಿರುವ ಸಂಶೋಧನಾ ಪ್ರಬಂಧ ಹೇಳಿದೆ. ಬಿಕಾನೇರ್ ವ್ಯಾಪ್ತಿಯಲ್ಲಿ ಈ ನದಿ ಇತ್ತು. 80 ಸಾವಿರ ವರ್ಷಗಳ ಹಿಂದೆ ಥಾರ್ ಮರುಭೂಮಿ ವ್ಯಾಪ್ತಿಯಲ್ಲಿ ನದಿ ಸಕ್ರಿಯವಾಗಿತ್ತು. ಬಿಕಾನೇರ್ ಸಮೀಪದ ನಲ್ ಎಂಬ ಗ್ರಾಮದಲ್ಲಿ 2014ರಿಂದ 2019ರ ವರೆಗೆ ನಡೆಸಲಾಗಿರುವ ಅಧ್ಯಯನದಿಂದ ಈ ಅಂಶ ದೃಢಪಟ್ಟಿದೆ.
ಜರ್ಮನಿಯ ಎಂಪಿಐ-ಎಸ್ಎಚ್ಎಚ್ನ ವಿಜ್ಞಾನಿ ಜೇಮ್ಸ್ ಬ್ಲಿಂಕಾರ್ನ್ ಹೊಸ ಶೋಧನೆಯ ಬಗ್ಗೆ ಪ್ರತಿಕ್ರಿಯೆ ನೀಡಿ, “ನದಿ ಇತ್ತು ಎಂಬುದನ್ನು ಶಾಖವಿಲ್ಲದೆ ಉತ್ಪತ್ತಿಯಾಗಿರುವ ಬೆಳಕಿನ ತಂತ್ರಜ್ಞಾನದ ಮೂಲಕ ಕಂಡುಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಥಾರ್ ವ್ಯಾಪ್ತಿಯಲ್ಲಿ 80 ಸಾವಿರ ವರ್ಷಗಳ ಹಿಂದೆ ನದಿ ಇತ್ತು ಎಂಬ ಬಗ್ಗೆ ರಾಜಸ್ಥಾನದ ಲುನಿ ನದಿ ತೀರ ಪ್ರದೇಶದಲ್ಲಿ ಅಧ್ಯಯನ ನಡೆಸಲಾಗಿತ್ತು. ಮಹಿ, ಸಬರಮತಿ, ಒರ್ಸಾಂಗ್ ನದಿ ಕಣಿವೆ ವ್ಯಾಪ್ತಿಯಲ್ಲಿಯೂ ಈ ಬಗ್ಗೆ ಅಧ್ಯಯನ ನಡೆಸಿದ ಬಳಿಕ ಥಾರ್ ವ್ಯಾಪ್ತಿಯಲ್ಲಿ ನದಿ ಇದ್ದದ್ದು ದೃಢಪಟ್ಟಿದೆ ಎಂದು ಬ್ಲಿಂಕಾರ್ನ್ ತಿಳಿಸಿದ್ದಾರೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಾಕ್ರಮ್ ದಿವಸ್ ಕಾರ್ಯಕ್ರಮಕ್ಕೆ ಬಿಜೆಪಿಯವರಿಗೆ ಹೆಚ್ಚು ಆಹ್ವಾನ : ತೃಣಮೂಲ ಆರೋಪ
ಮಾತುಕತೆ ಬೆನ್ನಲ್ಲೇ ಸಿಕ್ಕಿಂ ಗಡಿಯಲ್ಲಿ ಭಾರತ, ಚೀನಾ ಸೇನೆ ಘರ್ಷಣೆ; ಸೈನಿಕರಿಗೆ ಗಾಯ
ದೆಹಲಿ: ಸಿಂಘು ಗಡಿಯಲ್ಲಿ ಕಾಂಗ್ರೆಸ್ ಸಂಸದರ ಮೇಲೆ ಹಲ್ಲೆ, ಕಾರು ಜಖಂ
ಜಮ್ಮು-ಶ್ರೀನಗರ್: ಭಾರೀ ಹಿಮಪಾತ, ಮಿನಿ ಟ್ರಕ್ ನೊಳಗೆ ಇಬ್ಬರ ಸಾವು
ಪಠ್ಯಪುಸ್ತಕಗಳಲ್ಲಿ ಬರಲಿದೆಯೇ ತುರ್ತು ಪರಿಸ್ಥಿತಿ, ಪೋಖ್ರಾನ್ ವಿವರ?
MUST WATCH
ಉಡುಪಿ ಕೃಷ್ಣ ಮಠಕ್ಕೆ ಬಾಳೆ ಎಲೆಯನ್ನು ನೀಡುವ ಯುವಕ
ತೊಗರಿ ರಾಶಿಗೆ ಬೆಂಕಿ ಹಚ್ಚಿ, ಪಂಪ್ ಸೆಟ್ ವಿದ್ಯುತ್ ಸಂಪರ್ಕ ಕಡಿತ ಮಾಡಿದ ದುಷ್ಕರ್ಮಿಗಳು!
ಸಮುದ್ರದಲ್ಲಿ ಪದ್ಮಾಸನ ಭಂಗಿ: ಕಾಲಿಗೆ ಸರಪಳಿ ಬಿಗಿದು ಈಜಿ ದಾಖಲೆ ಬರೆದ ಗಂಗಾಧರ್ ಜಿ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ
ಅಹಿತಕರ ಬೆಳವಣಿಗೆಗಳು ಕಂಡುಬಂದರೆ ವಾಟ್ಸಾಪ್ ಮೂಲಕ ಮಾಹಿತಿ ಹಂಚಿಕೊಳ್ಳಿ; Compol ಶಶಿಕುಮಾರ್
ಹೊಸ ಸೇರ್ಪಡೆ
ಪರಾಕ್ರಮ್ ದಿವಸ್ ಕಾರ್ಯಕ್ರಮಕ್ಕೆ ಬಿಜೆಪಿಯವರಿಗೆ ಹೆಚ್ಚು ಆಹ್ವಾನ : ತೃಣಮೂಲ ಆರೋಪ
ಮರಳುವುದೇ ಅವಳಿ ಕೆರೆಗಳ ಗತವೈಭವ? ಕೆರೆಗಳ ಸುತ್ತಲ ಸಮಸ್ಯೆಗಳಿಗೆ ಸಿಗಬೇಕಿದೆ ಸೂಕ್ತ ಪರಿಹಾರ
ಬೆಂ. ಗ್ರಾಮಾಂತರ ಉಸ್ತುವಾರಿ ಕೊಟ್ಟರೆ ನಾನು ನಿಭಾಯಿಸುತ್ತೇನೆ: ಎಂಟಿಬಿ ನಾಗರಾಜ್
ಮಾತುಕತೆ ಬೆನ್ನಲ್ಲೇ ಸಿಕ್ಕಿಂ ಗಡಿಯಲ್ಲಿ ಭಾರತ, ಚೀನಾ ಸೇನೆ ಘರ್ಷಣೆ; ಸೈನಿಕರಿಗೆ ಗಾಯ
ಉತ್ತರಪತ್ರಿಕೆ ಮರುಎಣಿಕೆ ಲೋಪ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸುರೇಶ್ ಕುಮಾರ್ ಸೂಚನೆ