“ಮಗುವನ್ನು ಉಳಿಸಲು ಆಗುವುದಿಲ್ಲ.. ಮಕ್ಕಳನ್ನು ಕೊಂದು ತಾವೂ ಆತ್ಮಹತ್ಯೆ ಮಾಡಿಕೊಂಡ ದಂಪತಿ
Team Udayavani, Jan 27, 2023, 8:51 AM IST
ಭೋಪಾಲ್: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯ ಪ್ರದೇಶದ ವಿದಿಶಾದಲ್ಲಿ ಗುರುವಾರ (ಜ.26 ರಂದು) ಸಂಜೆ ನಡೆದಿದೆ.
ಬಿಜೆಪಿಯ ಮಾಜಿ ಕಾರ್ಪೋರ್ಟರ್ ಸಂಜೀವ್ ಮಿಶ್ರಾ, 45, ಅವರ ಪತ್ನಿ ನೀಲಂ (42), ಅವರ ಮಕ್ಕಳಾದ ಅನ್ಮೋಲ್ (13), ಸಾರ್ಥಕ್ (7) ಮೃತ ದುರ್ಧೈವಿಗಳು.
ಸಂಜೀವ್ ಮಿಶ್ರಾ ಅವರ ಇಬ್ಬರು ಮಕ್ಕಳಲ್ಲಿ ಅನ್ಮೋಲ್ ಕಳೆದ 5 ವರ್ಷದಿಂದ ಅನುವಂಶಿಯ ಕಾಯಿಲೆಯಿಂದ ಬಳಲುತ್ತಿದ್ದರು. ತಂದೆಯಾಗಿ ತನ್ನೆಲ್ಲಾ ಪ್ರಯತ್ನ ಪಟ್ಟು ಚಿಕಿತ್ಸೆ ಕೊಡಿಸಿದರೂ, ಕಾಯಿಲೆ ಇದೆ ಎನ್ನುವ ಮಾನಸಿಕ ವೇದನೆ ಸಂಜಯ್ ಅವರಲ್ಲಿತ್ತು. ಇದೇ ಕಾರಣದಿಂದ ಗುರುವಾರ ಸಂಜೆ ಸಾಮಾಜಿಕ ಜಾಲತಾಣದಲ್ಲಿ “ದೇವರು ಶತ್ರುವಿನ ಮಕ್ಕಳನ್ನೂ ಈ ಕಾಯಿಲೆಯಿಂದ ಪಾರು ಮಾಡಲಿ, ನಾನು ಇನ್ನು ಮಗುವನ್ನು ಉಳಿಸಲು ಆಗುವುದಿಲ್ಲ. ನಾನು ಜೀವಂತವಾಗಿ ಇರಲು ಸಾಧ್ಯವಿಲ್ಲ” ಎಂದು ಸಂಜೀವ್ ಪೋಸ್ಟ್ ಮಾಡಿದ್ದರು.
ಈ ಪೋಸ್ಟ್ ಕಂಡು ಕೆಲ ಸ್ನೇಹಿತರು ಸಂಜೀವ್ ಅವರ ಮನೆಗೆ ಬಂದಿದ್ದಾರೆ. ಬಾಗಿಲು ಒಡೆದು ನೋಡುವಾಗ ನಾಲ್ವರು ಅಸ್ವಸ್ಥರಾಗಿ ಬಿದ್ದಿದ್ದರು. ನಾಲ್ವರನ್ನೂ ಆಸ್ಪತ್ರೆಗೆ ಕರೆ ತಂದರೂ, ಅವರು ಅಲ್ಲಿ ಮೃತ ಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.
ಪೋಸ್ಟ್ ಮಾರ್ಟಂ ಬಳಿಕ ನಾಲ್ವರೂ ಸೆಲ್ಫೋಸ್ ಮಾತ್ರೆಗಳನ್ನು ಸೇವಿಸಿದ್ದರು ಎಂದು ತಿಳಿದು ಬಂದಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿಯನ್ನು’ಮೀರ್ ಜಾಫರ್’ ಎಂದರು ; ಪ್ರಧಾನಿ ವಿರುದ್ಧ ಪ್ರಿಯಾಂಕಾ ಕಿಡಿ
64 ಅಧಿಕೃತ ತಿದ್ದುಪಡಿಗಳೊಂದಿಗೆ ಹಣಕಾಸು ಮಸೂದೆ ಅಂಗೀಕರಿಸಿದ ಲೋಕಸಭೆ
ರಾಹುಲ್ ಅನರ್ಹ; ಖರ್ಗೆ ಸೇರಿ ವಿಪಕ್ಷ ನಾಯಕರಿಂದ ವ್ಯಾಪಕ ಆಕ್ರೋಶ
ಭಾರತೀಯ ರಕ್ಷಣಾ ಸಚಿವಾಲಯದೊಂದಿಗೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮಹತ್ವದ ಒಪ್ಪಂದ
ಝಾಕಿರ್ ನಾಯ್ಕನ ವಿಚಾರ ಒಮಾನ್ ನೊಂದಿಗೆ ಹಂಚಿಕೊಂಡಿದ್ದೇವೆ :ಅರಿಂದಮ್ ಬಾಗ್ಚಿ
MUST WATCH
ಹೊಸ ಸೇರ್ಪಡೆ
ಹೆಚ್ಚಿನ ಮಾದಕ ದ್ರವ್ಯಗಳು ಪಾಕ್ ನಿಂದ ರವಾನೆ; ಸಾಗರದಲ್ಲಿ ಭದ್ರತೆ ಬಲಪಡಿಸಬೇಕು: ಶಾ
ರಾಹುಲ್ ಗಾಂಧಿಯನ್ನು’ಮೀರ್ ಜಾಫರ್’ ಎಂದರು ; ಪ್ರಧಾನಿ ವಿರುದ್ಧ ಪ್ರಿಯಾಂಕಾ ಕಿಡಿ
ಜಿಲ್ಲೆಯಲ್ಲಿ 60 ಚೆಕ್ಪೋಸ್ಟ್ ಆರಂಭ; 25 ಲಕ್ಷ ರೂ. ನಗದು, 16 ಲಕ್ಷ ರೂ. ಸೀರೆ ವಶಕ್ಕೆ
ತಾಯಿ – ಮಗ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ : ಬಾಲಕ ಮೃತ್ಯು
ಪಳ್ಳಿ ಶ್ರೀ ಉಮಾಮಹೇಶ್ವರ- ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ