BJD ಇನ್ನು ಪಾಂಡ್ಯನ್‌ ಪರ್ವ; ನವೀನ್‌ ಪಟ್ನಾಯಕ್‌ ನೇತೃತ್ವದ ಪಕ್ಷದಲ್ಲಿ ನಂ. 2 ಸ್ಥಾನ?

ನಿವೃತ್ತ ಐಎಎಸ್‌ ಅಧಿಕಾರಿ ವಿ.ಕೆ. ಪಾಂಡ್ಯನ್‌ ಬಿಜೆಡಿ ಸೇರ್ಪಡೆ

Team Udayavani, Nov 27, 2023, 11:39 PM IST

BJD ಇನ್ನು ಪಾಂಡ್ಯನ್‌ ಪರ್ವ; ನವೀನ್‌ ಪಟ್ನಾಯಕ್‌ ನೇತೃತ್ವದ ಪಕ್ಷದಲ್ಲಿ ನಂ. 2 ಸ್ಥಾನ?

ಭುವನೇಶ್ವರ: ಕಳೆದ 26 ವರ್ಷ ಗಳಿಂದಲೂ ಬಿಜು ಜನತಾ ದಳ (ಬಿಜೆಡಿ)ದ ಸಾರಥಿಯಾಗಿದ್ದ ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಅವರು ಕೊನೆಗೂ ತಮ್ಮ “ರಾಜಕೀಯ ಉತ್ತರಾಧಿಕಾರಿ’ಯನ್ನು ಆಯ್ಕೆ ಮಾಡಿಕೊಂಡರೇ?

ಹೌದು ಎನ್ನುತ್ತಿವೆ ಮೂಲಗಳು. ನವೀನ್‌ ಪಟ್ನಾಯಕ್‌ ಅವರ ಆಪ್ತ, ನಿವೃತ್ತ ಐಎಎಸ್‌ ಅಧಿಕಾರಿ ವಿ. ಕಾರ್ತಿಕೇಯ ಪಾಂಡ್ಯನ್‌ ಅವರು ಸೋಮವಾರ ಅಧಿಕೃತವಾಗಿ ಬಿಜೆಡಿಗೆ ಸೇರ್ಪಡೆಯಾ ಗಿದ್ದಾರೆ. ಕಳೆದ ತಿಂಗಳವರೆಗೂ ಪಾಂಡ್ಯನ್‌ ಅವರು ಒಡಿಶಾ ಮುಖ್ಯ ಮಂತ್ರಿಯ ಆಪ್ತ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಅನಂತರ ಸರಕಾರಿ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದುಕೊಂಡ ಅವರು, ಒಡಿಶಾದ ಚೇರ್ಮನ್‌ 5ಟಿ (ಪರಿವರ್ತನೀಯ ಯೋಜನೆಗಳು) ಆಗಿ ನೇಮಕಗೊಳ್ಳುವ ಮೂಲಕ ಸಂಪುಟ ದರ್ಜೆ ಸಚಿವನ ಸ್ಥಾನ ವನ್ನು ಪಡೆದರು. ಸೋಮವಾರ ಅವರು ಭುವನೇಶ್ವರದಲ್ಲಿ ಇರುವ ಪಟ್ನಾಯಕ್‌ ನಿವಾಸದಲ್ಲಿ ಪಕ್ಷಕ್ಕೆ ಸೇರ್ಪಡೆ ಯಾಗಿದ್ದಾರೆ.

ಮುಂದಿನ ವರ್ಷದ ಜೂನ್‌ನಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯ ಲಿರುವ ಹಿನ್ನೆಲೆಯಲ್ಲಿ ಪಾಂಡ್ಯನ್‌ ಸೇರ್ಪ ಡೆ ಮಹತ್ವ ಪಡೆದಿದೆ. ಮುಂದಿನ ದಿನ ಗಳಲ್ಲಿ ಬಿಜೆಡಿಯಲ್ಲಿ ಅವರು ಎರಡನೇ ಅತ್ಯಂತ ಪ್ರಮುಖ ನಾಯಕ ಎಂಬ ಅಗ್ರ ಶ್ರೇಣಿಯಲ್ಲಿ ಬಿಂಬಿತರಾಗಲಿರುವುದು ಬಹುತೇಕ ಖಚಿತ ಎನ್ನುತ್ತಿವೆ ಮೂಲಗಳು. ಅವರ ನೇತೃತ್ವದಲ್ಲಿಯೇ ಮುಂದಿನ ವಿಧಾನಸಭೆ ಚುನಾವಣೆಗೆ ಪ್ರಚಾರ, ತಂತ್ರಗಾರಿಕೆ ನಡೆಯಲಿದೆ. ಎಲ್ಲದಕ್ಕಿಂತ ಹೆಚ್ಚಾಗಿ ಅಭ್ಯರ್ಥಿಗಳ ಆಯ್ಕೆಯಲ್ಲಿಯೂ ಪಾಂಡ್ಯನ್‌ ಅವರೇ ಪ್ರಧಾನ ಪಾತ್ರ ವಹಿಸಲಿದ್ದಾರೆ ಎಂದು ಬಿಜೆಡಿ ಮೂಲಗಳು ಹೇಳಿವೆ.

ಪಾಂಡ್ಯನ್‌ ಹುದ್ದೆ ಏನು?
ವಿ.ಕೆ. ಪಾಂಡ್ಯನ್‌ ಅವರಿಗೆ ಬಿಜೆಡಿಯಲ್ಲಿ ಯಾವ ಹುದ್ದೆ ಸಿಗಲಿದೆ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಪಟ್ನಾಯಕ್‌ ಸರಕಾ ರದ ಈವರೆಗಿನ ಬಹುತೇಕ ಯೋಜ ನೆಗಳ ಹಿಂದಿನ ರೂವಾರಿ ಇವರೇ ಆಗಿದ್ದು, ಈಗ ಪಕ್ಷಕ್ಕೆ ಅಧಿಕೃತ ಪ್ರವೇಶ ಪಡೆದಿರುವ ಕಾರಣ ಎರಡನೇ ಅಗ್ರ ನಾಯಕನ ಹುದ್ದೆ ಸಿಗುವುದಂತೂ ಖಚಿತ ಎನ್ನುವುದು ಉನ್ನತ ಮೂಲಗಳ ವಾದ. 1997ರ ಡಿ. 26ರಂದು ಬಿಜು ಜನತಾ ದಳ ಸ್ಥಾಪನೆ ಮಾಡಿದ ದಿನದಿಂದ ನವೀನ್‌ ಪಟ್ನಾಯಕ್‌ ಅವರೇ ಅಧ್ಯ ಕ್ಷರಾಗಿ ಮುಂದುವರಿದಿದ್ದಾರೆ. ಅವರು ಅಧ್ಯಕ್ಷರಾಗಿದ್ದರೂ ಪಕ್ಷದ ವ್ಯವಹಾ ರಗಳನ್ನು ಪಾಂಡ್ಯನ್‌ ಅವರೇ ನೋಡಿ ಕೊಳ್ಳುವ ಸಾಧ್ಯತೆಗಳು ಅಧಿಕವಾಗಿವೆ.

ಭಿನ್ನಾಭಿಪ್ರಾಯ ಇಲ್ಲ
ಬಿಜೆಡಿ ಸಂಸದ ಪಿನಾಕಿ ಮಿಶ್ರಾ ಮಾತ ನಾಡಿ ವಿ.ಕೆ. ಪಾಂಡ್ಯನ್‌ ಸೇರ್ಪ ಡೆಯಿಂದ ಪಕ್ಷದಲ್ಲಿ ಭಿನ್ನಾಭಿಪ್ರಾಯ ಉಂಟಾಗಿಲ್ಲ. ಅವರು ತಮಿಳು ನಾಡಿನವರು ಎಂಬ ಕಾರಣಕ್ಕೆ ಪಕ್ಷದಲ್ಲಿ ಅವರನ್ನು ಒಪ್ಪಿಕೊಳ್ಳುವುದು ಕಷ್ಟವಾ ಗಲಿದೆ ಎಂಬ ವಿಚಾರವೇ ಉದ್ಭವ ವಾಗುವುದಿಲ್ಲ ಎಂದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.