Phone-Tapping Row: ಫೋನ್ ಕದ್ದಾಲಿಕೆ ಪ್ರಕರಣ.. ಗುಪ್ತಚರ ದಳದ ಮಾಜಿ ಮುಖ್ಯಸ್ಥ ನಂ.1 ಆರೋಪಿ
Team Udayavani, Mar 25, 2024, 7:48 PM IST
ಹೈದರಾಬಾದ್: ತೆಲಂಗಾಣದಲ್ಲಿ ಫೋನ್ ಕದ್ದಾಲಿಕೆ ಪ್ರಕರಣದಲ್ಲಿ ಗುಪ್ತಚರ ದಳದ ಮಾಜಿ ಮುಖ್ಯಸ್ಥ ಟಿ ಪ್ರಭಾಕರ್ ರಾವ್ ಅವರನ್ನು ನಂಬರ್ ಒನ್ ಆರೋಪಿಯನ್ನಾಗಿ ಮಾಡಲಾಗಿದೆ.
ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ಫೋನ್ ಕದ್ದಾಲಿಕೆ ವಿಚಾರವಾಗಿ ಭಾರೀ ಗದ್ದಲ ಎದ್ದಿತ್ತು. ಇದೀಗ ರೇವಂತ ರೆಡ್ಡಿ ಸರ್ಕಾರದ ಆದೇಶದ ಮೇರೆಗೆ ನಡೆಸಿದ ತನಿಖೆಯಲ್ಲಿ ಮಾಜಿ ಗುಪ್ತಚರ ಮುಖ್ಯಸ್ಥರ ಹೆಸರು ಆರೋಪಿ ನಂಬರ್ 1 ಆಗಿ ಹೊರಹೊಮ್ಮಿದೆ.
ಈ ಪ್ರಕರಣದಲ್ಲಿ ಹಲವು ಐಪಿಎಸ್ ಅಧಿಕಾರಿಗಳ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಈಗಾಗಲೇ ಮೂವರು ಐಪಿಎಸ್ ಅಧಿಕಾರಿಗಳನ್ನು ಬಂಧಿಸಲಾಗಿದೆ. ಫೋನ್ ಕದ್ದಾಲಿಕೆ ಪ್ರಕರಣದ ಆರೋಪಿ ನಂಬರ್ 1 ಟಿ. ಪ್ರಭಾಕರ್ ರಾವ್ ದೇಶದಿಂದ ಹೊರಗಿದ್ದಾರೆ ಎನ್ನಲಾಗಿದ್ದು. ಅವರ ಹೈದರಾಬಾದ್ ನಲ್ಲಿರುವ ನಿವಾಸದ ಮೇಲೆ ಅಧಿಕಾರಿಗಳ ತಂಡ ಶೋಧ ನಡೆಸಿದೆ.
ಸದ್ಯ ಸಿಎಂ ಆಗಿರುವ ಕಾಂಗ್ರೆಸ್ ನಾಯಕ ರೇವಂತ ರೆಡ್ಡಿ ಹಾಗೂ ಬಿಜೆಪಿಯ ಕೆಲವು ನಾಯಕರ ಫೋನ್ಗಳನ್ನು ಕದ್ದಾಲಿಕೆ ಮಾಡಲಾಗುತ್ತಿತ್ತು ಎಂದು ಆರೋಪಿಸಲಾಗಿದೆ. ಕದ್ದಾಲಿಕೆಗೆ ಬೇಕಾಗುವ ಎಲ್ಲ ಉಪಕರಣಗಳನ್ನು ಇಸ್ರೇಲ್ನಿಂದ ತರಿಸಲಾಗಿತ್ತು ಎಂದು ಹೇಳಲಾಗಿದೆ.
ಇದನ್ನೂ ಓದಿ: ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಪ್ರಚಾರ ಆರಂಭಿಸಿದ ಯುವ ನಾಯಕಿ ಪ್ರಿಯಾಂಕ ಜಾರಕಿಹೊಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್