ಕಲ್ಲಿದ್ದಲು ಹಗರಣ: ಜಾರ್ಖಂಡ್ ಮಾಜಿ ಸಿಎಂ ಕೋಡ ದೋಷಿ
Team Udayavani, Dec 13, 2017, 11:12 AM IST
ಹೊಸದಿಲ್ಲಿ : ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣದಲ್ಲಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧು ಕೋಡ ಅವರು ಅಪರಾಧಿ ಎಂದು ಸಿಬಿಐ ವಿಶೇಷ ನ್ಯಾಯಾಲಯ ಇಂದು ಬುಧವಾರ ಹೇಳಿದೆ.
ಕೋಡ ಅವರಂತೆ ಮಾಜಿ ಕಲ್ಲಿದ್ದಲು ಕಾರ್ಯದರ್ಶಿ ಎಚ್ ಸಿ ಗುಪ್ತ, ಮಾಜಿ ಜಾರ್ಖಂಡ್ ಮುಖ್ಯ ಕಾರ್ಯದರ್ಶಿ ಅಶೋಕ್ ಕುಮಾರ್ ಬಸು ಅವರು ಕೂಡ ಅಪರಾಧಿಗಳೆಂದು ಸಿಬಿಐ ಕೋರ್ಟ್ ಹೇಳಿದೆ.
ನಾಳೆ ಗುರುವಾರ ಈ ಅಪರಾಧಿಗಳಿಗೆ ಶಿಕ್ಷೆಯ ಪ್ರಮಾಣವನ್ನು ತೀರ್ಮಾನಿಸುವ ವಿಷಯದಲ್ಲಿ ವಾದ-ಪ್ರತಿವಾದ ನಡೆಯಲಿದೆ.
ಜಾರ್ಖಂಡ್ನಲ್ಲಿನ ಉತ್ತರ ರಾಜಹರ ಕಲ್ಲಿದ್ದಲು ನಿಕ್ಷೇಪವನ್ನು ಕೋಲ್ಕತ ಮೂಲಕ ವಿನಿ ಅಯರ್ನ್ ಆ್ಯಂಡ್ ಸ್ಟೀಲ್ ಉದ್ಯೋಗ್ ಲಿಮಿಟೆಡ್ (ವಿಐಎಸ್ಯುಎಲ್) ಕಂಪೆನಿಗೆ ನೀಡಿರುವ ವಿಷಯದಲ್ಲಿ ನಡೆದಿರುವ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಕೇಸ್ ಇದಾಗಿದೆ.
ಈ ಕಲ್ಲಿದ್ದಲು ಹಗರಣದ ಇತರ ಆರೋಪಿಗಳೆಂದರೆ ಬಸಂತ್ ಭಟ್ಟಾಚಾರ್ಯ, ಬಿಪಿನ್ ಬಿಹಾರಿ ಸಿಂಗ್ (ಇಬ್ಬರೂ ಸರಕಾರಿ ಅಧಿಕಾರಿಗಳು), ವಿಸುಲ್ನ ನಿರ್ದೇಶಕ ವೈಭವ್ ತುಳಸಿಯಾನ್, ಕೋಡ ಅವರ ನಿಕಟವರ್ತಿ ವಿಜಯ್ ಜೋಷಿ ಮತ್ತು ಚಾರ್ಟರ್ಡ್ ಅಕೌಂಟೆಂಟ್ ಆಗಿರುವ ನವೀನ್ ಕುಮಾರ್ ತುಲಸಿಯಾನ್.
ಎಂಟು ಮಂದಿ ಆರೋಪಿಗಳು ಈ ಹಿಂದೆ ತಮಗೆ ಸಮನ್ಸ್ ಜಾರಿಯಾದುದನ್ನು ಅನುಸರಿಸಿ ಕೋರ್ಟಿಗೆ ಹಾಜರಾಗಿದ್ದು ಅವರಿಗೆ ಜಾಮೀನು ಮಂಜೂರು ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ