ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ವಿರುದ್ಧದ ಸುಪ್ರೀಂ ಕೋರ್ಟ್ ಹೇಳಿಕೆಗೆ ಆಕ್ರೋಶ
Team Udayavani, Jul 5, 2022, 10:50 PM IST
ನವದೆಹಲಿ: ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ಇತ್ತೀಚೆಗೆ ಸುಪ್ರೀಂ ಕೋರ್ಟ್ ನ್ಯಾಯಪೀಠ ನೀಡಿರುವ ಹೇಳಿಕೆಯನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ನಿವೃತ್ತ ಜಡ್ಜ್ ಗಳು, ಅಧಿಕಾರಿಗಳು ಹಾಗೂ ಸಶಸ್ತ್ರ ಪಡೆಗಳ ಅಧಿಕಾರಿಗಳ ಗುಂಪೊಂದು ಆಗ್ರಹಿಸಿದೆ.
ನ್ಯಾಯಪೀಠವು ನೂಪುರ್ ಶರ್ಮಾರನ್ನು ಟೀಕಿಸುವ ಮೂಲಕ ಲಕ್ಷ್ಮಣ ರೇಖೆಯನ್ನು ದಾಟಿದೆ. ಇದು ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ ನ್ಯಾಯಾಂಗ ವ್ಯವಸ್ಥೆಯ ಮೇಲೆ ಅಚ್ಚಳಿಯದ ಕಲೆಯನ್ನು ಮೂಡಿಸಿದೆ.
ಸರ್ವೋಚ್ಚ ನ್ಯಾಯ ಪೀಠ ನೀಡಿರುವ ಹೇಳಿಕೆಯು ದುರದೃಷ್ಟಕರ ಎಂದು ಹೈಕೋರ್ಟ್ಗಳ 15 ನಿವೃತ್ತ ಜಡ್ಜ್ ಗಳು, 77 ಮಂದಿ ನಿವೃತ್ತ ಅಧಿಕಾರಿಗಳು ಮತ್ತು 25 ನಿವೃತ್ತ ಯೋಧರು ನೀಡಿರುವ ಲಿಖಿತ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.
ಜತೆಗೆ, ಇದು ದೇಶದ ಪ್ರಜಾಸತ್ತಾತ್ಮಕ ಮೌಲ್ಯಗಳು ಹಾಗೂ ಭದ್ರತೆ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿರುವ ಕಾರಣ, ಕೂಡಲೇ ಸರಿಪಡಿಸುವ ಕ್ರಮವನ್ನು ಕೈಗೊಳ್ಳಬೇಕು ಎಂದೂ ಅವರು ಆಗ್ರಹಿಸಿದ್ದಾರೆ.
ಜು.1ರಂದು ನೂಪುರ್ ಶರ್ಮಾ ವಿರುದ್ಧ ಕಿಡಿ ಕಾರಿದ್ದ ಸುಪ್ರೀಂ ಕೋರ್ಟ್, “ನೂಪುರ್ ಅವರ ಬೇಜ ವಾಬ್ದಾರಿಯುತ ಹೇಳಿಕೆಯು ಇಡೀ ದೇಶಕ್ಕೆ ಬೆಂಕಿ ಹಚ್ಚಿದೆ. ದೇಶದಲ್ಲಿ ಏನು ನಡೆಯುತ್ತಿ ದೆ ಯೋ ಅದಕ್ಕೆಲ್ಲ ಆಕೆಯೇ ಕಾರಣ’ ಎಂದು ಹೇಳಿತ್ತು.
ಈ ನಡುವೆ, ಪೈಗಂಬರರ ವಿರುದ್ಧ ಹೇಳಿಕೆ ನೀಡಿದ್ದ ನೂಪುರ್ ಅವರ ಶಿರಚ್ಛೇದ ಮಾಡಿದ ವರಿಗೆ ತಮ್ಮ ಮನೆಯನ್ನೇ ಉಡುಗೊರೆಯನ್ನಾಗಿ ನೀಡುತ್ತೇನೆ ಎಂದು ಹೇಳಿದ್ದ ಅಜೆ¾àರ್ ದರ್ಗಾದ ಸಲ್ಮಾನ್ ಚಿಸ್ತಿ ವಿರುದ್ಧ ಜೈಪುರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಶ್ಮೀರಿ ಪಂಡಿತ ರಾಹುಲ್ ರನ್ನು ಹತ್ಯೆಗೈದಿದ್ದ ಮೋಸ್ಟ್ ವಾಂಟೆಡ್ ಉಗ್ರರಿಬ್ಬರ ಎನ್ಕೌಂಟರ್
ಗೋವಾದಲ್ಲಿ ಹೆಚ್ಚಿದ ಪ್ರವಾಸಿಗರು: ದರಗಳು ದುಪ್ಪಟ್ಟು
ಹಾಸ್ಯ ನಟ ರಾಜು ಶ್ರೀವಾತ್ಸವಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು
ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಪ್ರಮಾಣವಚನ ಸ್ವೀಕಾರ, ತೇಜಸ್ವಿ ಯಾದವ್ ಡಿಸಿಎಂ
ಭಾರತದಲ್ಲಿ 24ಗಂಟೆಯಲ್ಲಿ 16,047 ಕೋವಿಡ್ ಸೋಂಕು ಪ್ರಕರಣ ಪತ್ತೆ, 54 ಮಂದಿ ಸಾವು
MUST WATCH
ನಟ ದರ್ಶನ್ ವಿರುದ್ದ ದೂರು ದಾಖಲಿಸಿದ ನಿರ್ಮಾಪಕ
ಪ್ರವೀಣ್ ಹತ್ಯೆ ಪ್ರಕರಣ : ಮುಖ್ಯ ಆರೋಪಿಗಳ ಕುರಿತು ಮಹತ್ವದ ಮಾಹಿತಿ ಬಿಚ್ಚಿಟ್ಟ ಎಡಿಜಿಪಿ
ಧಮ್ ಇದ್ದರೆ ಸಿಎಂ ಅಭ್ಯರ್ಥಿ ಘೋಷಿಸಲಿ : ಕಾಂಗ್ರೆಸ್ ಗೆ ಸವಾಲು ಹಾಕಿದ ಸಚಿವ ಅಶೋಕ್
ಪಡುಬಿದ್ರಿ : ಬೆಳ್ಳಂಬೆಳಗ್ಗೆ ತೆಂಗಿನೆಣ್ಣೆ ಮಿಲ್ ನಲ್ಲಿ ಅಗ್ನಿ ಅವಘಡ
3೦ವರ್ಷದಿಂದ ಕೃಷಿಯಲ್ಲಿ ಖುಷಿ ಮತ್ತು ಪ್ರೀತಿಯನ್ನು ಕಂಡಿದ್ದೇವೆ
ಹೊಸ ಸೇರ್ಪಡೆ
ಉಪ್ಪುಂದ: ಕಾಲುಸಂಕ ದಾಟುವಾಗ ವಿದ್ಯಾರ್ಥಿನಿ ನೀರುಪಾಲು; 48 ಗಂಟೆ ಬಳಿಕ ಮೃತ ದೇಹ ಪತ್ತೆ
ಸುಳ್ಯ: ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಹಿಡಿದು ಓಡಾಟ; ವಿಡಿಯೋ ವೈರಲ್
ಕಾಶ್ಮೀರಿ ಪಂಡಿತ ರಾಹುಲ್ ರನ್ನು ಹತ್ಯೆಗೈದಿದ್ದ ಮೋಸ್ಟ್ ವಾಂಟೆಡ್ ಉಗ್ರರಿಬ್ಬರ ಎನ್ಕೌಂಟರ್
ದೂರು ನೋಂದಾಯಿಸಲು ತಾಂತ್ರಿಕ ಅಡಚಣೆ
ವಿದ್ಯುಚ್ಛಕ್ತಿ ಕಾಯ್ದೆ-2022: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ