ಮಹಾರಾಷ್ಟ್ರದಲ್ಲಿ 15 ದಿನಗಳ ಕಾಲ ಕರ್ಫ್ಯೂ: ತವರು ಸೇರಲು ಹೊರಟ ಕಾರ್ಮಿಕರು
Team Udayavani, Apr 14, 2021, 9:41 AM IST
ಮುಂಬೈ: ಕೋವಿಡ್ -19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಾರಣ ಮಹಾರಾಷ್ಟ್ರ ಸರ್ಕಾರ 15 ದಿನಗಳ ಲಾಕ್ ಡೌನ್ ರೀತಿಯ ಕರ್ಫ್ಯೂ ಹೇರಿದೆ. ಇದರಿಂದಾಗಿ ಮುಂಬೈನಲ್ಲಿ ಕೆಲಸ ಮಾಡುತ್ತಿದ್ದ ಇತರ ರಾಜ್ಯಗಳ ಕಾರ್ಮಿಕರು ಊರು ಸೇರಲು ಹೊರಟಿದ್ದಾರೆ.
ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್ ಸೇರಿದಂತೆ ರೈಲು ನಿಲ್ದಾಣಗಳ ಮೂಲಕ ತಮ್ಮ ತವರಿಗೆ ಹೊರಡುತ್ತಿದ್ದಾರೆ.
ಇದನ್ನೂ ಓದಿ:ನಾಳೆಯಿಂದ ಮಹಾರಾಷ್ಟ್ರಾದ್ಯಂತ ಸೆಕ್ಷನ್ 144 ಜಾರಿ : ಸಿಎಂ ಉದ್ದವ್ ಠಾಕ್ರೆ
ಸುದ್ದಿಸಂಸ್ಥೆ ಎಎನ್ ಐ ಜೊತೆಗೆ ಮಾತನಾಡಿದ ಉತ್ತರ ಪ್ರದೇಶದ ವಾರಣಾಸಿ ಮೂಲದ ಕಾರ್ಮಿಕ ಶಿವಂ ಪಾಂಡೆ, ಕಳೆದ ಬಾರಿಯ ಲಾಕ್ ಡೌನ್ ನಲ್ಲಿ ತುಂಬಾ ಸಂಕಷ್ಟ ಅನುಭವಿಸಿದ್ದೇವೆ. ಈ ಬಾರಿ ನಾವು ಇದಕ್ಕೆ ಸಿದ್ದರಿಲ್ಲ. ಹಾಗಾಗಿ ಬೇಗನೇ ಮನೆಗೆ ಹೊರಟಿದ್ದೇವೆ ಎಂದಿದ್ದಾರೆ.
“ಈಗ ಮತ್ತೆ ಕರ್ಫ್ಯೂ ಹಾಕಿದ್ದಾರೆ. ನಾವಿಲ್ಲಿದ್ದುಕೊಂಡು ಏನು ಮಾಡಲಿ. ಏನನ್ನು ತಿನ್ನಬೇಕು. ಕಳೆದ ವರ್ಷ ಅನುಭವಿಸಿದ ನೋವನ್ನು ಈ ಬಾರಿ ಅನುಭವಿಸಲು ಸಾಧ್ಯವಿಲ್ಲ. ಈ ಕಾರಣಕ್ಕೆ ನಗರವನ್ನು ಬಿಟ್ಟು ತೆರಳುತ್ತಿದ್ದೇವೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ: ಮೊದಲ ಪಂದ್ಯದಲ್ಲಿ ಸೋಲುಂಡ ರಾಜಸ್ಥಾನ್ ಗೆ ಆಘಾತ: ಕೂಟದಿಂದಲೇ ಹೊರಬಿದ್ದ ವಿದೇಶಿ ಆಲ್ ರೌಂಡರ್
ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಕಾರಣ ಮೇ.1ರ ವರೆಗೆ ಕರ್ಫ್ಯೂ ಜಾರಿಗೊಳಿಸಿ ಮಂಗಳವಾರ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಆದೇಶಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?