ಚೇತರಿಕೆಯೇ ಹೆಚ್ಚು : ಮುಖ್ಯಮಂತ್ರಿಗಳ ಜೊತೆಗಿನ 2ನೇ ದಿನದ ಸಭೆಯಲ್ಲಿ ಪ್ರಧಾನಿ ಮೋದಿ ಉವಾಚ

ಜನರ ತಾಳ್ಮೆ, ಕೋವಿಡ್ ಯೋಧರ ಸಮರ್ಪಣೆ; ಸರಕಾರಗಳ ಶ್ರಮಕ್ಕೆ ಶ್ಲಾಘನೆ

Team Udayavani, Jun 18, 2020, 5:30 AM IST

ಚೇತರಿಕೆಯೇ ಹೆಚ್ಚು : ಮುಖ್ಯಮಂತ್ರಿಗಳ ಜೊತೆಗಿನ 2ನೇ ದಿನದ ಸಭೆಯಲ್ಲಿ ಪ್ರಧಾನಿ ಮೋದಿ ಉವಾಚ

ಹೊಸದಿಲ್ಲಿ: 20 ಯೋಧರ ವೀರಮರಣದ ನೋವಿನ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಸಿಎಂಗಳ ಜತೆಗೆ 2 ದಿನಗಳ ವರ್ಚುವಲ್‌ ಸಭೆಗೆ ಸಾಕ್ಷಿಯಾಗಿ­ದ್ದರು.

‘ದೇಶದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳಿ­ಗಿಂತ ಚೇತರಿಸಿಕೊಂಡವರ ಸಂಖ್ಯೆಯೇ ಅಧಿಕವಿದೆ. ಕೆಲವೇ ಕೆಲವು ರೋಗಿಗಳು ಮಾತ್ರವೇ ಐಸಿಯು, ವೆಂಟಿಲೇಟರ್‌ನ ಆರೈಕೆಯಲ್ಲಿದ್ದಾರೆ’ ಎಂದು ಪ್ರಧಾನಿ ವಿಶ್ವಾಸ ವ್ಯಕ್ತಪಡಿಸಿದರು.

ಅನ್‌ಲಾಕ್‌ 1.0 ನಂತರ ತೆಗೆದುಕೊಳ್ಳುವ ನಿರ್ಧಾ­ರಗಳ ಸಂಬಂಧ ಪ್ರಧಾನಿ ಕರೆದಿದ್ದ 2ನೇ ದಿನದ ಸಭೆಯಲ್ಲಿ 14 ರಾಜ್ಯಗಳ ಸಿಎಂಗಳು ಪಾಲ್ಗೊಂಡಿದ್ದರು.

ಜನರ ತಾಳ್ಮೆ, ರಾಜ್ಯ ಸರಕಾರಗಳ ಶ್ರಮ, ಕೋವಿಡ್ ಯೋಧರ ಸಮರ್ಪಣಾ ಭಾವಕ್ಕೆ ಪ್ರಧಾನಿ ಮೆಚ್ಚುಗೆ ಸೂಚಿಸಿದರು.

ಹೆಚ್ಚೆಚ್ಚು ಟೆಸ್ಟ್‌ ನಡೆಸಿ: ‘ಆರೋಗ್ಯ ಮೂಲ ಸೌಕರ್ಯ­ಗಳನ್ನು ಹೆಚ್ಚಿಸುವುದು ನಮ್ಮ ಮೊದಲ ಆದ್ಯತೆಯಾ­ಗಬೇಕು. ಪ್ರತಿ ಕೋವಿಡ್ ರೋಗಿಗೆ ಸರಿಯಾದ ಚಿಕಿತ್ಸೆ ದೊರೆತಾಗಲಷ್ಟೇ ಇದು ಸಾಧ್ಯ. ನಾವು ಹೆಚ್ಚು ಕೋವಿಡ್ ಟೆಸ್ಟ್‌ಗಳನ್ನು ನಡೆಸಬೇಕಿದೆ. ಪರೀಕ್ಷೆ ನಡೆಸಿದಷ್ಟು ಸೋಂಕಿತರನ್ನು ಪ್ರತ್ಯೇಕಿಸುವುದು ಸುಲಭ’ ಎಂದರು.

‘ಪಿಪಿಇ’ ಸ್ವಾವಲಂಬಿ: ‘3 ತಿಂಗಳ ಹಿಂದೆ ಪ್ರಪಂಚದಾ­ದ್ಯಂತ ಪಿಪಿಇ ಮತ್ತು ಡಯಗ್ನಾಸ್ಟಿಕ್‌ ಕಿಟ್‌ಗಳ ಕೊರತೆ ಇತ್ತು. ಭಾರತ ಸಂಪೂರ್ಣವಾಗಿ ಆಮದಿನ ಮೇಲೆ ಅವಲಂಬಿತವಾಗಿದ್ದರಿಂದ ಆರಂಭದಲ್ಲಿ ಸೀಮಿತ ಸಂಗ್ರಹ ಸಾಧ್ಯವಾಗಿತ್ತು. ಆದರೆ ಈಗ 1 ಕೋಟಿಗೂ ಹೆಚ್ಚು ಪಿಪಿಇ ಕಿಟ್‌, ಅಷ್ಟೇ ಸಂಖ್ಯೆಯ ಎನ್‌-95 ಮಾಸ್ಕ್ ಪ್ರತಿ ರಾಜ್ಯಗಳನ್ನು ತಲುಪಿವೆ’ ಎಂದು ಮಾಹಿತಿ ನೀಡಿದರು.

‘ದೇಶಾದ್ಯಂತ 900ಕ್ಕೂ ಅಧಿಕ ಕೋವಿಡ್ ಟೆಸ್ಟ್‌ ಲ್ಯಾಬ್‌ಗಳನ್ನು ಸ್ಥಾಪಿಸಲಾಗಿದೆ. ಲಕ್ಷಾಂತರ ಕೋವಿಡ್ ವಿಶೇಷ ಹಾಸಿಗೆಗಳನ್ನು ಪೂರೈಸಲಾಗಿದೆ. ಸಹಸ್ರಾರು ಕ್ವಾರಂಟೈನ್‌, ಐಸೋಲೇಷನ್‌ ಕೇಂದ್ರಗಳಲ್ಲಿ ಆಮ್ಲಜನಕ ಪೂರೈಕೆ ಸಮರ್ಪಕವಾಗಿ ನಡೆಯುತ್ತಿದೆ’ ಎಂದು ವಿವರಿಸಿದರು.

ಭಯ ತೊಲಗಿಸಿ: “ಕೋವಿಡ್ ಹೋರಾಟದಲ್ಲಿ ಒಂದು ಭಾವನಾತ್ಮಕ ಅಂಶದ ಸವಾಲೂ ನಮ್ಮ ಮುಂದಿದೆ. ಜನರಲ್ಲಿ ಸೋಂಕಿನ ಭಯ ಹೋಗಲಾ­ಡಿ­ಸುವ ಪ್ರಯತ್ನ­ಗಳನ್ನು ನಾವು ಮಾಡಬೇಕಿದೆ. ಚೇತರಿಸಿ­ಕೊಳ್ಳುವರ ಸಂಖ್ಯೆ ಹೆಚ್ಚಿರುವುದರಿಂದ ಕೋವಿಡ್ ಸೋಂಕಿತರು ಭಯಪಡುವ ಅಗತ್ಯವಿಲ್ಲ’ ಎಂದು ಧೈರ್ಯ ತುಂಬಿ­ದರು. ಸಭೆಯಲ್ಲಿ ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಪಾಲ್ಗೊಂಡಿದ್ದರು.

24 ಗಂಟೆಯಲ್ಲಿ 2,000ಸಾವು
ದೇಶದಲ್ಲಿ ಕೋವಿಡ್ ಸಾವಿನ ಸಂಖ್ಯೆ, ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಮಂಗಳವಾರ ಬೆಳಗ್ಗೆ 8 ರಿಂದ ಬುಧವಾರ ಬೆಳಗ್ಗೆ 8 ಗಂಟೆಯವರೆಗಿನ ಅವಧಿಯಲ್ಲಿ 2,003 ಸಾವು ದೃಢಪಟ್ಟಿದೆ. ಈ ಪೈಕಿ ಮಹಾರಾಷ್ಟ್ರದಲ್ಲಿಯೇ ಹೆಚ್ಚಿನ ಸಾವು ಸಂಭವಿಸಿದೆ. ಎರಡನೇ ಸ್ಥಾನದಲ್ಲಿ ದಿಲ್ಲಿ ಇದೆ. ಜತೆಗೆ 10,974 ಹೊಸ ಸೋಂಕುಗಳು ದೃಢಪಟ್ಟಿವೆೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಸತತ ಎಂಟನೇ ದಿನ ಒಟ್ಟು ಸೋಂಕಿತರ ಸಂಖ್ಯೆ 10 ಸಾವಿರಕ್ಕಿಂತ ಹೆಚ್ಚಾಗಿದೆ. ಇದರ ನಡುವೆಯೂ ಗುಣಮುಖ­ರಾಗುವ ಪ್ರಮಾಣ ಶೇ.52.79 ಆಗಿದೆ.

ಮಮತಾ ಬ್ಯಾನರ್ಜಿ ಕುಂಟುನೆಪ
ಇನ್ಯಾವುದೋ ಸಮಿತಿಯ ಸಭೆಗೆ ಅಧ್ಯಕ್ಷತೆ ವಹಿಸಬೇಕೆಂಬ ನೆಪವೊಡ್ಡಿ ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಬುಧವಾರದ ಸಭೆಗೆ ಗೈರಾಗಿದ್ದರು. ಸಭೆಗೆ ಹಾಜರಾ­ಗಲು ಮಮತಾ ಬ್ಯಾನರ್ಜಿ ಅವರಿಗೆ ಸಮಯವಿರಲಿಲ್ಲ ಎಂದು ರಾಜ್ಯ ಸಚಿವಾಲ­ಯದ ಮೂಲಗಳು ತಿಳಿಸಿವೆ. ಮಮತಾ ಬದಲಾಗಿ ರಾಜ್ಯ ಸರಕಾರದ ಹಿರಿಯ ಅಧಿಕಾರಿಯೊಬ್ಬರನ್ನು ಸಭೆಗೆ ಕಳಿಸಲಾಗಿತ್ತು.

ಪಾಲ್ಗೊಂಡಿದ್ದ ರಾಜ್ಯಗಳು
ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ದೆಹಲಿ, ಗುಜರಾತ್‌, ರಾಜಸ್ಥಾನ, ಉತ್ತರ ಪ್ರದೇಶ, ಮಧ್ಯ­ಪ್ರದೇಶ, ಬಿಹಾರ, ಆಂಧ್ರಪ್ರದೇಶ, ಹರ್ಯಾಣ, ತೆಲಂಗಾಣ, ಒಡಿಶಾ- ಈ ರಾಜ್ಯಗಳ ಮುಖ್ಯಮಂತ್ರಿಗಳ ಜತೆಗೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್‌ ಜನರಲ್‌ ಭಾಗಿಯಾಗಿದ್ದರು. ಈ ರಾಜ್ಯಗಳು ಭಾರತದ ಒಟ್ಟು ಶೇ.85 ಸೋಂಕಿನ ಪ್ರಕರಣಗಳನ್ನು ಹೊಂದಿವೆ.

ಮೋದಿ ಹೇಳಿದ್ದೇನು?
– ನಿರ್ಬಂಧ ಸಡಿಲಿಸಿದಷ್ಟು ಆರ್ಥಿಕ ಚಟುವಟಿಕೆಗಳು ಪುನರುಜ್ಜೀವ ಪಡೆಯುತ್ತಿವೆ.

– ಮೂಲಸೌಕರ್ಯ ಮತ್ತು ನಿರ್ಮಾಣ ಸಂಬಂಧಿತ ಯೋಜನೆಗಳನ್ನು ಹೆಚ್ಚಿಸಿ.

– ವಲಸೆ ಕಾರ್ಮಿಕರ ಸಮಸ್ಯೆಗಳನ್ನು ನಿರ್ವಹಿಸುವ ಅಗತ್ಯವಿದೆ.

– ಹೆಚ್ಚೆಚ್ಚು ಕೋವಿಡ್ ಟೆಸ್ಟ್‌ ಗಳನ್ನು ನಡೆಸಿದರೆ ಭವಿಷ್ಯದ ಅಪಾಯ ತಪ್ಪಿಸಬಹುದು.

ಟಾಪ್ ನ್ಯೂಸ್

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.