ಮೂರು ವರ್ಷದಲ್ಲಿ ಪ್ರಯೋಗ ಮಾತ್ರ
Team Udayavani, Sep 5, 2017, 7:50 AM IST
ಮುಂಬೈ/ಪಾಟ್ನಾ: ಕೇಂದ್ರ ಸಂಪುಟದಲ್ಲಿ ಸ್ಥಾನ ಸಿಗದಿರುವ ಬಗ್ಗೆ ಶಿವಸೇನೆ ಅತೃಪ್ತಿ ಮುಂದುವರಿಸಿದೆ. ಕೇಂದ್ರ ಸರ್ಕಾರ ಮೂರು ವರ್ಷಗಳಿಂದ ಪ್ರಯೋಗಗಳನ್ನೇ ನಡೆಸುತ್ತಿದೆ ಎಂದು ಪಕ್ಷ ಟೀಕಿಸಿದೆ. ಇದೇ ವೇಳೆ, ಕೇಂದ್ರ ಸಂಪುಟ ಸೇರುವ ಇರಾದೆಯೇ ಜೆಡಿಯುಗೆ ಇರಲಿಲ್ಲ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.
ಹಾಲಿ ಕೇಂದ್ರ ಸರ್ಕಾರ ಮೂರು ವರ್ಷಗಳಿಂದ ಪ್ರಯೋಗಗಳನ್ನೇ ನಡೆಸುತ್ತಿದೆ ಎಂದು ಶಿವಸೇನೆ ಟೀಕಿಸಿದೆ. ಪಕ್ಷದ ಮುಖವಾಣಿ “ಸಾಮ್ನಾ’ ಸಂಪಾದಕೀಯದಲ್ಲಿ ಈ ಬಗ್ಗೆ ಟೀಕಿಸಲಾಗಿದೆ. ದೇಶವಾಸಿಗಳು ಉತ್ತಮ ದಿನಕ್ಕಾಗಿ ಕಾಯುತ್ತಲೇ ಇದ್ದಾರೆ. ನೂತನ ಸಚಿವರ ಸೇರ್ಪಡೆ ಮತ್ತು ಅವರಿಗೆ ಖಾತೆ ಹಂಚಿಕೆ ಬಿಜೆಪಿಯ ಆಂತರಿಕ ವಿಚಾರ. ದೇಶದ ಭದ್ರತೆ ಮತ್ತು ಅಭಿವೃದ್ಧಿ ವಿಚಾರದಲ್ಲಿ ಸುಮ್ಮನಿರಲು ಸಾಧ್ಯವಿಲ್ಲ. ಹಾಲಿ ಸಂಪುಟ ವಿಸ್ತರಣೆಯಲ್ಲಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರೇ ಆಯ್ಕೆ ಮಾಡಿದವರು ಮಾತ್ರ ಪ್ರಮಾಣ ಸ್ವೀಕರಿಸಿದ್ದಾರೆ ಎಂದಿದೆ.
ವೈಫಲ್ಯ: ಪ್ರಧಾನಿ ಮೋದಿ ಘೋಷಣೆ ಮಾಡಿದ ನೋಟುಗಳ ಅಪನಗದೀಕರಣ ಪೂರ್ಣವಾಗಿ ವಿಫಲ ಹೊಂದಿದೆ. ಹಣದುಬ್ಬರ, ನಿರುದ್ಯೋಗ ಪ್ರಮಾಣ ಹೆಚ್ಚಾಗಿದೆ. ವಯೋಮಿತಿಯ ಕಾರಣದಿಂದ ಕೆಲವರನ್ನು ಸಂಪುಟದಿಂದ ಕೈಬಿಡಲಾಗಿದೆ. ಹಾಗಿದ್ದರೆ, ಪ್ರಧಾನಿ ಮತ್ತು ಬಿಜೆಪಿ ಅಧ್ಯಕ್ಷರೇ ಆಯ್ಕೆ ಮಾಡಿದವರ ಸಾಧನೆ ತೃಪ್ತಿಕರವಾಗಿದೆಯೇ ಎಂದು ಪಕ್ಷ ಪ್ರಶ್ನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು