Explained:ಚೀನಾ ಸೇನೆಗೆ 3ನೇ ಬಾರಿ ಮುಖಭಂಗ: ಸೆಪ್ಟೆಂಬರ್ 7ರಂದು ಗಡಿಯಲ್ಲಿ ನಡೆದಿದ್ದೇನು?

ಮೂಲಗಳ ಪ್ರಕಾರ, ಚೀನಾ ಗಾಲ್ವಾನ್ ಘಟನೆಯನ್ನು ಪುನರಾರ್ತಿಸಲು ಬಯಸುತ್ತಿದೆ.

Team Udayavani, Sep 8, 2020, 11:50 AM IST

Explained:ಚೀನಾ ಸೇನೆಗೆ 3ನೇ ಬಾರಿ ಮುಖಭಂಗ: ಸೆಪ್ಟೆಂಬರ್ 7ರಂದು ಗಡಿಯಲ್ಲಿ ನಡೆದಿದ್ದೇನು?

ನವದೆಹಲಿ:ಪೂರ್ವ ಲಡಾಖ್ ನ ವಾಸ್ತವ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಚೀನಾ ಸೇನೆ ನಡುವೆ ಸಂಘರ್ಷ ಮುಂದುವರಿದಿದೆ. ಗಡಿ ಪ್ರದೇಶದ ಆಯಕಟ್ಟಿನ ಸ್ಥಳದಿಂದ ಹಿಂದೆ ಸರಿಯಲು ಚೀನಾ ಸೇನೆ ನಿರಾಕರಿಸುತ್ತಿದ್ದು, ನಿರಂತರವಾಗಿ ಭಾರತದ ಪ್ರದೇಶದೊಳಕ್ಕೆ ಒಳನುಗ್ಗುವ ಅವಕಾಶಕ್ಕಾಗಿ ಕಾಯುತ್ತಿರುವುದಾಗಿ ವರದಿ ತಿಳಿಸಿದೆ.

ಸೆಪ್ಟೆಂಬರ್ 7ರಂದು ಏನು ನಡೆಯಿತು?

ಸೆಪ್ಟೆಂಬರ್ 7ರಂದು ಸೋಮವಾರ ಲಡಾಖ್ ನ ದಕ್ಷಿಣ ಪ್ಯಾಂಗಾಂಗ್ ಸರೋವರದ ತುದಿಯಲ್ಲಿ ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿ(ಪಿಎಲ್ ಎ) ಒಳನುಗ್ಗಲು ಯತ್ನಿಸಿತ್ತು. ಆದರೆ ವಾಸ್ತವ ನಿಯಂತ್ರಣ ರೇಖೆಯಲ್ಲಿ ಬಿಗಿ ಕಾವಲು ಕಾಯುತ್ತಿದ್ದ ಭಾರತೀಯ ಸೇನಾಪಡೆ ಮತ್ತೊಮ್ಮೆ ಚೀನಾ ಸೇನೆಯನ್ನು ಹಿಮ್ಮೆಟ್ಟಿಸಿತ್ತು. ಇದರೊಂದಿಗೆ ಕಳೆದ 83 ದಿನಗಳಿಂದ ನಡೆಯುತ್ತಿದ್ದ ಗಡಿ ವಿವಾದದಲ್ಲಿ ಚೀನಾ ಸೇನೆಯನ್ನು 3ನೇ ಬಾರಿ ಭಾರತೀಯ ಯೋಧರು ಸಮರ್ಥವಾಗಿ ಸೋಲಿಸಿರುವುದಾಗಿ ವರದಿ ವಿವರಿಸಿದೆ.

ಮೂಲಗಳ ಪ್ರಕಾರ, ಚೀನಾ ಗಾಲ್ವಾನ್ ಘಟನೆಯನ್ನು ಪುನರಾರ್ತಿಸಲು ಬಯಸುತ್ತಿದೆ. ಜೂನ್ 15ರಂದು ನಡೆದಿದ್ದ ಘಟನೆಯಲ್ಲಿ 20 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದರು. ಅದೇ ರೀತಿ ಲಡಾಖ್ ನ ದಕ್ಷಿಣ ಪ್ಯಾಂಗಾಂಗ್ ಸರೋವರ ತುದಿಯ ಶೇನ್ ಪಾವೋ ಪರ್ವತ ಪ್ರದೇಶ (ಗಾಡ್ ಪಾವೋ ಹಿಲ್)ದಲ್ಲಿ ಘಟನೆ ನಡೆದಿತ್ತು. ಪರ್ವತ ಶ್ರೇಣಿ ಪ್ರದೇಶದ ಪ್ರಮುಖ ಆಯಕಟ್ಟಿನ ಸ್ಥಳವನ್ನು ತಮ್ಮ ವಶಕ್ಕೆ ತೆಗೆದುಕೊಳ್ಳಲು ಚೀನಾ ಸೇನೆ ದೊಡ್ಡ ಪ್ರಮಾಣದಲ್ಲಿ ಜಮಾವಣೆಗೊಂಡಿರುವುದಾಗಿ ವರದಿ ವಿವರಿಸಿದೆ.

ಚೀನಾ ಪಡೆ ಕಬ್ಬಿಣದ ರಾಡ್ ಹಾಗೂ ಬ್ಯಾಟ್ ಗಳನ್ನು ಹಿಡಿದುಕೊಂಡು ಬಂದಿದ್ದು, ಈ ಸಂದರ್ಭದಲ್ಲಿ ಪರ್ವತ ಶ್ರೇಣಿಯಲ್ಲಿದ್ದ ಭಾರತೀಯ ಸೇನಾ ಪಡೆ ಕೂಡಲೇ ಚೀನಾ ಪಡೆಗೆ ಹಿಂದೆ ಸರಿಯಲು ಸೂಚನೆ ನೀಡಿತ್ತು. ಆದರೂ ಚೀನಾ ಪಡೆ ಮುನ್ನುಗ್ಗಿ ಬಂದ ವೇಳೆ ಭಾರತೀಯ ಸೇನೆ “ ಎಚ್ಚರಿಕೆಯ ದಾಳಿ (ವಾರ್ನಿಂಗ್ ಶಾಟ್) ನಡೆಸಿರುವುದಾಗಿ ತಿಳಿಸಿದೆ.

ಸುಳ್ಳು ಬುರುಕ ಚೀನಾ!

ಸೋಮವಾರ (ಸೆಪ್ಟೆಂಬರ್ 7, 2020) ರಾತ್ರಿ ನಡೆದ ಗುಂಡಿನ ಚಕಮಕಿಯ ಘಟನೆಯನ್ನು ಚೀನಾ ತಿರುಚಿ ಹೇಳಿಕೆ ನೀಡತೊಡಗಿದೆ. ಚೀನಾ ಪಡೆ ಮುನ್ನುಗ್ಗಿ ಬಂದಾಗ ಭಾರತೀಯ ಸೇನೆ ಎಚ್ಚರಿಕೆಯ ದಾಳಿ ನಡೆಸಿತ್ತು. ಆದರೆ ಚೀನಾ, ಭಾರತೀಯ ಸೇನೆ ಎಲ್ ಎಸಿ ದಾಟಿ ನಡೆಸಿದ ಎಚ್ಚರಿಕೆ ದಾಳಿಗೆ ಪ್ರತಿಯಾಗಿ ಕ್ರಮ ಕೈಗೊಂಡಿರುವುದಾಗಿ ತನ್ನ ತಪ್ಪನ್ನು ಮುಚ್ಚಿಹಾಕಲು ಯತ್ನಿಸಿರುವುದಾಗಿ ವರದಿ ತಿಳಿಸಿದೆ.

ಚೀನಾದ ವೆಸ್ಟರ್ನ್ ಕಮಾಂಡ್, ಕರ್ನಲ್ ಝಾಂಗ್ ಶಿಯುಲಿ, ಭಾರತೀಯ ಸೇನಾ ಪಡೆ ಪ್ಯಾಂಗಾಂಗ್ ತ್ಸೋ ಸರೋವರದ ದಕ್ಷಿಣ ಪ್ರದೇಶದ ಶೇನ್ ಪಾವೋ ಪ್ರರ್ವತ ಸಮೀಪ ವಾಸ್ತವ ನಿಯಂತ್ರಣ ರೇಖೆ ದಾಳಿ ನಡೆಸಿ ಪ್ರಚೋದನಕಾರಿ ನಡವಳಿಕೆ ತೋರಿರುವುದಾಗಿ ಆರೋಪಿಸಿದ್ದಾರೆ.

ಭಾರತೀಯ ಸೇನೆಯ ಈ ಕ್ರಮ ಉಭಯ ದೇಶಗಳ ಒಪ್ಪಂದದ ಉಲ್ಲಂಘನೆಯಾಗಿದೆ. ಇದರಿಂದಾಗಿ ಎರಡು ದೇಶಗಳ ನಡುವೆ ಸಂಘರ್ಷಕ್ಕೆ ಎಡೆ ಮಾಡಿಕೊಡಲಿದೆ. ಅಲ್ಲದೇ ಅಪಾರ್ಥಕ್ಕೆ ಕಾರಣವಾಗಲಿದೆ ಎಂದು ಚೀನಾ ಪ್ರತಿಕ್ರಿಯೆ ನೀಡಿದೆ.

ಚೀನಾದ ಆರೋಪ ಅಲ್ಲಗಳೆದ ಭಾರತ:

ವಾಸ್ತವ ನಿಯಂತ್ರಣ ರೇಖೆಯಲ್ಲಿ ಭಾರತ ಯಾವುದೇ ಪ್ರಚೋದನಕಾರಿ ನಡವಳಿಕೆ ತೋರಿಲ್ಲ ಎಂದು ಪ್ರತಿಕ್ರಿಯೆ ನೀಡಿರುವ ಭಾರತ, ಚೀನಾದ ಆರೋಪವನ್ನು ಅಲ್ಲಗಳೆದಿರುವುದಾಗಿ ಸರ್ಕಾರದ ಮೂಲಗಳನ್ನು ಉಲ್ಲೇಖಿಸಿ ನ್ಯೂಸ್ 18 ವರದಿ ಮಾಡಿದೆ.

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.