ಕೋಲ್ಕತ-ಮುಂಬಯಿ ಶಾಲಿಮಾರ್ ಎಕ್ಸ್ಪ್ರೆಸ್ ರೈಲಲ್ಲಿ ಸ್ಫೋಟಕದಂತಹ ವಸ್ತು ಪತ್ತೆ
Team Udayavani, Jun 5, 2019, 6:23 PM IST
ಮುಂಬಯಿ : ಕೋಲ್ಕತ-ಮುಂಬಯಿ ಶಾಲಿಮಾರ್ ಎಕ್ಸ್ಪ್ರೆಸ್ ರೈಲು ಇಂದು ಬುಧವಾರ ಇಲ್ಲಿಗೆ ಆಗಮಿಸಿದಾಗ ಅದರೊಳಗೆ ಸ್ಫೋಟಕ ರೀತಿ ವಸ್ತು ಪತ್ತೆಯಾಯಿತು ಎಂದು ರೈಲ್ವೇ ಮತ್ತು ನಗರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ರೈಲನ್ನು ಕುರ್ಲಾ ಕಾರ್ ಶೆಡ್ ನಲ್ಲಿ ಸ್ವಚ್ಚಗೊಳಿಸುತ್ತಿದ್ದಾಗ ಏಳು ಪ್ಲಾಸ್ಟಿಕ್ ಪೈಪ್ ಗಳು ಕಂಡು ಬಂದವು. ಈ ಪ್ಲಾಸ್ಟಿಕ್ ಪೈಪೊಳಗೆ ಸುಡುಮದ್ದು ಪುಡಿಯಂತಹ ವಸ್ತು ತುಂಬಿತ್ತು. ಇವುಗಳನ್ನು ವೈರ್ ಮೂಲಕ ಬ್ಯಾಟರಿಗೆ ಜೋಡಿಸಲಾಗಿತ್ತು ಎಂದು ಮುಂಬಯಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಈ ಪ್ಲಾಸ್ಟಿಕ್ ಪೈಪುಗಳ ಜತೆಗೆ ಮೊಬೈಲ್ ನಂಬರ್ ಮತ್ತು ಅಪರಿಚಿತ ವ್ಯಕ್ತಿಯೊಬ್ಬನ ಫೋ ಟೋ ಇರುವ ಪತ್ರವೊಂದು ಪತ್ತೆಯಾಗಿದೆ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ತಿಲಕನಗರ ಪೊಲೀಸ್ ಠಾಣೆ ಹಿರಿಯ ಇನ್ಸ್ಪೆಕ್ಟರ್ ಸುಶೀಲ್ ಕಾಂಬ್ಳೆ ತಿಳಿಸಿದ್ದಾರೆ.
ನಾವು ಪತ್ರವನ್ನು ಸೂಕ್ಷ್ಮ ವಾಗಿ ಪರಿಶೀಲಿಸುತ್ತಿದ್ದು ಅದರಲ್ಲಿರುವ ಮೊಬೈಲ್ ನಂಬರ್ ಸಂಪರ್ಕಿಸುವ ಯತ್ನ ಮಾಡುತ್ತಿದ್ದೇವೆ ಎಂದವರು ಹೇಳಿದರು.
ಜಿಲೆಟಿನ್ ಕಡ್ಡಿಗಳಂತೆ ಕಂಡು ಬಂದಿದ್ದ ಶಂಕಿತ ವಸ್ತುಗಳು ಅನಂತರ ಪ್ಲಾಸ್ಟಿಕ್ ಪೈಪುಗಳೆಂಬುದು ಖಚಿತವಾಯಿತು ಎಂದು ಕಾಂಬ್ಳೆ ಹೇಳಿದರು.
ವಶಪಡಿಸಿಕೊಳ್ಳಲಾಗಿರುವ ವಸ್ತುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದವರು ಹೇಳಿದರು.
ಶಾಲಿಮಾರ್ ಎಕ್ಸ್ಪ್ರೆಸ್ ಇಂದು ಬುಧವಾರ ಬೆಳಗ್ಗೆ 7.30ಕ್ಕೆ ಲೋಕಮಾನ್ಯ ತಿಲಕ ಟರ್ಮಿನಸ್ಗೆ ಆಗಮಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ