ಡಿಕೆಶಿ ಮತ್ತೆ ತಿಹಾರ್ ಗೆ: ಅ.15ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ
Team Udayavani, Oct 1, 2019, 2:46 PM IST
ಹೊಸದಿಲ್ಲಿ: ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಅವರ ನ್ಯಾಯಾಂಗ ಬಂಧನವನ್ನು ಅಕ್ಟೋಬರ್ 15 ವರೆಗೆ ವಿಸ್ತರಿಸಲಾಗಿದೆ.
ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಗೆ ಇಡಿ ಅಧಿಕಾರಿಗಳು ಇಂದು ಡಿಕೆ ಶಿವಕುಮಾರ್ ಅವರನ್ನು ಹಾಜರುಪಡಿಸಿದರು. ಕೋರ್ಟ್ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿದೆ.
ಅಕ್ಟೋಬರ್ 4 ಮತ್ತು 5ರಂದು ಇಡಿ ಅಧಿಕಾರಿಗಳು ಡಿಕೆಶಿ ಅವರನ್ನು ವಿಚಾರಣೆ ನಡೆಸಲು ಕೋರ್ಟ್ ಅವಕಾಶ ನೀಡಿದೆ.