ಕಾಶ್ಮೀರ: ಅಮರನಾಥ ಯಾತ್ರಿಗಳು ಹಿಂದಿರುಗಲು ಹೆಚ್ಚುವರಿ ವಿಮಾನ ಸೌಲಭ್ಯ
Team Udayavani, Aug 3, 2019, 8:59 AM IST
ಶ್ರೀನಗರ: ಅಮರನಾಥ ಯಾತ್ರಿಗಳ ಮೇಲೆ ಉಗ್ರರ ಕೆಂಗಣ್ಣು ಬಿದ್ದ ಹಿನ್ನಲೆಯಲ್ಲಿ ಕೇಂದ್ರ ಸರಕಾರ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಿದೆ. ಅಪಾರ ಸಂಖ್ಯೆಯಲ್ಲಿ ಕಣಿವೆ ರಾಜ್ಯಕ್ಕೆ ತೆರಳಿರುವ ಯಾತ್ರಾರ್ಥಿಗಳು ತುರ್ತಾಗಿ ಹಿಂದಿರುಗಲು ಅನುಕೂಲವಾಗುವಂತೆ ಹೆಚ್ಚುವರಿ ವಿಮಾನ ಸೌಲಭ್ಯ ಮಾಡಲಾಗಿದೆ.
ಅಮರನಾಥ ಯಾತ್ರೆಯ ಮಾರ್ಗದಲ್ಲಿ ಪಾಕಿಸ್ಥಾನ ನಿರ್ಮಿತ ಬಾಂಬ್ ಗಳು, ಸ್ನೈಪರ್ ರೈಫಲ್ ಹಾಗೂ ಇನ್ನಿತರ ಸ್ಪೋಟಕಗಳು ಪತ್ತೆಯಾಗಿದ್ದವು. ಭದ್ರತೆಯ ದೃಷ್ಠಿಯಿಂದ ಯಾತ್ರಿಕರು ಮತ್ತು ಪ್ರವಾಸಿಗರನ್ನು ರಾಜ್ಯದಿಂದ ಹೊರಹೋಗುವಂತೆ ತಿಳಿಸಲಾಗಿದೆ.
ಎಲ್ಲಾ ಭಾರತೀಯ ವಿಮಾನಯಾನ ಸಂಸ್ಥೆಗಳು ಅಮರನಾಥ ಯಾತ್ರಿಗಳನ್ನು ಅಲ್ಲಿಂದ ಕರೆತರಲು ಶ್ರೀನಗರಕ್ಕೆ ಹೆಚ್ಚುವರಿ ವಿಮಾನಗಳನ್ನು ಹಾರಿಸಲು ಸಿದ್ದವಿರಬೇಕು ಎಂದು ಡಿಜಿಸಿಎ ಆದೇಶ ಹೊರಡಿಸಿದ್ದಾರೆ.
ಭಾರತೀಯ ವಿಮಾನಯಾನ ಸಂಸ್ಥೆಗಳಾದ ಏರ್ ಇಂಡಿಯಾ, ಗೋ ಏರ್ ಈ ಬೆಳವಣಿಗೆಗೆ ಸ್ಪಂದಿಸಿದ್ದು,ಕ್ರಮವಾಗಿ ಆಗಸ್ಟ್ 15 ಮತ್ತು ಆಗಸ್ಟ್ 9ರವರೆಗೆ ಕಾಶ್ಮೀರಕ್ಕೆ ಹೋಗುವ ಮತ್ತು ಅಲ್ಲಿಂದ ಬರುವ ಯಾತ್ರಿಗಳ ಟಿಕೆಟ್ ನ ಬದಲಿ ಮತ್ತು ರದ್ದತಿಗೆ ಶುಲ್ಕ ಮನ್ನಾ ಮಾಡಲು ನಿರ್ಧರಿಸಿದೆ.
ಇಂಡಿಗೂ ಮತ್ತು ವಿಸ್ತಾರ ಸಂಸ್ಥೆಗಳು ಕೂಡ ಟಿಕೆಟ್ ರದ್ದತಿ ಮತ್ತು ಬದಲಿಸಲು ಶುಲ್ಕ ಮನ್ನಾ ಮಾಡಲು ನಿರ್ಧರಿಸಿದ್ದು, ಆಗಸ್ಟ್ 9ರವರೆಗೆ ಶುಲ್ಕ ವಿಧಿಸದೇ ಇರಲು ನಿರ್ಧರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್