ಉಗ್ರ ಯಾಸಿನ್ ಮಲಿಕ್ ಖುದ್ದು ಹಾಜರು: ಕೇಂದ್ರ ಕಳವಳ
Team Udayavani, Jul 22, 2023, 7:19 AM IST
ನವದೆಹಲಿ: ಯಾವುದೇ ಆದೇಶ ಇಲ್ಲದಿದ್ದರೂ ಜಮ್ಮು ಮತ್ತು ಕಾಶ್ಮೀರ ಲಿಬರೇಷನ್ ಫ್ರಂಟ್(ಜೆಕೆಎಲ್ಎಫ್) ಕಮಾಂಡರ್, ಉಗ್ರ ಯಾಸಿನ್ ಮಲಿಕ್ ಶುಕ್ರವಾರ ಸುಪ್ರೀಂ ಕೋರ್ಟ್ ಎದುರು ಖುದ್ದು ಹಾಜರಾದರು. ಯಾಸಿನ್ ಮಲಿಕ್ ಖುದ್ದು ಹಾಜರಾತಿ ಕುರಿತು ಕಳವಳ ವ್ಯಕ್ತಪಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಈ ಕುರಿತು ಸುಪ್ರೀಂ ಕೋರ್ಟ್ ಗಮನ ಸೆಳೆದರು.
ನ್ಯಾ. ಸೂರ್ಯಕಾಂತ್ ಮತ್ತು ನ್ಯಾ. ದೀಪಂಕರ್ ದತ್ತ ಅವರಿದ್ದ ನ್ಯಾಯಪೀಠ, ಈ ವಿಷಯವನ್ನು ಪರಿಗಣಿಸಲು ನಿರಾಕರಿಸಿತು. ಆದರೆ ಖುದ್ದು ಹಾಜರಿಯ ಯಾವುದೇ ಆದೇಶ ನೀಡಿಲ್ಲ ಎಂದು ಸ್ಪಷ್ಟಪಡಿಸಿತು. ಕಾರಾಗೃಹದಿಂದ ಮಲಿಕ್ ಹೊರಗೆ ಕರೆತರದಂತೆ ಕೇಂದ್ರ ಗೃಹ ಸಚಿವಾಲಯ ಈ ಹಿಂದೆಯೇ ಆದೇಶ ಹೊರಡಿಸಿದೆ. ಇದೇ ವೇಳೆ, “ಇದೊಂದು ಗಂಭೀರ ಭದ್ರತಾ ವಿಷಯ’ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಹೇಳಿದರು. ನಾಲ್ವರು ಐಎಎಫ್ ಅಧಿಕಾರಿಗಳ ಹತ್ಯೆ ಮತ್ತು 1989ರ ರುಬಯ್ಯ ಸಯೀದ್ ಅಪಹರಣ ಪ್ರಕರಣದಲ್ಲಿ ಮಲಿಕ್ ಖುದ್ದು ಹಾಜರಿಗೆ ಜಮ್ಮು ಕೋರ್ಟ್ ಆದೇಶಿಸಿತು. ಆದರೆ ಸುಪ್ರೀಂ ಕೋರ್ಟ್ ಈ ಆದೇಶಕ್ಕೆ ತಡೆ ನೀಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು