ರಾಮ ಮಂದಿರಕ್ಕೆ ಪ್ರತಿಯಾಗಿ ವಿಷ್ಣು ಸಿಟಿ
Team Udayavani, Aug 23, 2018, 6:00 AM IST
ಲಕ್ನೋ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಮ ಮಂದಿರ ವಿಚಾರ ಪ್ರಸ್ತಾಪಗೊಳ್ಳುತ್ತಿದೆ. ಅದಕ್ಕೆ ಪ್ರತಿಯಾಗಿ ಸಮಾಜವಾದಿ ಪಕ್ಷ ಹೊಸದೊಂದು ಯೋಜನೆ ರೂಪಿಸಿದೆ. ಉತ್ತರ ಪ್ರದೇಶದ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ಇಟಾವಾ ಸಮೀಪ ಇರುವ ಲಯನ್ ಸಫಾರಿ ಎಂಬಲ್ಲಿರುವ 2 ಸಾವಿರ ಎಕರೆ ಪ್ರದೇಶದಲ್ಲಿ ವಿಷ್ಣು ನಗರ ನಿರ್ಮಿಸುವುದಾಗಿ ಮಾಜಿ ಸಿಎಂ ಅಖೀಲೇಶ್ ಯಾದವ್ ಹೇಳಿದ್ದಾರೆ. ಅದಕ್ಕೆ ಕಾಂಬೋಡಿ ಯಾದಲ್ಲಿರುವ ಅಂಕುರ್ ವಾಟ್ ದೇಗುಲದ ಸ್ಫೂರ್ತಿಯಾಗಲಿದೆ ಎಂದು ಹೇಳಿದ್ದಾರೆ. ಉತ್ತರ ಪ್ರದೇಶ ಡಿಸಿಎಂ ಕೇಶವ ಪ್ರಸಾದ್ ಮೌರ್ಯ ರಾಮ ಮಂದಿರ ನಿರ್ಮಾಣಕ್ಕೆ ಅಗತ್ಯ ಬಿದ್ದರೆ ಕಾನೂನು ದಾರಿ ಹಿಡಿಯಲಾಗುತ್ತದೆ ಎಂದು ಹೇಳಿದ ಬೆನ್ನಲ್ಲೇ ಈ ಹೇಳಿಕೆ ಹೊರಬಿದ್ದಿದೆ.