ರಾಮ ಜನಿಸಿದ್ದಕ್ಕೆ ನಂಬಿಕೆಯೇ ಸಾಕ್ಷಿ
Team Udayavani, Aug 8, 2019, 5:45 AM IST
ನವದೆಹಲಿ: ರಾಮಜನ್ಮಭೂಮಿ ಪ್ರಕರಣದ ದೈನಂದಿನ ವಿಚಾರಣೆ ಆರಂಭವಾದ ಎರಡನೇ ದಿನವಾದ ಬುಧವಾರ ಸುಪ್ರೀಂಕೋರ್ಟ್ನಲ್ಲಿ ಮಹತ್ವದ ವಾದ ವಿವಾದ ನಡೆದಿದ್ದು, ಅಯೋಧ್ಯೆಯಲ್ಲೇ ರಾಮ ಜನಿಸಿದ್ದ ಎಂಬುದಕ್ಕೆ ಕೋಟ್ಯಂತರ ಜನರ ನಂಬಿಕೆಯೇ ಸಾಕ್ಷಿ ಎಂದು ರಾಮ್ ಲಲ್ಲಾ ವಿರಾಜಮಾನ್ ಪರ ವಕೀಲ ಕೆ.ಪರಾಶರನ್ ಹೇಳಿದ್ದಾರೆ. ಇನ್ನೊಂದೆಡೆ ರಾಮ ಜನ್ಮಭೂಮಿ ತನ್ನದು ಎಂದು ಹೇಳಿಕೊಳ್ಳುತ್ತಿರುವ ನಿರ್ಮೋಹಿ ಅಖಾಡಕ್ಕೆ ದಾಖಲೆ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ಅಖಾಡ ದಾಖಲೆಗಳು ಕಳೆದುಹೋಗಿದೆ ಎಂದು ಉತ್ತರಿಸಿತು.
ಹಲವು ಶತಮಾನಗಳ ನಂತರ ರಾಮ ಜನಿಸಿದ ಬಗ್ಗೆ ಸಾಕ್ಷಿಯನ್ನು ಕೊಡುವುದು ಹೇಗೆ ಸಾಧ್ಯ. ಜನರ ನಂಬಿಕೆಯೇ ರಾಮ ಇಲ್ಲಿ ಜನಿಸಿದ್ದ ಎಂಬುದಕ್ಕೆ ಸಾಕ್ಷಿ. ವಾಲ್ಮೀಕಿ ರಾಮಾಯಣದಲ್ಲೂ ರಾಮ ಅಯೋಧ್ಯೆಯಲ್ಲಿ ಜನಿಸಿದ್ದಾನೆ ಎಂಬುದನ್ನು ಉಲ್ಲೇಖೀಸಲಾಗಿದೆ ಎಂದು ಕೆ ಪರಾಶರನ್ ಹೇಳಿದರು. ಈ ಹಿಂದೆ ಕ್ರಿಸ್ತ ಬೆತ್ಲೆಹೆಮ್ನಲ್ಲೇ ಜನಿಸಿದ್ದಾರೆ ಎಂಬುದನ್ನು ಪ್ರಶ್ನಿಸಲಾಗಿತ್ತೇ ಮತ್ತು ವಿಶ್ವದ ಯಾವುದೇ ಕೋರ್ಟ್ನಲ್ಲಿ ಈ ರೀತಿಯ ಪ್ರಕರಣ ನಡೆದಿತ್ತೇ? ಆಗ ಯಾವ ರೀತಿ ಇದನ್ನು ನಿರ್ವಹಿಸಲಾಗಿತ್ತು ಎಂದು ಸುಪ್ರೀಂಕೋರ್ಟ್ ಪ್ರಶ್ನಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ