ಜನಸಂಖ್ಯಾ ಸ್ಫೋಟಕ್ಕೆ ಕಡಿವಾಣ ಹಾಕಬೇಕಾಗಿದೆ, ಕುಟುಂಬ ಯೋಜನೆ ನಿಜವಾದ ದೇಶಭಕ್ತಿ; ಮೋದಿ
Team Udayavani, Aug 15, 2019, 3:07 PM IST
ನವದೆಹಲಿ:ದೇಶದ ಅಭಿವೃದ್ಧಿ ಒಂದೆಡೆಯಾದರೆ, ಮತ್ತೊಂದೆಡೆ ದೇಶದಲ್ಲಿ ಜನಸಂಖ್ಯಾ ಸ್ಫೋಟದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಕೆಂಪುಕೋಟೆಯಲ್ಲಿ 73ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತ ಕಳವಳ ವ್ಯಕ್ತಪಡಿಸಿದ ಅವರು ಈ ಸಮಸ್ಯೆಯನ್ನು ನಿಯಂತ್ರಿಸುವ ಅಗತ್ಯವಿದೆ ಎಂದು ಹೇಳಿದರು.
ಇಂದು ನಾನು ಮುಖ್ಯವಾದ ವಿಷಯದ ಬಗ್ಗೆ ಮಾತನಾಡಬೇಕಾಗಿದೆ. ಅದು ದೇಶದ ಜನಸಂಖ್ಯೆಯಲ್ಲಿನ ಹೆಚ್ಚಳ. ನಾವು ಇದರ ಬಗ್ಗೆ ಅಲೋಚಿಸಬೇಕು. ನಿಜಕ್ಕೂ ನಮ್ಮ ಮಕ್ಕಳ ಆಕಾಂಕ್ಷೆಗಳಿಗೆ ನ್ಯಾಯ ಕೊಡಲು ಸಾಧ್ಯವಿದೆಯೇ? ಈ ಸಮಸ್ಯೆ ಬಗ್ಗೆ ದೊಡ್ಡ ಪ್ರಮಾಣದಲ್ಲಿ ಚರ್ಚೆ ನಡೆಯಬೇಕಾದ ಅಗತ್ಯವಿದೆ. ಅಷ್ಟೇ ಅಲ್ಲ ಜನಸಂಖ್ಯಾ ಸ್ಫೋಟದ ಬಗ್ಗೆ ಅರಿವು ಮೂಡಿಸಬೇಕಾಗಿದೆ ಎಂದರು.
ದೇಶದಲ್ಲಿನ ಜನಸಂಖ್ಯಾ ಸ್ಫೋಟದಿಂದ ಭವಿಷ್ಯದಲ್ಲಿ ನಮ್ಮ ಮುಂದಿನ ಜನಾಂಗ ಹಲವು ಸಮಸ್ಯೆಗಳನ್ನು ಎದುರಿಸುವಂತಾಗಲಿದೆ. ಈ ನಿಟ್ಟಿನಲ್ಲಿ ಜನಸಂಖ್ಯಾ ಸ್ಫೋಟದ ಬಗ್ಗೆ ನಮಗೆ ಕಳವಳ ಇದ್ದಿರುವುದಾಗಿ ಈ ಸಂದರ್ಭದಲ್ಲಿ ಮೋದಿ ಹೇಳಿದರು.
ಜನಸಂಖ್ಯೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರ ಕೂಡಾ ಕ್ರಮ ಕೈಗೊಳ್ಳಬೇಕಾಗಿದೆ. ಕುಟುಂಬ ನಿಯಂತ್ರಣ ಯೋಜನೆಯೇ ನಿಜವಾದ ದೇಶಭಕ್ತಿ ಎಂದು ಪ್ರಧಾನಿ ಈ ಸಂದರ್ಭದಲ್ಲಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು