ಪಟ್ಟುಬಿಡದ ರೈತರು: 7ನೇ ಸುತ್ತಿನ ಮಾತುಕತೆ ವಿಫಲ; ಮುಂದಿನ ಸಭೆ ಜ.8ಕ್ಕೆ ನಿಗದಿ
Team Udayavani, Jan 4, 2021, 8:00 PM IST
ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆ ತಾರಕಕ್ಕೇರಿದೆ. ಇಂದು (ಜ.4) ಕೇಂದ್ರ ಸರ್ಕಾರ ಜೊತೆಗೆ ರೈತ ಸಂಘಟನೆಗಳು ನಡೆಸಿದ 7ನೇ ಸುತ್ತಿನ ಮಾತುಕತೆ ಕೂಡ ವಿಫಲವಾಗಿದೆ.
ಇಂದಿನ ಸಭೆಯಲ್ಲಿ, ರೈತ ಪ್ರತಿನಿಧಿಗಳು, ಸರ್ಕಾರ ನೀಡುವ ತಿದ್ದುಪಡಿಯ ಆಯ್ಕೆಯನ್ನು ಒಪ್ಪಿಕೊಳ್ಳಲು ನಿರಾಕರಿಸಿದರು. ಮಾತ್ರವಲ್ಲದೆ ಜನವರಿ 26ರ ಗಣರಾಜ್ಯೋತ್ಸವದಂದು ರ್ಯಾಲಿ ನಡೆಸುವುದಾಗಿ ತಿಳಿಸಿದ್ದಾರೆ. ಏತನ್ಮಧ್ಯೆ ಮುಂದಿನ ಮಾತುಕತೆ ಜನವರಿ 8ಕ್ಕೆ ನಿಗದಿಯಾಗಿದೆ.
ಇಂದಿನ ಮಾತುಕತೆಯಲ್ಲಿ ಸರ್ಕಾರದ ಪರವಾಗಿ ಕೆಂದ್ರ ಮಂತ್ರಿಗಳಾದ ನರೇಂದ್ರ ಸಿಂಗ್ ತೋಮರ್, ಪಿಯೂಷ್ ಗೋಯಲ್, ಸೋಮ್ ಪ್ರಕಾಶ್ ಹಾಜರಿದ್ದರು. ಈ ಸಂದರ್ಭದಲ್ಲಿ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸುವುದನ್ನು ಸರ್ಕಾರ ಸಂಪೂರ್ಣವಾಗಿ ತಳ್ಳಿಹಾಕಿತು.
ಇದನ್ನೂ ಓದಿ: ಭಾರತದಲ್ಲಿ ರೂಪಾಂತರಿ ಕೋವಿಡ್ ಭೀತಿ: ಒಟ್ಟು 38 ಜನರಲ್ಲಿ ಸೋಂಕು ಪತ್ತೆ
ಮೂರು ಕಾಯ್ದೆಗಳನ್ನು ಷರತ್ತುಗಳ ಮೂಲಕ ಜಾರಿಗೆ ತರುತ್ತೇವೆ. ಆದರೇ ಅದನ್ನು ಹಿಂಪಡೆಯಲಾಗುವುದಿಲ್ಲ ಎಂದು ಸರ್ಕಾರ ತಿಳಿಸಿದೆ. ಅದಾಗ್ಯೂ ಫ್ರತಿಭಟನೆಯನ್ನು ಹಿಂಪಡೆಯುವಂತೆ ಮಾಡಲು ಸರ್ಕಾರದ ಬಳಿ ಒಂದೇ ದಾರಿಯಿದ್ದು, ಅದು ಕಾನೂನುಗಳನ್ನು ಹಿಂತೆಗೆದುಕೊಳ್ಳುವುದು ಮತ್ತು ಕನಿಷ್ಠ ಬೆಂಬಲ ಬೆಲೆಗಳನ್ನು ಖಾತರಿಪಡಿಸುವ ಕಾನೂನನ್ನು ತರುವುದು ಎಂದು ಕೃಷಿ ಮುಖಂಡ ಜೋಗಿಂದರ್ ಸಿಂಗ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಮಾತುಕತೆಯ ಸಂದರ್ಭದಲ್ಲಿ ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್ ಹಾಗೂ ಪಿಯೂಷ್ ಗೋಯಲ್ ಸೇರಿದಂತೆ ಹಲವರು, ಪ್ರತಿಭಟನೆಯ ವೇಳೆ ಮೃತಪಟ್ಟ ರೈತರಿಗಾಗಿ ಸಂತಾಪ ಸೂಚಿಸಿದರು.
ಇದನ್ನೂ ಓದಿ: ತನ್ನ ಊರಿನ ಸಮಸ್ಯೆ ಹೇಳಲು ಬಂದ ಗ್ರಾ.ಪಂ.ಸದಸ್ಯನನ್ನು ವೇದಿಕೆಯಿಂದ ಕೆಳಗಿಳಿಸಿದ ಸಿದ್ದರಾಮಯ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ