ರೈತರ ಪ್ರತಿಭಟನೆ :ಜಂತರ್ ಮಂತರ್ ನಲ್ಲಿ ನಮ್ಮದೇ ಸಂಸತ್ ಅಧಿವೇಶನ ಮಾಡ್ತೇವೆ ಎಂದ ರೈತ ಮುಖಂಡರು
ನಮಗೆ ಗೂಂಡಾಗಳೊಂದಿಗೆ ಏನು ಮಾಡುವುದಕ್ಕೆ ಸಾಧ್ಯವಿದೆ..? : ಕೇಂದ್ರದ ವಿರುದ್ಧ ಟಿಕಾಯತ್ ಗುಡುಗು
Team Udayavani, Jul 22, 2021, 10:55 AM IST
ನವ ದೆಹಲಿ : ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ಸಂಯುಕ್ತ ಕಿಸಾನ್ ಮೋರ್ಚಾ ನೇತೃತ್ವದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಮತ್ತೆ ಈಗ ಕಾವು ಪಡೆದುಕೊಂಡಿದ್ದು, ಇಂದು( ಗುರುವಾರ, ಜುಲೈ 22) ಸಿಂಘು ಗಡಿಯಿಂದ ರಾಷ್ಟ್ರ ರಾಜಧಾನಿ ನವ ದೆಹಲಿಯ ಜಂತರ್ ಮಂತರ್ ಗೆ ಬಸ್ ಗಳ ಮೂಲಕ ಸುಮಾರು 200 ಕ್ಕೂ ಅಧಿಕ ಮಂದಿ ಕೃಷಿಕರು ಪ್ರತಿಭಟನೆ ಮಾಡುವುದಕ್ಕೆ ಆಗಮಿಸಲಿರುವ ಹಿನ್ನೆಲೆಯಲ್ಲಿ ನವ ದೆಹಲಿಯ ಸುತ್ತಾ ಮುತ್ತ ಬಿಗಿ ಪೊಲೀಸ್ ಬಂದೋಸ್ತ್ ಮಾಡಲಾಗಿದೆ.
ಇಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 5 ರ ತನಕ ಪ್ರತಿಭಟನೆ ನಡೆಸಲಿದ್ದು, ಟ್ರಾಕ್ಟರ್ ರ್ಯಾಲಿಯ ಸಂದರ್ಭದಲ್ಲಿ ಜನವರಿ 26 ರಂದು ಕೆಂಪುಕೋಟೆಯ ನಡೆದ ಹಿಂಸಾಚಾರದ ನಂತರ ಇದೇ ಮೊದಲ ಬಾರಿಗೆ ನಗರದಲ್ಲಿ ಪ್ರತಿಭಟನೆ ನಡೆಸಲು ಪ್ರತಿಭಟನಾ ನಿರತ ರೈತ ಸಂಘಗಳಿಗೆ ಅಧಿಕಾರಿಗಳು ಅನುಮತಿ ನೀಡಿದ್ದಾರೆ.
ಇದನ್ನೂ ಓದಿ : ಕೇಂದ್ರ ಹೇಳಿದಂತೆ ಕೇಳುತ್ತೇನೆ, ಶ್ರೀಗಳು ಸಹಕಾರ ನೀಡಬೇಕು: ರಾಜೀನಾಮೆ ಸುಳಿವು ನೀಡಿದ BSY
ಜಂತರ್ ಮಂತರ್ ನಲ್ಲಿ ನಾವು ನಮ್ಮದೇ ಸಂಸತ್ ಅಧಿವೇಶನ ಮಾಡ್ತೇವೆ : ಟಿಕಾಯತ್
ರಾಷ್ಟ್ರೀಯ ಸುದ್ದಿ ಸಂಸ್ಥಗಳೊಂದಿಗೆ ಮಾತನಾಡಿದ ಸಂಯುಕ್ತ ಕಿಸಾನ್ ಮೋರ್ಚಾ ದ ಅಧ್ಯಕ್ಷ ರಾಕೇಶ್ ಟಿಕಾಯತ್, ಜಂತರ್ ಮಂತರ್ ಸಂಸತ್ ನಿಂದ ಕೇವಲ 150 ಮೀಟರ್ ದೂರದಲ್ಲಿ ಇದೆ. ನಾವು ಜಂತರ್ ಮಂತರ್ ನಲ್ಲಿ ನಮ್ಮದೇ ಸಂಸತ್ ನನ್ನು ರಚಿಸಿ ಚರ್ಚೆ ಮಾಡುತ್ತೇವೆ ಎಂದಿದ್ದಾರೆ.
ಇನ್ನು, ಜನವರಿ 26 ರ ಗಣರಾಜ್ಯೋತ್ಸವದ ದಿನದಂದು ನಡೆದ ಹಿಂಸಾಚರದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಮಗೆ ಗೂಂಡಾಗಳೊಂದಿಗೆ ಏನು ಮಾಡುವುದಕ್ಕೆ ಸಾಧ್ಯವಿದೆ..? ನಾವು ದುಷ್ಕರ್ಷಿಗಳಾ..? ನಾವು ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ. ಕೇಂದ್ರ ಸರ್ಕಾರ ಕೃಷಿ ಕಾಯ್ದೆಯನ್ನು ಹಿಂಪಡೆಯುವ ತನಕ ನಾವು ಪ್ರತಿಭಟನೆ ಮುಂದುವರಿಸುತ್ತೇವೆ ಎಂದಿದ್ದಾರೆ.
ಇದನ್ನೂ ಓದಿ : ಕಟಪಾಡಿ: ಟೈಯರ್ ಸ್ಪೋಟಗೊಂಡು ರಾ.ಹೆದ್ದಾರಿ ಡಿವೈಡರ್ ಮೇಲೇರಿದ ಟ್ರಕ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ