ನೂತನ ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ: ಇಂದು ರೈತರಿಂದ ದೇಶಾದ್ಯಂತ 4 ತಾಸು ರೈಲು ತಡೆ
ನಾವು ರೈಲು ಮತ್ತು ಪ್ರಯಾಣಿಕರನ್ನು ಹೂವಿನ ಹಾರವನ್ನು ನೀಡುವ ಮೂಲಕ ಸ್ವಾಗತಿಸಲಿದ್ದೇವೆ ಎಂದು ತಿಳಿಸಿದರು
Team Udayavani, Feb 18, 2021, 10:28 AM IST
ನವದೆಹಲಿ:ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಮೂರು ಕೃಷಿ ಕಾಯ್ದೆಯನ್ನು ವಿರೋಧಿಸಿ ಕಳೆದ ಎರಡು ತಿಂಗಳಿನಿಂದ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳು ಗುರುವಾರ(ಫೆ.18, 2021) 12ಗಂಟೆಯಿಂದ ನಾಲ್ಕು ಗಂಟೆವರೆಗೆ ದೇಶಾದ್ಯಂತ ರೈಲು ತಡೆ ಚಳವಳಿ ನಡೆಸುವುದಾಗಿ ಘೋಷಿಸಿದೆ.
ಕಿಸಾನ್ ಆಂದೋಲನ್ ಸಮಿತಿಯ ವಕ್ತಾರ ಜಗ್ತಾರ್ ಸಿಂಗ್ ಬಜ್ವಾ ಗಾಜಿಪುರ್ ಗಡಿಯಲ್ಲಿ ಮಾತನಾಡುತ್ತ, ನಾವು ಶಾಂತಿಯುತವಾಗಿ ರೈಲು ತಡೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು, ಪ್ರತಿಭಟನೆಯಿಂದ ಪ್ರಯಾಣಿಕರಿಗೆ ತೊಂದರೆಯಾಗುವುದನ್ನು ನಿವಾರಿಸುವ ನಿಟ್ಟಿನಲ್ಲಿ ಉಪಹಾರವನ್ನು ನೀಡುವುದಾಗಿ ತಿಳಿಸಿದರು.
ಇಂದು 12ಗಂಟೆಯಿಂದ 4 ಗಂಟೆವರೆಗೆ ರೈಲು ತಡೆ ನಡೆಸಿ ಪ್ರತಿಭಟಿಸಲಿದ್ದು, ಪ್ರಯಾಣಿಕರ ಅನನುಕೂಲತೆಯನ್ನು ತಪ್ಪಿಸಲು ಉಪಹಾರದ ಆಫರ್ ನೀಡಲಿದ್ದೇವೆ ಎಂದು ಸಿಂಗ್ ಹೇಳಿದರು. ನಾವು ರೈಲು ಮತ್ತು ಪ್ರಯಾಣಿಕರನ್ನು ಹೂವಿನ ಹಾರವನ್ನು ನೀಡುವ ಮೂಲಕ ಸ್ವಾಗತಿಸಲಿದ್ದೇವೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ಪಂಜಾಬ್, ಹರ್ಯಾಣ ರೈತರು ದೆಹಲಿ ಗಡಿಯಲ್ಲಿ ಕಳೆದ 70ಕ್ಕೂ ಅಧಿಕ ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಕೃಷಿ ಕಾಯ್ದೆಯನ್ನು ರದ್ದುಪಡಿಸಬೇಕೆಂಬ ರೈತರ ಬೇಡಿಕೆಯನ್ನು ಮನ್ನಿಸದ ಕೇಂದ್ರ ಸರ್ಕಾರದ ವಿರುದ್ಧ ವಿವಿಧ ಹಂತದ ಪ್ರತಿಭಟನೆ ಹಮ್ಮಿಕೊಳ್ಳಲು ರೈತ ಸಂಘಟನೆಗಳು ಮುಂದಾಗಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ