ಪಂಜಾಬ್: ಅಧಿಕಾರಿಗಳನ್ನು ಒತ್ತೆಯಾಳು ಮಾಡಿಕೊಂಡ ರೈತರು
Farmers Demand,Government ,Officials Hostage,Punjab,
Team Udayavani, Mar 29, 2022, 10:00 PM IST
ಚಂಢೀಗಡ: ಬೆಳೆ ಹಾನಿಗೆ ಪರಿಹಾರ ನೀಡಲು ಒತ್ತಾಯಿಸಿ ರೈತ ಸಂಘಟನೆಯೊಂದು 12 ಸರ್ಕಾರಿ ಅಧಿಕಾರಿಗಳನ್ನು ಕೆಲ ಗಂಟೆಗಳ ಕಾಲ ಒತ್ತೆಯಲ್ಲಿರಿಸಿಕೊಂಡ ಘಟನೆ ಪಂಜಾಬ್ನಲ್ಲಿ ನಡೆದಿದೆ.
ಪಂಜಾಬ್ನ ಲಂಬಿ ಪ್ರದೇಶದ ಉಪ ತಹಶೀಲ್ದಾರರ ಕಚೇರಿಯಲ್ಲಿ ಇಂತಹ ಘಟನೆ ನಡೆದಿದೆ. ಸೋಮವಾರ ಬೆಳಗ್ಗೆಯೇ ರೈತ ಸಂಘಟನೆಯೊಂದರ 100ಕ್ಕೂ ಅಧಿಕ ರೈತರು ಕಚೇರಿಯ ಎದುರು ಪ್ರತಿಭಟನೆ ನಡೆಸಿದ್ದಾರೆ.
ಹತ್ತಿ ಬೆಳೆ ಹಾನಿಗೆ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ. ಸಂಜೆಯ ವೇಳೆ ಕಚೇರಿಯೊಳಗೆ ನುಗ್ಗಿದ ರೈತರು, ಅಧಿಕಾರಿಗಳನ್ನು ಒತ್ತೆಯಲ್ಲಿರಿಸಿಕೊಂಡಿದ್ದಾರೆ.
ಇದನ್ನೂ ಓದಿ:ಧರ್ಮಾಪುರದಲ್ಲಿ ಮಾರಮ್ಮದೇವರ ಉತ್ಸವ : ತಂಬಿಟ್ಟು ಆರತಿ ಹೊತ್ತು ಸಾಗಿಬಂದ ಹೆಂಗಳೆಯರು
ಈ ವಿಚಾರ ಪೊಲೀಸರಿಗೆ ತಿಳಿದುಬಂದಿದ್ದು, ಸ್ಥಳಕ್ಕೆ ಬಂದ ಪೊಲೀಸರು ಸೋಮವಾರ ಮಧ್ಯ ರಾತ್ರಿ ಹೊತ್ತಿಗೆ ಅಧಿಕಾರಿಗಳನ್ನು ರಕ್ಷಿಸಿದ್ದಾರೆ. ಅಧಿಕಾರಿಗಳನ್ನು ಒತ್ತೆಯಾಳಾಗಿಸಿಕೊಂಡದ್ದನ್ನು ಖಂಡಿಸಿ ಮಂಗಳವಾರ ತೆರಿಗೆ ಇಲಾಖೆಯ ಅಧಿಕಾರಿಗಳು ಪ್ರತಿಭಟನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್