ಬ್ಯಾರಿಕೇಡ್ ಮುರಿದವರು ನಾವಲ್ಲ : ಸಂಯುಕ್ತ ಕಿಸಾನ್ ಮೋರ್ಚಾ
ಕಿಸಾನ್ ಗಣತಂತ್ರ ಮೆರವಣಿಗೆ'ಯನ್ನು ಗಮನದಲ್ಲಿಟ್ಟುಕೊಂಡು ಭಾರಿ ಭದ್ರತೆ ನಿಯೋಜನೆ
Team Udayavani, Jan 26, 2021, 12:27 PM IST
ನವ ದೆಹಲಿ : ಸಿಂಘು ಮತ್ತು ಟಿಕ್ರಿ ಗಡಿ ಕೇಂದ್ರ ಭಾಗದಲ್ಲಿ ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನಾ ನಿರತ ಸಾವಿರಾರು ರೈತರು ಟ್ರ್ಯಾಕ್ಟರ್ ಪರೇಡ್ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯನ್ನು ಪ್ರವೇಶಿಸುವಾಗ ಪೊಲೀಸರ ಬ್ಯಾರಿಕೇಡ್ ಗಳನ್ನು ಮುರಿದು ಬಂದಿದ್ದಾರೆ ಎಂದು ವರದಿಯಾಗಿದೆ.
ರಾಜ್ಪತ್ ನಲ್ಲಿ ನಡೆದ ಗಣರಾಜ್ಯೋತ್ಸವದ ಮೆರವಣಿಗೆ ಮುಕ್ತಾಯಗೊಂಡ ನಂತರ ದೆಹಲಿಯಲ್ಲಿ ತಮ್ಮ ಟ್ರ್ಯಾಕ್ಟರ್ ಪೆರೇಡ್ ನಡೆಸಲು ಅನುಮತಿ ನೀಡಲಾಗಿದೆ ಎಂದು ಭದ್ರತಾ ಸಿಬ್ಬಂದಿ ರೈತರಿಗೆ ಮನವರಿಕೆ ಮಾಡಲು ಪ್ರಯತ್ನಿಸಿದರೂ ಕೂಡ ರೈತರು ಕೇಳದೇ ಪೊಲೀಸ್ ಬ್ಯಾರಿಕೇಡ್ಗಳನ್ನು ಮುರಿದು ಹೊರ ರಿಂಗ್ ರೋಡ್ ನತ್ತ ಸಾಗಲು ಪ್ರಯತ್ನಿಸಿದರು” ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಓದಿ : ಪ್ರಚೋದನೆಯಿಂದ ರೈತರ ಪರೇಡ್ ನಡೆದಿದೆ: ಬಿ.ಸಿ ಪಾಟೀಲ್
ಬ್ಯಾರಿಕೇಡ್ ಗಳನ್ನು ಮುರಿದವರು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಗೆ ಸೇರಿದವರು. ಪೊಲೀಸರು ರೈತರಿಗೆ ಅನುವು ಮಾಡಿಕೊಟ್ಟ ನಂತರ ಸಂಯುಕ್ತ ಕಿಸಾನ್ ಮೋರ್ಚಾದ ಟ್ರ್ಯಾಕ್ಟರ್ ಪರೇಡ್ ನಿಗದಿಯಂತೆ ಪ್ರಾರಂಭವಾಗಲಿದೆ ಎಂದು ದೆಹಲಿಯ ಹಲವಾರು ಗಡಿ ಕೇಂದ್ರಗಳಲ್ಲಿ ಮೂರು ಕೇಂದ್ರ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆಯನ್ನು ಮುನ್ನಡೆಸುತ್ತಿರುವ 41 ರೈತ ಸಂಘಗಳ ಒಕ್ಕೂಟ “ಸಂಯುಕ್ತ ಕಿಸಾನ್ ಮೋರ್ಚಾ”ದ ಸದಸ್ಯರೊಬ್ಬರು ಹೇಳಿದ್ದಾರೆ.
ಓದಿ : ಟಿಕ್ ಟಾಕ್ ಸೇರಿ ಚೀನಾ ಮೂಲದ 59 ಅಪ್ಲಿಕೇಶನ್ ಗಳಿಗೆ ಶಾಶ್ವತ ನಿಷೇಧ
ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯು ಗಣರಾಜ್ಯೋತ್ಸವದಂದು ದೆಹಲಿಯ ಕಾರ್ಯನಿರತ ಹೊರ ರಿಂಗ್ ರೋಡ್ ನಲ್ಲಿ ತಮ್ಮ ಮೆರವಣಿಗೆಯನ್ನು ನಡೆಸುವುದಾಗಿ ಸೋಮವಾರ(ಜ.25) ಘೋಷಿಸಿತ್ತು. ಮಾತ್ರವಲ್ಲದೇ, ಫೆಬ್ರವರಿ 1 ರಂದು ವಾರ್ಷಿಕ ಬಜೆಟ್ ಮಂಡಿಸುವ ಸಂದರ್ಭದಲ್ಲಿ ಮೂರು ಹೊಸ ಕೃಷಿ ಕಾನೂನುಗಳನ್ನು ರದ್ದುಪಡಿಸುವಂತೆ ಒತ್ತಾಯಿಸಲು ಸಂಸತ್ತಿಗೆ ಪಾದ ಯಾತ್ರೆಯನ್ನು ಕೂಡ ಮಾಡುತ್ತೇವೆ ಎಂದು ಘೋಷಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಸಿಂಘು, ಟಿಕ್ರಿ ಮತ್ತು ಗಾಜಿಪುರ ಗಡಿ ಕೇಂದ್ರಗಳಿಂದ ದೆಹಲಿಗೆ ತೆರಳಲಿರುವ ‘ಕಿಸಾನ್ ಗಣತಂತ್ರ ಮೆರವಣಿಗೆ’ಯನ್ನು ಗಮನದಲ್ಲಿಟ್ಟುಕೊಂಡು ಭಾರಿ ಭದ್ರತೆಯನ್ನು ನಿಯೋಜಿಸಲಾಗಿದೆ.
ಓದಿ : ಕೇಂದ್ರದ ನೂತನ ಮೂರು ಕೃಷಿ ಕಾಯ್ದೆ ಮಹಾರಾಷ್ಟ್ರದಲ್ಲಿ ಜಾರಿಗೊಳಿಸಲ್ಲ: ಸ್ಪೀಕರ್ ಪಟೋಲೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
MUST WATCH
ಹೊಸ ಸೇರ್ಪಡೆ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
Yugadi: ಯುಗದ ಆರಂಭದ ಮುನ್ನುಡಿ ಈ ಯುಗಾದಿ
Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ