Farmers Protest; ಕೇಂದ್ರದ ಆಫ‌ರ್‌ ತಿರಸ್ಕರಿಸಿದ ರೈತರು: ಧರಣಿ ಮುಂದುವರಿಕೆ

ಎಲ್ಲ 23 ಬೆಳೆಗಳನ್ನು ಎಂಎಸ್‌ಪಿ ಅಡಿ ತರುವಂತೆ ಎಸ್‌ಕೆಎಂ ಆಗ್ರಹ

Team Udayavani, Feb 20, 2024, 6:20 AM IST

1-wqewewewq

ಹೊಸದಿಲ್ಲಿ: 2ನೇ ವಾರಕ್ಕೆ ಕಾಲಿಟ್ಟಿರುವ ಸರಕಾರ ಮತ್ತು ರೈತರ ನಡುವಿನ ಬಿಕ್ಕಟ್ಟು ಸದ್ಯಕ್ಕೆ ಕೊನೆಗಾಣುವ ಲಕ್ಷಣ ಕಾಣುತ್ತಿಲ್ಲ. ಮೂರು ವಿಧದ ಬೇಳೆ ಕಾಳುಗಳು, ಮೆಕ್ಕೆಜೋಳ ಮತ್ತು ಹತ್ತಿಯನ್ನು ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಅಡಿಯಲ್ಲಿ 5 ವರ್ಷಗಳವರೆಗೆ ಗುತ್ತಿಗೆ ಆಧಾರದಲ್ಲಿ ಖರೀದಿಸುವ ಪ್ರಸ್ತಾವವನ್ನು ಕೇಂದ್ರ ಸರಕಾರಮುಂದಿಟ್ಟಿತ್ತಾದರೂ, ರೈತರು ಈ ಆಫ‌ರನ್ನು ತಿರಸ್ಕರಿಸಿದ್ದಾರೆ. ಹೀಗಾಗಿ ರೈತರ ಪ್ರತಿಭಟನೆ ಮುಂದುವರಿದಿದೆ.

ರವಿವಾರ ರಾತ್ರಿ ನಡೆದ 4ನೇ ಸುತ್ತಿನ ಮತುಕತೆ ಬಳಿಕ, ದ್ವಿದಳ ಧಾನ್ಯಗಳು, ಮೆಕ್ಕೆ ಜೋಳ, ಹತ್ತಿಯನ್ನು ಎಂಎಸ್‌ಪಿ ಅಡಿಯಲ್ಲಿ 5 ವರ್ಷಗಳವರೆಗೆ ಖರೀದಿಸುವ ಪ್ರಸ್ತಾವವನ್ನು ಸರಕಾರರೈತರ ಮುಂದಿಟ್ಟಿತ್ತು. ಅದನ್ನು ನಿರಾಕರಿಸಿರುವ ಸಂಯುಕ್ತ ಕಿಸಾನ್‌ ಮೋರ್ಚಾ (ಎಸ್‌ಕೆಎಂ), ಎಲ್ಲ 23 ಬೆಳೆಗಳನ್ನು ಎಂಎಸ್‌ಪಿ ಅಡಿ ತರುವಂತೆ ಒತ್ತಾಯಿಸಿದೆ.

ಸರಕಾರದ ಪ್ರಸ್ತಾವವು ರೈತರ ಬೇಡಿಯನ್ನು ದಿಕ್ಕುತಪ್ಪಿಸುತ್ತಿದೆ. 2014ರ ಸಾರ್ವತ್ರಿಕ ಚುನಾವಣೆಯ ವೇಳೆ ಬಿಜೆಪಿ ನೀಡಿದ್ದ ಆಶ್ವಾಸನೆಯಂತೆ ಎಲ್ಲ 23 ಬೆಳೆಗಳನ್ನು ಎಂಎಸ್‌ಪಿ ಅಡಿ ತರಬೇಕು. ಇದಲ್ಲದೆ ಕನಿಷ್ಠ ಬೆಂಬಲ ಬೆಲೆಯು ಸ್ವಾಮಿನಾಥನ್‌ ಆಯೋಗದ ಶಿಫಾರಸಿನಂತೆ ಇ2+50 ಸೂತ್ರದಲ್ಲಿ ಇರಬೇಕೇ ಹೊರತು, ಈಗಿನಂತೆ ಅ2+ಊಔ+50 ಸೂತ್ರದಲ್ಲಿ ಇರಬಾರದು ಎಂದು ಮೋರ್ಚಾ ಪಟ್ಟುಹಿಡಿದಿದೆ.

ಜತೆಗೆ, ಕೃಷಿ ಸಚಿವ ಅರ್ಜುನ್‌ ಮುಂಡಾ ಸೇರಿ 3 ಸಚಿವರನ್ನು ಒಳಗೊಂಡ ಕೇಂದ್ರದ ಸಮಿತಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಎಸ್‌ಕೆಎಂ, 4 ಸುತ್ತಿನ ಮಾತುಕತೆ ಬಳಿಕವೂ ಸಮಿತಿಯಲ್ಲಿ ಪಾರದರ್ಶಕತೆಯ ಕೊರತೆಯಿತ್ತು ಎಂದು ಟೀಕಿಸಿದೆ.

ಇದಲ್ಲದೆ, ಸಮರ್ಗ ಸಾರ್ವಜನಿಕ ವಲಯದ ಬೆಳೆ ವಿಮಾ ಯೋಜನೆ, 60 ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ 10 ಸಾವಿರ ಪಿಂಚಣಿ ಮುಂತಾದ ಬೇಡಿಕೆಗಳು ಯಾವುದೇ ಪ್ರಗತಿ ಸಾಧಿಸಿಲ್ಲ. ಲಖೀಂಪುರ ಖೇರಿಯಲ್ಲಿ ರೈತರ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಅಜಯ್‌ ಮಿಶ್ರಾ ತೇನಿ ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎನ್ನುವ ನಮ್ಮ ಬೇಡಿಕೆಯೂ ಈಡೇರಿಲ್ಲ ಎಂದು ಕಿಸಾನ್‌ ಮೋರ್ಚಾ ದೂರಿದೆ.

ರೈತರ ಬೇಡಿಕೆಯಲ್ಲೇನಿತ್ತು ?

(ಎನ್‌ಸಿಸಿಎಫ್), ಭಾರತದ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ (ಎನ್‌ಎಎಫ್ಇಡಿ)ದಂತಹ ಒಕ್ಕೂಟ ಸಹಕಾರ ಸಂಘಗಳು 5 ವರ್ಷಗಳ ಗುತ್ತಿಗೆಯಲ್ಲಿ ತೊಗರಿಬೇಳೆ ಮತ್ತು ಮೆಕ್ಕೆಜೋಳವನ್ನು ಖರೀದಿಸುವ ಒಪ್ಪಂದಕ್ಕೆ ಸಹಿ ಹಾಕುವುದು. ಇದೇ ಒಪ್ಪಂದದಲ್ಲಿ ಎಲ್ಲÉ ಬೆಳೆಗಳನ್ನು ಕನಿಷ್ಠ ಬೆಂಬಲ ಬೆಲೆಯಡಿಯಲ್ಲಿ ತರಲು ಪ್ರಸ್ತಾವನೆ. ಎಂಎಸ್‌ಪಿಯಡಿ ಖರೀದಿಸು ವಾಗ ಖರೀದಿ ಪ್ರಮಾಣದ ಮೇಲೆ ಯಾವುದೇ ಮಿತಿ ಹೇರದಿರುವುದು. ಇದಕ್ಕೆ ಸಂಬಂಧಿಸಿ ಒಂದು ವೆಬ್‌ಸೈಟ್‌ ಸ್ಥಾಪಿಸುವುದು.

ಪ್ರಸ್ತುತ ಎಂಎಸ್‌ಪಿ ಯೋಜನೆಯಲ್ಲೇನಿದೆ?

ಭತ್ತ, ಗೋಧಿ, ಬೇಳೆ ಕಾಳುಗಳು ಮತ್ತು ಮೆಕ್ಕೆ ಜೋಳದಂತಹ ಪ್ರಧಾನ ಆಹಾರಗಳನ್ನು  ಹೊರತುಪಡಿಸಿ, ಉಳಿದ 23 ಬೆಳೆಗಳಿಗೆ ಎಂಎಸ್‌ಪಿ ನೀಡಲಾಗುತ್ತಿದೆ. ಇದರಲ್ಲಿ ರಾಗಿ, ನೆಲಗಡಲೆ, ಸೂರ್ಯಕಾಂತಿ ಬೀಜಗಳು, ಬಾರ್ಲಿ, ಸಾಸಿವೆ ಮೊದಲಾದವು ಸೇರಿವೆ.

ಟಾಪ್ ನ್ಯೂಸ್

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.