ಸಿಂಘು ಗಡಿಯಲ್ಲಿ ಉದ್ವಿಗ್ವ ಸ್ಥಿತಿ: ಪೊಲೀಸ್ ಮೇಲೆ ತಲ್ವಾರ್ ನಿಂದ ಹಲ್ಲೆ, ಕಲ್ಲುತೂರಾಟ
Team Udayavani, Jan 29, 2021, 3:14 PM IST
ರೈತರ ವಾಷಿಂಗ್ ಮೆಶಿನ್ ಸೇರಿದಂತೆ ನಿತ್ಯೋಪಯೋಗಿ ವಸ್ತುಗಳನ್ನು ಧ್ವಂಸಗೊಳಿಸಲು ಯತ್ನ
ನವದೆಹಲಿ:ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ದೆಹಲಿ-ಹರ್ಯಾಣ ಸಿಂಘು ಗಡಿಯಲ್ಲಿ ಪ್ರತಿಭಟನಾನಿರತ ರೈತನೊಬ್ಬ ಅಲಿಪುರ್ ಪೊಲೀಸ್ ಸಿಬಂದಿ ಮೇಲೆ ತಲ್ವಾರ್ ನಿಂದ ಹಲ್ಲೆ ನಡೆಸಿದ ಪರಿಣಾಮ ರೈತರು, ಪೊಲೀಸರ ನಡುವೆ ಘರ್ಷಣೆ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಅಶ್ವಥ್ ನಾರಾಯಣ, ಮಾಧುಸ್ವಾಮಿ ಜವಾಬ್ದಾರಿ ಹುದ್ದೆ ನಿಭಾಯಿಸುವುದು ಸೂಕ್ತವಲ್ಲ: ಸದನ ಸಮಿತಿ
ದೆಹಲಿ-ಹರ್ಯಾಣ ಸಿಂಘು ಗಡಿಪ್ರದೇಶದಲ್ಲಿ ಸುಮಾರು 200 ಮಂದಿ ಗುಂಪೊಂದು ರೈತರ ಟೆಂಟ್ ಮೇಲೆ ಕಲ್ಲು ತೂರಾಟ ಆರಂಭಿಸಿತ್ತು. ಆದರೆ ರೈತರು ಪ್ರತಿಭಟನೆ ನಡೆಸುತ್ತಿರುವ ಪ್ರದೇಶವನ್ನು ಪೊಲೀಸರು ಬಂದ್ ಮಾಡಿದ್ದರು ಕೂಡಾ 200-300 ಜನ ಪ್ರತಿಭಟನಾ ಸ್ಥಳದೊಳಕ್ಕೆ ಹೇಗೆ ನುಗ್ಗಿದರು ಎಂಬುದು ಸ್ಪಷ್ಟವಾಗಿ ತಿಳಿದುಬಂದಿಲ್ಲ ಎಂದು ವರದಿ ತಿಳಿಸಿದೆ.
ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ನುಗ್ಗಿದ್ದ ಗುಂಪು ರೈತರ ವಾಷಿಂಗ್ ಮೆಶಿನ್ ಸೇರಿದಂತೆ ನಿತ್ಯೋಪಯೋಗಿ ವಸ್ತುಗಳನ್ನು ಧ್ವಂಸಗೊಳಿಸಲು ಯತ್ನಿಸಿದ್ದು, ಕೂಡಲೇ ಪ್ರತಿಭಟನೆ ನಡೆಸುತ್ತಿರುವ ಸ್ಥಳವನ್ನು ಬಿಟ್ಟು ಹೊರಡುವಂತೆ ಒತ್ತಾಯಿಸಿರುವುದಾಗಿ ವರದಿ ವಿವರಿಸಿದೆ.
#WATCH: Delhi Police hit a protesting farmer after he attacked a Police personnel, dragging him to the ground along with him. Visuals from Singhu border.
(Note: Abusive language) pic.twitter.com/gILDF9OPA1
— ANI (@ANI) January 29, 2021
ಎಸ್ ಎಚ್ ಒ ಪ್ರದೀಪ್ ಕುಮಾರ್ ಮೇಲೆ ಸರವಣ್ ಸಿಂಗ್ ಪಂಥೇರ್ ತಲ್ವಾರ್ ನಿಂದ ಹಲ್ಲೆ ನಡೆಸಿದ್ದು, ಕೂಡಲೇ ಆತನನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿ ತಿಳಿಸಿದೆ. ಪೊಲೀಸರ ಮೇಲೆ ಹಲ್ಲೆ ನಡೆಸುತ್ತಿರುವ ಸಿಂಗ್ ಫೋಟೊವನ್ನು ಪೊಲೀಸರು ಬಿಡುಗಡೆಗೊಳಿಸಿದ್ದಾರೆ.
ಒಂದೆಡೆ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರವಾಯು ಪ್ರಯೋಗ, ಲಾಠಿಚಾರ್ಜ್ ನಡೆಸುತ್ತಿದ್ದು, ಮತ್ತೊಂದೆಡೆ ಸ್ಥಳೀಯರು ಮತ್ತು ರೈತರ ನಡುವೆ ಘರ್ಷಣೆ ನಡೆದಿದ್ದು, ಸ್ಥಳೀಯರು ರೈತರ ಟೆಂಟ್ ಮೇಲೆ ಕಲ್ಲು ತೂರಾಟ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ರೈತರು ಕೂಡಾ ಕಲ್ಲು ತೂರಾಟ ನಡೆಸಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ