ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ಸಿಂಘು ಗಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸಿಖ್ ಗುರು
Team Udayavani, Dec 16, 2020, 8:32 PM IST
ನವದೆಹಲಿ: ರೈತ ಹೋರಾಟವನ್ನು ಬೆಂಬಲಿಸಿ ಹಾಗೂ ಮೂರು ಕೃಷಿ ಕಾಯ್ದೆಯನ್ನು ವಿರೋಧಿಸಿ ಹರ್ಯಾಣದ ಸಿಖ್ ಗುರು ಆತ್ಮಹತ್ಯೆ ಮಾಡಿಕೊಂಡ ಘಟನೆ ದೆಹಲಿ ಸಿಂಘು ಗಡಿಯಲ್ಲಿ ನಡೆದಿದೆ.
ಮೃತಪಟ್ಟ ಗುರುವನ್ನು ಸಂತ್ ಬಾಬಾ ರಾಮ್ ಸಿಂಗ್ (65) ಎಂದು ಗುರುತಿಸಲಾಗಿದೆ. ಇವರು ಹರ್ಯಾಣದ ಕರ್ನಾಲ್ ಮೂಲದವರು.
ಇಂದು (ಡಿ.16) ಸಂತ್ ಬಾಬಾ ರಾಮ್ ಸಿಂಗ್ ರೈತ ಹೋರಾಟದ ಒಗ್ಗಟ್ಟು ತೋರಿಸುವ ನಿಟ್ಟಿನಲ್ಲಿ ಆತ್ಮಹತ್ಯೆ ಪತ್ರ ಬರೆದಿಟ್ಟು ತನಗೆ ತಾನೇ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾರೆ. ಆತ್ಮಹತ್ಯೆ ಪತ್ರದಲ್ಲಿ ರೈತರ ದುಸ್ಥಿತಿ ಮತ್ತು ಸರ್ಕಾರದ ದಬ್ಬಾಳಿಕೆಯನ್ನು ನೋಡಲಾಗದೆ ಈ ನಿರ್ಧಾರ ತಳೆದಿರುವುದಾಗಿ ವಿವರಿಸಿದ್ದಾರೆ.
‘ಬೀದಿಗಿಳಿದು ತಮ್ಮ ಹಕ್ಕುಗಳಿಗಾಗಿ ಹೆಣಗಾಡುತ್ತಿರುವ ರೈತರ ದುಃಸ್ಥಿತಿಗೆ ನಾನು ಸಾಕ್ಷಿಯಾಗಿದ್ದೇನೆ. ಸರ್ಕಾರ ಅವರಿಗೆ ನ್ಯಾಯ ನೀಡುತ್ತಿಲ್ಲ ಎಂದು ನನಗೆ ನೋವಾಗಿದೆ. ಇದು ಅಪರಾಧ. ಸರ್ಕಾರ ದಬ್ಬಾಳಿಕೆ ಮಾಡುತ್ತಿರುವುದು ಸರಿಯಲ್ಲ. ದಬ್ಬಾಳಿಕೆಯ ವಿರುದ್ಧ ಮತ್ತು ರೈತರ ಹಕ್ಕುಗಳಿಗಾಗಿ ಯಾರೂ ಏನನ್ನೂ ಮಾಡಲಿಲ್ಲ. ಪ್ರಶಸ್ತಿಗಳನ್ನು ಹಿಂದಿರುಗಿಸುವ ಮೂಲಕ ಅನೇಕರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ದಬ್ಬಾಳಿಕೆಯ ವಿರುದ್ಧದ ಧ್ವನಿ ಮತ್ತು ರೈತರ ಪರವಾದ ಧ್ವನಿಯಾಗಿದೆ’ ಎಂದು ಪಂಜಾಬಿಯಲ್ಲಿ ಬರೆದ ಆತ್ಮಹತ್ಯೆ ಪತ್ರದಲ್ಲಿ ತಿಳಿಸಿದ್ದಾರೆ.
ಸಂತ ಬಾಬಾ ರಾಮ್ಸಿಂಗ್ ಕರ್ನಾಲ್ನ ಎಸ್ಜಿಪಿಸಿ ಮುಖಂಡರಾಗಿದ್ದರು. ಮಾತ್ರವಲ್ಲದೆ ಇವರಿಗೆ ಕರ್ನಾಲ್ ಮತ್ತು ಸುತ್ತಮುತ್ತ ದೊಡ್ಡ ಪ್ರಮಾಣದ ಅನುಯಾಯಿಗಳಿದ್ದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ