ಫ‌ರೂಕಾಬಾದ್‌ನಲ್ಲಿ ಗೋರಖ್‌ಪುರ ಮಾದರಿ ದುರಂತ: 49 ಮಕ್ಕಳ ಸಾವು


Team Udayavani, Sep 5, 2017, 7:55 AM IST

farukhabad.jpg

ಫ‌ರೂಕಾಬಾದ್‌/ಲಕ್ನೋ: ಉತ್ತರ ಪ್ರದೇಶದ ಫ‌ರೂಕಾಬಾದ್‌ನಲ್ಲಿ ಗೋರಖ್‌ಪುರ ಮಾದರಿ ದುರಂತ ಸಂಭವಿಸಿದೆ. ಅಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಜು.20 ರಿಂದ ಆ.21ರ ವರೆಗೆ 49 ಮಕ್ಕಳು ಆಮ್ಲಜನಕ ಕೊರತೆಯಿಂದ ಅಸುನೀಗಿವೆ. ಕೂಡಲೇ ಮಧ್ಯಪ್ರವೇಶ ಮಾಡಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ, ಮುಖ್ಯ ಮೆಡಿಕಲ್‌ ಸೂಪರಿಂಟೆಂಡೆಂಟ್‌ ಮತ್ತು ಮತ್ತೂಬ್ಬ ಹಿರಿಯ ವೈದ್ಯರನ್ನು ವಜಾ ಮಾಡಿದ್ದಾರೆ.

ಗಮನಾರ್ಹ ಅಂಶವೆಂದರೆ ಜಿಲ್ಲಾಧಿಕಾರಿ ರವೀಂದ್ರ ಕುಮಾರ್‌ರನ್ನೂ ವರ್ಗಾಯಿಸಲಾಗಿದೆ. ಘಟನೆ ಬಗ್ಗೆ ಸ್ಥಳೀಯ ಮಾಧ್ಯಮಗಳಲ್ಲಿ ಭಾನುವಾರ ವರದಿಗಳು ಪ್ರಕಟವಾಗಿದ್ದವು. ಅದನ್ನು ಆಧರಿಸಿ ಸಿಎಂ ಆದಿತ್ಯನಾಥ್‌ರ ಕಚೇರಿ ಸ್ವಯಂಪ್ರೇರಿತ ಕ್ರಮ ಕೈಗೊಂಡಿದೆ. ಮುಖ್ಯ ವೈದ್ಯಾಧಿಕಾರಿ ಮತ್ತು ಮುಖ್ಯ ಮೆಡಿಕಲ್‌ ಸೂಪರಿಂಟೆಂ ಡೆಂಟ್‌ ವಿರುದ್ಧ ಎಫ್ಐಆರ್‌ ದಾಖಲಿಸಲಾಗಿದೆ. 

ಫ‌ರೂಕಾಬಾದ್‌ನ ರಾಮ್‌ ಮನೋಹರ್‌ ಲೋಹಿಯಾ ಜಿಲ್ಲಾಸ್ಪತ್ರೆಯ ನವಜಾತ ಶಿಶುಗಳ ತುರ್ತು ಚಿಕಿತ್ಸಾ ವಿಭಾಗದಲ್ಲಿ 30 ಮತ್ತು 19 ಮಂದಿ ಮಕ್ಕಳು ಅಸುನೀಗಿವೆ. ಘಟನೆ ಬಗ್ಗೆ ಉನ್ನತ ಮಟ್ಟದ ತನಿಖಾ ತಂಡವನ್ನು ಲಕ್ನೋದಿಂದ ಕಳುಹಿಸಲಾಗಿದೆ. 

468 ಹೆರಿಗೆಗಳು: ಜಿಲ್ಲಾಸ್ಪತ್ರೆಯಲ್ಲಿ ಜು.20ರಿಂದ ಆ.21ರ ವರೆಗೆ 468 ಹೆರಿಗೆಗಳು ನಡೆದಿವೆ. ಈ ಪೈಕಿ 19 ಪ್ರಕರಣಗಳಲ್ಲಿ ಗರ್ಭದಲ್ಲಿಯೇ ಮಗು ಸಾವಿಗೀಡಾದ ವಿಚಾರ ಬೆಳಕಿಗೆ ಬಂದಿದೆ. ಫ‌ರೂಕಾಬಾದ್‌ ಉಪ ವಿಭಾಗಾಧಿಕಾರಿ ಅಜಿತ್‌ ಕುಮಾರ್‌ ಸಿಂಗ್‌ ಮತ್ತು ನಗರ ಮ್ಯಾಜಿಸ್ಟ್ರೇಟ್‌ ಜಯೇಂದ್ರ ಕುಮಾರ್‌ ಜೈನ್‌ ಆರಂಭಿಕ ತನಿಖೆ ನಡೆಸಿದ್ದು, ಅದರ ಪ್ರಕಾರ ಹೆಚ್ಚಿನ ಸಾವು ಉಸಿರು ಕಟ್ಟಿಯೇ ಸಂಭವಿಸಿದೆ ಎಂದು ಕಂಡುಕೊಂಡಿದ್ದಾರೆ. ಪೋಷಕರೂ ಕೂಡ ಆಮ್ಲಜನಕ ಪೂರೈಕೆ ಯಲ್ಲಿ ವಿಳಂಬ ಉಂಟಾಗಿರುವ ಬಗ್ಗೆ ವೈದ್ಯರಿಗೆ ಮಾಹಿತಿ ನೀಡಿದ್ದರು. ಮುಖ್ಯ ವೈದ್ಯಾಧಿಕಾರಿ, ಮುಖ್ಯ ಮೆಡಿಕಲ್‌ ಸೂಪರಿಟೆಂಡೆಂಟ್‌ ತನಿಖೆಗೆ ಸಹಕರಿಸ ಲಿಲ್ಲ ಎಂದೂ ಪ್ರತಿಪಾದಿಸಿದ್ದಾರೆ. ಆದರೆ ಗರ್ಭದಲ್ಲಿಯೇ 19 ಮಕ್ಕಳು ಸಾವಿ ಗೀಡದ ಬಗ್ಗೆ ಅವರಿಬ್ಬರು ಯಾವುದೇ ಕಾರಣಗಳನ್ನು ಉಲ್ಲೇಖೀಸಿಲ್ಲ. 

ಸಂಬಂಧವೇ ಇಲ್ಲ: ಘಟನೆ ಬಗ್ಗೆ ತರಾತುರಿಯಲ್ಲಿ ಸುದ್ದಿಗೋಷ್ಠಿ ಕರೆದಿರುವ‌ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಪ್ರಶಾಂತ್‌ ತಿವಾರಿ, ಆಮ್ಲಜನಕ ಕೊರತೆಗೂ ಸಾವಿಗೂ ಸಂಬಂಧವಿಲ್ಲ. ಮಕ್ಕಳ ಸಾವಿಗೆ ಬೇರೆ ಕಾರಣವಿದೆ ಎಂದು ಸಮರ್ಥನೆ ನೀಡಿದ್ದಾರೆ.

ಕಳೆದ ವರ್ಷ ಗೋರಖ್‌ಪುರ ಆಸ್ಪತ್ರೆಗೆ ಭೇಟಿ ನೀಡಿದ್ದ ವೇಳೆ ಅಲ್ಲಿನ ಪರಿಸ್ಥಿತಿ ಬಗ್ಗೆ ಎಚ್ಚರಿಕೆ ನೀಡಿದ್ದೆ. ಅಲ್ಲಿಗೆ ಹಣಕಾಸಿನ ನೆರವು ಬೇಕೆಂ ದೂ ಹೇಳಿದ್ದೆ. ಏಕೆಂದರೆ ಬಿಗ್‌ ಬಾಸ್‌ (ಪ್ರಧಾನಿ ಮೋದಿ) ಇಲ್ಲಿಯೇ ಇರುತ್ತಾರಲ್ಲ? ಆದರೆ ಏನೂ ಆಗಲಿಲ್ಲ.
– ರಾಹುಲ್‌ ಗಾಂಧಿ, ಕಾಂಗ್ರೆಸ್‌ ಉಪಾಧ್ಯಕ್ಷ

ಟಾಪ್ ನ್ಯೂಸ್

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.