ದಿಢೀರ್‌ ನೋಟು ರದ್ದು ಮಾಡಿಲ್ಲ


Team Udayavani, Jan 19, 2017, 7:56 AM IST

note.jpg

ಹೊಸದಿಲ್ಲಿ: 500 ರೂ. ಮತ್ತು 1000 ರೂ. ನೋಟುಗಳ ಅಪನಗದೀಕರಣವಾದ ಮೇಲೆ ರಿಸರ್ವ್‌ ಬಾಂಕ್‌ ಆಫ್ ಇಂಡಿಯಾಗೆ ವಾಪಸ್‌ ಬಂದ ಹಣವೆಷ್ಟು? ಬ್ಯಾಂಕುಗಳಿಗೆ ನೀವು ಮರಳಿ ಕೊಟ್ಟ ನಗದಿನ ಪ್ರಮಾಣವೇನು? ಕ್ಯಾಶ್‌ ವಿತ್‌ಡ್ರಾವಲ್‌ ಮೇಲೆ ಹೇರಿರುವ ನಿರ್ಬಂಧವನ್ನು ತೆಗೆದುಹಾಕಿದರೆ ಏನಾದರೂ ಸಮಸ್ಯೆಯಾಗುತ್ತದೆಯೇ?

ಇವು ಆರ್‌ಬಿಐ ಗವರ್ನರ್‌ ಊರ್ಜಿತ್‌ ಪಟೇಲ್‌ ಅವರಿಗೆ ಹಣಕಾಸು ಇಲಾಖೆಯ ಸ್ಥಾಯಿ ಸಮಿತಿ ಸದಸ್ಯರು ಕೇಳಿದ ಕಠಿನ ಸರಣಿ ಪ್ರಶ್ನೆಗಳು. ಈ ಪ್ರಶ್ನೆಗಳು ಇಲ್ಲಿಗೆ ನಿಲ್ಲದೇ ಸಾಕಷ್ಟು ಅತಿರೇಕಕ್ಕೆ ಹೋದಾಗ ಒಂದು ಹಂತದಲ್ಲಿ ಊರ್ಜಿತ್‌ ಪಟೇಲ್‌ ಅವರನ್ನು ರಕ್ಷಿಸಿದ್ದು ಆರ್‌ಬಿಐನ ಮಾಜಿ ಗವರ್ನರ್‌ ಹಾಗೂ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌!

500-1000 ರೂ. ನೋಟುಗಳ ಅಪನಗದೀಕರಣ ನಂತರ ಪರಿಣಾಮದ ಕುರಿತಂತೆ ಬುಧವಾರ ಸಂಸತ್ತಿನ ಹಣಕಾಸು ಇಲಾಖೆಯ ಸ್ಥಾಯಿ ಸಮಿತಿ ಏರ್ಪಡಿಸಿದ್ದ ವಿಚಾರಣೆಯಲ್ಲಿ ಆರ್‌ಬಿಐ ಗವರ್ನರ್‌, ಹಣಕಾಸು ಇಲಾಖೆಯ ಅಧಿಕಾರಿಗಳು ಮತ್ತು ಪ್ರಮುಖ ಬ್ಯಾಂಕುಗಳ ಮುಖ್ಯಸ್ಥರು ಹೇಳಿಕೆ ನೀಡಿದರು. ಈ ಸಂದರ್ಭದಲ್ಲಿ ಅತಿ ಹೆಚ್ಚು ಪ್ರಶ್ನೆಗಳು ಬಿದ್ದದ್ದು ಆರ್‌ಬಿಐ ಗವರ್ನರ್‌ ಊರ್ಜಿತ್‌ ಪಟೇಲ್‌ ಅವರಿಗೆ. 

ಸರಕಾರ ಮತ್ತು ಆರ್‌ಬಿಐ ಸಮನ್ವಯತೆ ಯಿಂದ ಈ ನಿರ್ಧಾರ ತೆಗೆದುಕೊಂಡಿವೆಯೇ ಎಂಬ ಪ್ರಶ್ನೆಯಿಂದ ಹಿಡಿದು, ಪ್ರತಿ  ಲೆಕ್ಕವನ್ನು ಕೇಳಿದ ಸಮಿತಿ, ಹಾಜರಾದ ಎಲ್ಲರನ್ನೂ ಇಕ್ಕಟ್ಟಿಗೆ ಸಿಲುಕಿಸಿತು. 

ವರ್ಷದ ಕಸರತ್ತು: ನೋಟು ಅಪನ ಗದೀಕರಣ ಪ್ರಕ್ರಿಯೆ ಒಂದು ದಿನದ್ದಲ್ಲ, ಅದು ಒಂದು ವರ್ಷದ್ದು ಎಂದು ಸ್ಪಷ್ಟವಾಗಿ ಹೇಳಿದ್ದು ಗವರ್ನರ್‌ ಊರ್ಜಿತ್‌ ಪಟೇಲ್‌. ಕೇಂದ್ರ ಸರಕಾರ, ಆರ್‌ಬಿಐ ಅನ್ನು ಗಂಭೀರವಾಗಿ ಪರಿಗಣಿಸದೇ ಈ ನಿರ್ಧಾರ ತೆಗೆದುಕೊಂಡಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸ್ಥಾಯೀ ಸಮಿತಿ ಎಷ್ಟು ದಿನಗಳ ಮುನ್ನ ನಿಮಗೆ ಹೇಳಲಾಗಿತ್ತು ಎಂಬ ಪ್ರಶ್ನೆ ಕೇಳಿದಾಗ ಊರ್ಜಿತ್‌ ಪಟೇಲ್‌ ಅವರು ಈ ಉತ್ತರ ನೀಡಿದ್ದಾರೆ. 2016ರ ವರ್ಷಾರಂಭದಲ್ಲೇ ಕೇಂದ್ರ ಸರಕಾರ ಮತ್ತು ಆರ್‌ಬಿಐ ಇದಕ್ಕಾಗಿ ಪ್ರಕ್ರಿಯೆ ಶುರು ಮಾಡಿಕೊಂಡಿದ್ದವು. ಆದರೆ ಇದನ್ನು ಘೋಷಿಸಿದ್ದು ಮಾತ್ರ ನವೆಂಬರ್‌ 8ರಂದು ಎಂದು ಹೇಳಿದ್ದಾರೆ. ಅಲ್ಲದೆ ಈ ಸಂಬಂಧ ಕೇಂದ್ರ ಸರಕಾರದೊಂದಿಗೆ ಒಪ್ಪಂದವೊಂದನ್ನೂ ಮಾಡಿಕೊಳ್ಳಲಾಗಿತ್ತು ಎಂಬ ಮಾಹಿತಿಯನ್ನೂ ನೀಡಿದ್ದಾರೆ. 

9.2 ಲಕ್ಷ ಕೋಟಿ ರೂ. ಹೊಸ ನೋಟು ಬಿಡುಗಡೆ: ನೋಟುಗಳ ಅಪನಗದೀಕರಣದ ಅನಂತರ ಆರ್‌ಬಿಐಗೆ ಎಷ್ಟು ಹಣ ಬಂದಿದೆ ಎಂಬ ಲೆಕ್ಕ ಇಲ್ಲಿವರೆಗೂ ಸಿಕ್ಕಿಲ್ಲ. ಆದರೆ ನಾವು ಮಾತ್ರ ವಾಪಸ್‌ ಬ್ಯಾಂಕಿಂಗ್‌ ವ್ಯವಸ್ಥೆಗೆ ಸುಮಾರು 9.2 ಲಕ್ಷ ಕೋಟಿ ರೂ. ಹೊಸ ನೋಟುಗಳನ್ನು ಬಿಡುಗಡೆ ಮಾಡಿದ್ದೇವೆ ಎಂದು ಊರ್ಜಿತ್‌ ಪಟೇಲ್‌ ಹೇಳಿದ್ದಾರೆ.

“ಅಂದರೆ ಒಟ್ಟಾರೆ ಮೌಲ್ಯದ ಶೇ.60 ರಷ್ಟನ್ನು ವಾಪಸ್‌ ಕಳುಹಿಸಿದ್ದೇವೆ. ಎಷ್ಟು ಬಂದಿದೆ ಎಂಬ ಬಗ್ಗೆ ಇನ್ನೂ ಲೆಕ್ಕಾಚಾರ ನಡೆಯುತ್ತಲೇ ಇದೆ’ ಎಂದು ತಿಳಿಸಿದ್ದಾರೆ. ಅಲ್ಲದೆ ಇಡೀ ವ್ಯವಸ್ಥೆ ಯಾವಾಗ ಸರಿಹೋಗುತ್ತದೆ, ಇನ್ನೆಷ್ಟು ದಿನ ಬೇಕಾಗುತ್ತದೆ ಎಂಬ ಪ್ರಶ್ನೆಗಳಿಗೂ ಊರ್ಜಿತ್‌ ಪಟೇಲ್‌ ಆಗಲಿ, ಹಣಕಾಸು ಇಲಾಖೆಯ ಅಧಿಕಾರಿಗಳಾಗಲಿ ಖಚಿತವಾಗಿ ಉತ್ತರಿಸಿಲ್ಲ. ಹೀಗಾಗಿ ಸಂಸದೀಯ ಸ್ಥಾಯಿ ಸಮಿತಿ ಮತ್ತೂಮ್ಮೆ ಇವರೆಲ್ಲರನ್ನೂ ವಾಪಸ್‌ ಕರೆಯುವ ಸಾಧ್ಯತೆ ಇದೆ. ಇದರ ಜತೆಗೆ, ಜ.20 ರಂದು ಊರ್ಜಿತ್‌ ಪಟೇಲ್‌ ಅವರನ್ನು ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯೂ ಕರೆದಿದೆ. ಅಂದು ಕೂಡ ಆರ್‌ಬಿಐ ಗವರ್ನರ್‌  ಇಂಥದ್ದೇ ಪ್ರಶ್ನೆಗಳಿಗೆ ಉತ್ತರ ನೀಡಬೇಕಿದೆ.

ಇದ್ದ ಪ್ರಮುಖರು: ವೀರಪ್ಪ ಮೊಲಿ ಅಧ್ಯಕ್ಷತೆಯ ಹಣಕಾಸು ಸಮಿತಿಯಲ್ಲಿ ಸದಸ್ಯರಾದ ಮನಮೋಹನ್‌ ಸಿಂಗ್‌, ದಿಗ್ವಿಜಯ್‌ ಸಿಂಗ್‌, ಶಿವಕುಮಾರ್‌ ಉದಾಸಿ, ಜ್ಯೋತಿರಾದಿತ್ಯ ಸಿಂಧಿಯಾ, ಸೌಗತಾ ರಾಯ್‌, ಸತೀಶ್‌ ಚಂದ್ರ ಮಿಶ್ರಾ ಸೇರಿ 31 ಮಂದಿ ಹಾಜರಿದ್ದರು.

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.