ಫಾಸ್ಟಾಗ್‌ ಜಾರಿ; ಡಿಸೆಂಬರ್‌ 15ರೊಳಗೆ ಅಳವಡಿಸಿಕೊಳ್ಳಿ

ಫಾಸ್ಟಾಗ್‌ ಇಲ್ಲದ ವಾಹನಗಳಿಗೆ ದುಪ್ಪಟ್ಟು ಶುಲ್ಕದ ಬರೆ

Team Udayavani, Dec 1, 2019, 3:58 PM IST

fastage

ಹೊಸದಿಲ್ಲಿ: ಹೆದ್ದಾರಿಯಲ್ಲಿ ಸುಲಭ ಟೋಲ್‌ ಪಾವತಿ ವ್ಯವಸ್ಥೆಗಾಗಿ ಪರಿಚಯಿಸಲಾಗಿದ್ದ ಫಾಸ್ಟಾಗ್‌ ವ್ಯವಸ್ಥೆ ಇದಿನಿಂದ ಬಹುತೇಕ ಕಡೆಗಳಲ್ಲಿ ಜಾರಿಗೆ ಬಂದಿದೆ. ಕರ್ನಾಟಕದ 36 ಟೋಲ್‌ ಪ್ಲಾಜಾಗಳನ್ನು ಒಳಗೊಂಡಂತೆ ಒಟ್ಟು 593 ಟೋಲ…ಗಳಲ್ಲಿ ಫಾಸ್ಟಾಗ್‌ ವ್ಯವಸ್ಥೆ ಜಾರಿಗೆ ಬಂದಿದೆ. ಈ ಹಿಂದೆ ಘೋಷಿಸಲಾದಂತೆ ಡಿಸೆಂಬರ್‌ 1 ಈ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ಕಡೆಯ ದಿನ ಎಂದು ನಿರ್ಧರಿಸಲಾಗಿತ್ತು.

ಆದರೆ ಸಾಕಷ್ಟು ಸಂಖ್ಯೆಯಲ್ಲಿ ಫಾಸ್ಟಾಗ್‌ಗಳು ಲಭ್ಯವಾಗದೇ ಇದ್ದ ಕಾರಣ ಡಿ. 15ರ ವರೆಗೆ ಗಡುವನ್ನು ವಿಸ್ತರಿಸಲಾಗಿದೆ. ಡಿ. 15ರ ಬಳಿಕ ಫಾಸ್ಟ್‌ಟ್ಯಾಗ್‌ಇಲ್ಲದ ವಾಹನಗಳು ಟೋಲ್‌ ಪ್ಲಾಜಾಗಳಲ್ಲಿ ನಿಗದಿತ ದರಕ್ಕಿಂತ ದುಪ್ಪಟ್ಟು ರಸ್ತೆ ಶುಲ್ಕವನ್ನು ದಂಡದ ರೂಪದಲ್ಲಿ ತೆರಬೇಕಾಗುತ್ತದೆ.

ಶೇ. 30

ರಾಷ್ಟ್ರೀಯ ಹೆದ್ದಾರಿ ಸಚಿವಾಲಯದ ಪ್ರಕಾರ ಈ ತನಕ ಶೇ. 30ರಷ್ಟು ವಾಹನಗಳು ಮಾತ್ರ ಸದ್ಯ ಫಾಸ್ಟಾಗ್‌ ಅನ್ನು ಅಳವಡಿಸಿಕೊಂಡಿದೆ. ಸುಮಾರು 70 ಲಕ್ಷಕ್ಕೂ ಹೆಚ್ಚು ಫಾಸ್ಟಾಗ್‌ಗಳು ಈ ವರೆಗೆ ಮಾರಾಟಗೊಂಡಿವೆ. ಶೇ. 70ರಷ್ಟು ವಾಹನಗಳು ಫಾಸ್ಟಾಗ್‌ನಿಂದ ದೂರ ಇದೆ.

ರೇಡಿಯೋ ಫ್ರೀಕ್ವೆನ್ಸಿ ಐಡೆಂಟಿಫೀಕೇಶನ್‌(ಆರ್‌ಎಫ್ಐಡಿ) ಎನ್ನುವ ತಂತ್ರಜ್ಞಾನ ಸಹಾಯದೊಂದಿಗೆ ಕಾರ್ಯನಿರ್ವಹಿಸುವ ಪುಟ್ಟ ಸ್ಟಿಕ್ಕರ್‌ಗಳನ್ನು 4 ಚಕ್ರ ಅಥವಾ ಅದಕ್ಕೂ ಮೀರಿದ ಯಾವುದೇ ವಾಹನಗಳ ಮುಂಭಾಗದ ಗಾಜಿನ ಬಳಿ ಅಳವಡಿಸಲಾಗುತ್ತದೆ. ಟೋಲ್‌ ಪ್ಲಾಜಾದಲ್ಲಿರುವ ಫಾಸ್ಟಾಗ್‌ಲೇನ್‌ ಮೂಲಕ ಹಾದು ಹೋದಾಗ ಸ್ವಯಂಚಾಲಿತವಾಗಿ ಆಗಿ ಸ್ಕ್ಯಾನ್‌ ಆಗುತ್ತದೆ. ಇದೇ ವೇಳೆ ಫಾಸ್ಟಾಗ್‌ಖಾತೆಯಿಂದ ಶುಲ್ಕ ಸಂದಾಯವಾಗುತ್ತದೆ. ಇದರ ನೋಟಿಫಿಕೇಶನ್‌ ಮೊಬೈಲ್‌ಗ‌ಳಿಗೆ ಎಸ್‌ಎಂಎಸ್‌ ಮೂಲಕ ಬರುತ್ತದೆ. ಈ ವ್ಯವಸ್ಥೆಯಲ್ಲಿ ವಾಹನಗಳು ಸಾಲಲ್ಲಿ ನಿಂತು, ಹಣ ಸಂದಾಯ ಮಾಡಿ, ರಶೀದಿ ಪಡೆಯುವ ಅಗತ್ಯ ಇಲ್ಲ.

ಹೊಸ ನಿಯಮ ಏನು?

ದೇಶದ ಎಲ್ಲಾ ಟೋಲ್‌ಗ‌ಳಲ್ಲಿ ಫಾಸ್ಟಾಗ್‌ ಲೇನ್‌ಗಳನ್ನು ಅಳವಡಿಸಲಾಗುತ್ತದೆ. ಅದರ ಮೂಲಕವೇ ವಾಹನಗಳು ಸಂಚರಿಸಬೇಕಾಗಿದ್ದು, ಟೋಲ್‌ ವೆಚ್ಚವನ್ನು ಫಾಸ್ಟಾಗ್‌ಮೂಲಕ ಪಾವತಿಸಬೇಕಾಗುತ್ತದೆ. ಒಂದು ವೇಳೆ ಫಾಸ್ಟಾಗ್‌ವ್ಯವಸ್ಥೆ ಅಳವಡಿಸದೇ ಇದ್ದ ವಾಹನವಾದರೆ ಟೋಲ್‌ ಮೊತ್ತದ ದುಪ್ಪಟ್ಟು ಹಣ ಪಾವತಿಸಬೇಕಾಗುತ್ತದೆ. ಟೋಲ್‌ನ ಒಂದು ಕಡೆ ಮಾತ್ರ ಫಾಸ್ಟಾಗ್‌ ಮತ್ತು ಇತರ ಪಾವತಿ ವ್ಯವಸ್ಥೆಗಳನ್ನು ಅಳವಡಿಸಲಾಗುತ್ತದೆ. ಇಲ್ಲಿ ಫಾಸ್ಟಾಗ್‌ಇಲ್ಲದ ವಾಹನಗಳು ಸರತಿ ಸಾಲಿನಲ್ಲಿ ಕಾಯಬೇಕಾಗಿ ಬರುತ್ತದೆ. ಉಳಿದ ಎಲ್ಲಾ ಲೇನ್‌ (ಪಥ)ಗಳಲ್ಲಿ ಫಾಸ್ಟಾಗ್‌ಗಳು ಮಾತ್ರ ಇರಲಿವೆ.

ಏನು ಲಾಭ?

ಈ ಫಾಸ್ಟಾಗ್‌ ವ್ಯವಸ್ಥೆಯ ಮೂಲ ಉದ್ದೇಶವೇ ಟೋಲ್‌ಗ‌ಳಲ್ಲಿ ಕ್ಯಾಶ್‌ಲೆಸ್‌ ಪೇಮೆಂಟ್‌ ಅನ್ನು ಉತ್ತೇಜಿಸುವ ಸಲುವಾಗಿ ಈ ಕ್ರಮವನ್ನು ಜಾರಿಗೆ ತರಲಾಗಿದೆ. ವಾಹನ ದಟ್ಟನೆಯನ್ನು ಕಡಿತಗೊಳಿಸುವುದು ಇದರ ಮತ್ತೂಂದು ಉದ್ದೇಶವಾಗಿದೆ. ಸರಕಾರ ಫಾಸ್ಟಾಗ್‌ವಾಹನಗಳಿಗೆ ಶೇ. 2.5 ರಿಯಾಯಿತಿಯನ್ನು ನೀಡುತ್ತದೆ.

ಫಾಸ್ಟಾಗ್‌ಎಂಬುದಕ್ಕೆ ನೀವು ರಿಚಾರ್ಜ್‌ ಮಾಡಿಸಿಕೊಳ್ಳುವ ಅಗತ್ಯ ಇಲ್ಲ. ಏಕೆಂದರೆ ಇದು ನೇರವಾಗಿ ನಿಮ್ಮ ಬ್ಯಾಂಕ್‌ ಖಾತೆಗೆ ಲಿಂಕ್‌ ಆಗಿರುವುದರಿಂದ ನಿಮ್ಮ ಖಾತೆಯಿಂದಲೇ ಹಣ ಸಂದಾಯವಾಗುತ್ತದೆ. ನೀವು ನಿಮ್ಮ ಬ್ಯಾಂಕ್‌ ಖಾತೆಯಲ್ಲಿ ಹಣವನ್ನು ಕಾಯ್ದುಕೊಂಡರೆ ಸಾಕು. ಆದರೆ ನೀವು ನಿಮ್ಮ ಫಾಸ್ಟಾಗ್‌ಅನ್ನು ಎನ್‌ಎಚ್‌ಐನ ವ್ಯಾಲೆಟ್‌ಗೆ ಲಿಂಕ್‌ ಮಾಡಿದ್ದರೆ ನೀವು ಆ ವ್ಯಾಲೆಟ್‌ ಅನ್ನು ಇತರ ಪೇಮೆಂಟ್‌ ವ್ಯವಸ್ಥೆಯ ಮೂಲಕ ರೀಚಾರ್ಜ್‌ ಮಾಡಿಸಿಕೊಳ್ಳಬೇಕು. ಪ್ರತಿಯೊಂದು ವ್ಯವಹಾರ ಹಾಗೂ ಬ್ಯಾಲೆನ್ಸ್‌ ಕಡಿಮೆಯಾದಾಗ ಗ್ರಾಹಕರಿಗೆ ಮೊಬೈಲ್‌ ಎಸ್‌ಎಂಎಸ್‌ ಸಂದೇಶ ರವಾನೆಯಾಗಲಿದೆ.

ಫಾಸ್ಟಾಗ್‌ ಕಡ್ಡಾಯದ ಗಡುವು ವಿಸ್ತರಣೆಯಾಗಿದ್ದು, ಜನರು ಟೋಲ್‌ ಕೇಂದ್ರಗಳಲ್ಲಿ ಕೊಂಡುಕೊಳ್ಳುತ್ತಿದ್ದಾರೆ. ಇದೀಗ ಡಿಸೆಂಬರ್‌ 15ರ ಗಡುವು ದಾಟಿದ ಬಳಿಕ ಯಾವುದೇ ರಿಯಾಯಿತಿಗಳು ಇರುವುದಿಲ್ಲ, ಮಾತ್ರವಲ್ಲದೇ ದುಪ್ಪಟ್ಟು ದಂಡವನ್ನು ಪಾವತಿಸಬೇಕಾಗುತ್ತದೆ.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.