ಫಾಸ್ಟಾಗ್‌ ಕಡ್ಡಾಯಕ್ಕೆ 2 ದಿನಗಳು ಮಾತ್ರ ಬಾಕಿ ; ತಪ್ಪಿದಲ್ಲಿ ದುಪ್ಪಟ್ಟು ಶುಲ್ಕದ ಬರೆ


Team Udayavani, Dec 13, 2019, 8:44 PM IST

Fastag-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಹೆದ್ದಾರಿಯಲ್ಲಿ ಸುಲಭ ಟೋಲ್‌ ಪಾವತಿ ವ್ಯವಸ್ಥೆಗಾಗಿ ಪರಿಚಯಿಸಲಾಗಿದ್ದ ಫಾಸ್ಟಾಗ್‌ ವ್ಯವಸ್ಥೆ ಬಹುತೇಕ ಕಡೆಗಳಲ್ಲಿ ಜಾರಿಗೆ ಬಂದಿದೆ. ಡಿಸೆಂಬರ್‌ 15ರಂದು ಇದು ಕಡ್ಡಾಯವಾಗಲಿದೆ. ಕರ್ನಾಟಕದ 36 ಟೋಲ್‌ ಪ್ಲಾಜಾಗಳನ್ನು ಒಳಗೊಂಡಂತೆ ಒಟ್ಟು 593 ಟೋಲ್ ಗಳಲ್ಲಿ ಫಾಸ್ಟಾಗ್‌ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಈ ಹಿಂದೆ ಡಿಸೆಂಬರ್‌ 1ರಂದು ಈ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ಕಡೆಯ ದಿನ ಎಂದು ನಿರ್ಧರಿಸಲಾಗಿತ್ತು.

ಆದರೆ ಸಾಕಷ್ಟು ಸಂಖ್ಯೆಯಲ್ಲಿ ಫಾಸ್ಟಾಗ್‌ಗಳು ಲಭ್ಯವಾಗದೇ ಇದ್ದ ಕಾರಣ ಡಿ. 15ರವರೆಗೆ ಗಡುವನ್ನು ವಿಸ್ತರಿಸಲಾಗಿತ್ತು. ಡಿ. 15ರ ಬಳಿಕ ಫಾಸ್ಟ್‌ಟ್ಯಾಗ್‌ಇಲ್ಲದ ವಾಹನಗಳು ಟೋಲ್ ಪ್ಲಾಜಾಗಳಲ್ಲಿ ನಿಗದಿತ ದರಕ್ಕಿಂತ ದುಪ್ಪಟ್ಟು ರಸ್ತೆ ಶುಲ್ಕವನ್ನು ದಂಡದ ರೂಪದಲ್ಲಿ ತೆರಬೇಕಾಗುತ್ತದೆ. ಈ ದಿನಾಂಕವನ್ನು ಇನ್ನು ವಿಸ್ತರಿಸುವುದು ಅನುಮಾನ.

ಹೇಗೆ ಕಾರ್ಯನಿರ್ವಹಿಸುತ್ತದೆ
ರೇಡಿಯೋ ಫ್ರೀಕ್ವೆನ್ಸಿ ಐಡೆಂಟಿಫೀಕೇಶನ್‌ (ಆರ್‌ಎಫ್ಐಡಿ) ಎನ್ನುವ ತಂತ್ರಜ್ಞಾನ ಸಹಾಯದೊಂದಿಗೆ ಕಾರ್ಯನಿರ್ವಹಿಸುವ ಪುಟ್ಟ ಸ್ಟಿಕ್ಕರ್‌ಗಳನ್ನು 4 ಚಕ್ರ ಅಥವಾ ಅದಕ್ಕೂ ಮೀರಿದ ಯಾವುದೇ ವಾಹನಗಳ ಮುಂಭಾಗದ ಗಾಜಿನ ಬಳಿ ಅಳವಡಿಸಲಾಗುತ್ತದೆ.

ಟೋಲ್‌ ಪ್ಲಾಜಾದಲ್ಲಿರುವ ಫಾಸ್ಟಾಗ್‌ಲೇನ್‌ ಮೂಲಕ ಹಾದು ಹೋದಾಗ ಸ್ವಯಂಚಾಲಿತವಾಗಿ ಆಗಿ ಸ್ಕ್ಯಾನ್‌ ಆಗುತ್ತದೆ. ಇದೇ ವೇಳೆ ಫಾಸ್ಟಾಗ್‌ ಖಾತೆಯಿಂದ ಶುಲ್ಕ ಸಂದಾಯವಾಗುತ್ತದೆ. ಇದರ ನೋಟಿಫಿಕೇಶನ್‌ ಮೊಬೈಲ್‌ಗ‌ಳಿಗೆ ಎಸ್‌ಎಂಎಸ್‌ ಮೂಲಕ ಬರುತ್ತದೆ. ಈ ವ್ಯವಸ್ಥೆಯಲ್ಲಿ ವಾಹನಗಳು ಸಾಲಲ್ಲಿ ನಿಂತು, ಹಣ ಸಂದಾಯ ಮಾಡಿ, ರಶೀದಿ ಪಡೆಯುವ ಅಗತ್ಯ ಇಲ್ಲ.

ಹೊಸ ನಿಯಮ ಏನು?
ದೇಶದ ಎಲ್ಲಾ ಟೋಲ್‌ಗ‌ಳಲ್ಲಿ ಫಾಸ್ಟಾಗ್‌ ಲೇನ್‌ಗಳನ್ನು ಅಳವಡಿಸಲಾಗುತ್ತದೆ. ಅದರ ಮೂಲಕವೇ ವಾಹನಗಳು ಸಂಚರಿಸಬೇಕಾಗಿದ್ದು, ಟೋಲ್‌ ವೆಚ್ಚವನ್ನು ಫಾಸ್ಟಾಗ್‌ ಮೂಲಕ ಪಾವತಿಸಬೇಕಾಗುತ್ತದೆ. ಒಂದು ವೇಳೆ ಫಾಸ್ಟಾಗ್‌ ವ್ಯವಸ್ಥೆ ಅಳವಡಿಸದೇ ಇದ್ದ ವಾಹನವಾದರೆ ಟೋಲ್‌ ಮೊತ್ತದ ದುಪ್ಪಟ್ಟು ಹಣ ಪಾವತಿಸಬೇಕಾಗುತ್ತದೆ. ಟೋಲ್‌ನ ಒಂದು ಕಡೆ ಮಾತ್ರ ಫಾಸ್ಟಾಗ್‌ ಮತ್ತು ಇತರ ಪಾವತಿ ವ್ಯವಸ್ಥೆಗಳನ್ನು ಅಳವಡಿಸಲಾಗುತ್ತದೆ. ಇಲ್ಲಿ ಫಾಸ್ಟಾಗ್‌ ಇಲ್ಲದ ವಾಹನಗಳು ಸರತಿ ಸಾಲಿನಲ್ಲಿ ಕಾಯಬೇಕಾಗಿ ಬರುತ್ತದೆ. ಉಳಿದ ಎಲ್ಲಾ ಲೇನ್‌ ಗಳಲ್ಲಿ (ಪಥ) ಫಾಸ್ಟಾಗ್‌ಗಳು ಮಾತ್ರ ಇರಲಿವೆ.

ಏನು ಲಾಭ?
ಈ ಫಾಸ್ಟಾಗ್‌ ವ್ಯವಸ್ಥೆಯ ಮೂಲ ಉದ್ದೇಶವೇ ಟೋಲ್‌ಗ‌ಳಲ್ಲಿ ಕ್ಯಾಶ್‌ಲೆಸ್‌ ಪೇಮೆಂಟ್‌ ಅನ್ನು ಉತ್ತೇಜಿಸುವುದು. ವಾಹನ ದಟ್ಟನೆಯನ್ನು ಕಡಿತಗೊಳಿಸುವುದು ಇದರ ಮತ್ತೂಂದು ಉದ್ದೇಶವಾಗಿದೆ. ಸರಕಾರ ಫಾಸ್ಟಾಗ್‌ ವಾಹನಗಳಿಗೆ ಶೇ. 2.5 ರಿಯಾಯಿತಿಯನ್ನು ನೀಡುತ್ತದೆ.

ಫಾಸ್ಟಾಗ್‌ ಎಂಬುದಕ್ಕೆ ನೀವು ರಿಚಾರ್ಜ್‌ ಮಾಡಿಸಿಕೊಳ್ಳುವ ಅಗತ್ಯ ಇಲ್ಲ. ಏಕೆಂದರೆ ಇದು ನೇರವಾಗಿ ನಿಮ್ಮ ಬ್ಯಾಂಕ್‌ ಖಾತೆಗೆ ಲಿಂಕ್‌ ಆಗಿರುವುದರಿಂದ ನಿಮ್ಮ ಖಾತೆಯಿಂದಲೇ ಹಣ ಸಂದಾಯವಾಗುತ್ತದೆ. ನೀವು ನಿಮ್ಮ ಬ್ಯಾಂಕ್‌ ಖಾತೆಯಲ್ಲಿ ಹಣವನ್ನು ಕಾಯ್ದುಕೊಂಡರೆ ಸಾಕು.

ಆದರೆ ನೀವು ನಿಮ್ಮ ಫಾಸ್ಟಾಗ್‌ ಅನ್ನು ಎನ್‌ಎಚ್‌ಐನ ವ್ಯಾಲೆಟ್‌ಗೆ ಲಿಂಕ್‌ ಮಾಡಿದ್ದರೆ ನೀವು ಆ ವ್ಯಾಲೆಟ್‌ ಅನ್ನು ಇತರ ಪೇಮೆಂಟ್‌ ವ್ಯವಸ್ಥೆಯ ಮೂಲಕ ರೀಚಾರ್ಜ್‌ ಮಾಡಿಸಿಕೊಳ್ಳಬೇಕು. ಪ್ರತಿಯೊಂದು ವ್ಯವಹಾರ ಹಾಗೂ ಬ್ಯಾಲೆನ್ಸ್‌ ಕಡಿಮೆಯಾದಾಗ ಗ್ರಾಹಕರಿಗೆ ಮೊಬೈಲ್‌ ಎಸ್‌ಎಂಎಸ್‌ ಸಂದೇಶ ರವಾನೆಯಾಗಲಿದೆ.

ಫಾಸ್ಟಾಗ್‌ ಕಡ್ಡಾಯದ ಗಡುವು ವಿಸ್ತರಣೆಯಾಗಿದ್ದು, ಜನರು ಟೋಲ್‌ ಕೇಂದ್ರಗಳಲ್ಲಿ ಕೊಂಡುಕೊಳ್ಳುತ್ತಿದ್ದಾರೆ. ಇದೀಗ ಡಿಸೆಂಬರ್‌ 15ರ ಗಡುವು ದಾಟಿದ ಬಳಿಕ ಯಾವುದೇ ರಿಯಾಯಿತಿಗಳು ಇರುವುದಿಲ್ಲ, ಮಾತ್ರವಲ್ಲದೇ ದುಪ್ಪಟ್ಟು ದಂಡವನ್ನು ಪಾವತಿಸಬೇಕಾಗುತ್ತದೆ.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.