Video: ಗೃಹಬಂಧನ ಭೀತಿ; ಕಾಂಗ್ರೆಸ್ ಕಚೇರಿಯಲ್ಲೇ ರಾತ್ರಿ ಕಳೆದ ಜಗನ್ ಸಹೋದರಿ ವೈಎಸ್ ಶರ್ಮಿಳಾ


Team Udayavani, Feb 22, 2024, 10:52 AM IST

ಗೃಹಬಂಧನ ಭೀತಿ… ಕಾಂಗ್ರೆಸ್ ಕಚೇರಿಯಲ್ಲೇ ರಾತ್ರಿ ಕಳೆದ ಜಗನ್ ಸಹೋದರಿ ವೈಎಸ್ ಶರ್ಮಿಳಾ

ವಿಜಯವಾಡ: ನಿರುದ್ಯೋಗಿ ಯುವಕರು ಮತ್ತು ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಜಗನ್ಮೋಹನ್ ರೆಡ್ಡಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ಪ್ರತಿಭಟನೆ ಇಳಿದಿದೆ.

ಇದರ ಮುಂದುವರೆದ ಭಾಗವಾಗಿ ಆಂಧ್ರಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ವೈಎಸ್ ಶರ್ಮಿಳಾ ರೆಡ್ಡಿ (ಸಿಎಂ ಜಗನ್ಮೋಹನ್ ಸಹೋದರಿ) ಗುರುವಾರ ವಿಜಯವಾಡದಲ್ಲಿ ‘ಚಲೋ ಸೆಕ್ರೆಟರಿಯೇಟ್’ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಇದರ ಹಿನ್ನೆಲೆಯಲ್ಲಿ ಆಂಧ್ರ ಮುಖ್ಯಮಂತ್ರಿಗಳು ಪ್ರತಿಭಟನೆಯಲ್ಲಿ ಭಾಗವಹಿಸದಂತೆ ತಡೆಯಲು ರಾಜ್ಯಾದ್ಯಂತ ಕಾಂಗ್ರೆಸ್ ಮುಖಂಡರನ್ನು ಬಂಧಿಸಿ ‘ಗೃಹಬಂಧನ’ದಲ್ಲಿ ಇರಿಸಲು ಆದೇಶ ನೀಡಿದ್ದಾರೆ. ಇದರ ಬಗ್ಗೆ ಆರೋಪ ಎತ್ತಿರುವ ಜಗನ್ ಸಹೋದರಿ ಶರ್ಮಿಳಾ ಗೃಹ ಬಂಧನದಿಂದ ಪಾರಾಗಲು ಕಾಂಗ್ರೆಸ್ ಕಚೇರಿಯಲ್ಲೇ ರಾತ್ರಿ ಇಡೀ ಕಳೆದಿದ್ದಾರೆ.

ವಿಜಯವಾಡದ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್‌ ಅಧ್ಯಕ್ಷೆ ವೈ.ಎಸ್‌.ಶರ್ಮಿಳಾ ರೆಡ್ಡಿ ಮಲಗಿರುವ ವಿಡಿಯೋ ವೈರಲ್ ಆಗಿದೆ.

ರಾಜ್ಯ ಸರಕಾರ ಮೊದಲು ನಿರುದ್ಯೋಗಿ ಯುವಕರು ಮತ್ತು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಒತ್ತಾಯಿಸಿದ ಶರ್ಮಿಳಾ ಆಡಳಿತ ಪಕ್ಷದ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ. ವಿಜಯವಾಡದ ಆಂಧ್ರರತ್ನ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಐದು ವರ್ಷಗಳಲ್ಲಿ ಯುವಕರು, ನಿರುದ್ಯೋಗಿಗಳು ಮತ್ತು ವಿದ್ಯಾರ್ಥಿಗಳ ಪ್ರಮುಖ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಹೇಳಿದ್ದಾರೆ.

ಈ ಕುರಿತು ತಮ್ಮ X ಖಾತೆಯಲ್ಲಿ ಬರೆದಿರುವ ಶರ್ಮಿಳಾ ‘ನಾವು ನಿರುದ್ಯೋಗಿಗಳ ಪರವಾಗಿ ಪ್ರತಿಭಟನೆಗೆ ಕರೆ ನೀಡಿದರೆ, ನೀವು ನಮ್ಮನ್ನು ಗೃಹಬಂಧನದಲ್ಲಿ ಇರಿಸಲು ಪ್ರಯತ್ನಿಸುತ್ತೀರಾ? ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡುವ ಹಕ್ಕು ನಮಗಿಲ್ಲವೇ? ನಾಚಿಕೆಗೇಡಿನ ಸಂಗತಿಯಲ್ಲವೇ ಮಹಿಳೆಯಾಗಿ ನಾನು ಪೊಲೀಸರಿಂದ ತಪ್ಪಿಸಿಕೊಳ್ಳಲು ಮತ್ತು ಗೃಹಬಂಧನವನ್ನು ತಪ್ಪಿಸಲು ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ರಾತ್ರಿ ಕಳೆಯುವ ಸ್ಥಿತಿ ಬಂದಿದೆ ಎಂದು ಬರೆದುಕೊಂಡಿದ್ದಾರೆ.

 

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.