ನಡು ರಸ್ತೆಯಲ್ಲೇ ಪ್ರಾಧ್ಯಾಪಕಿ ಮೇಲೆ ಹಲ್ಲೆ ನಡೆಸಿ ಎಳೆದೊಯ್ದು ದರೋಡೆ: ವಿಡಿಯೋ ವೈರಲ್
Team Udayavani, Mar 16, 2023, 2:50 PM IST
ಚೆನ್ನೈ: ನಡು ರಸ್ತೆಯಲ್ಲೇ ಮಹಿಳಾ ಪ್ರಾಧ್ಯಾಪಕಿಯೊಬ್ಬರ ಮೇಲೆ ಹಲ್ಲೆ ನೆಡೆಸಿ ಎಳೆದುಕೊಂಡು ಹೋಗಿ ದರೋಡೆಗೈದ ಘಟನೆ ತಮಿಳುನಾಡಿನ ತಿರುಚಿನಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಅಣ್ಣಾ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಸೀತಾಲಕ್ಷ್ಮಿ( 53) ಗಾಯಗೊಂಡ ಮಹಿಳೆ. ಇತ್ತೀಚೆಗೆ ಸೀತಾಲಕ್ಷ್ಮೀ ಶಾಲೆಯ ಬಳಿ ನಡೆದುಕೊಂಡು ಹೋಗುವ ವೇಳೆ ವ್ಯಕ್ತಿಯೊಬ್ಬ ಮರದ ಹಲಗೆಯಿಂದ ಹಲ್ಲೆ ಮಾಡಿದ್ದಾನೆ. ಏಟು ತಿಂದ ಪರಿಣಾಮ ಸೀತಾಲಕ್ಷ್ಮೀ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದಾರೆ.
ಆ ಬಳಿಕ ಆರೋಪಿ ಸೀತಾಲಕ್ಷ್ಮೀ ಅವರನ್ನು ರಸ್ತೆಯಲ್ಲೇ ಎಳೆದುಕೊಂಡು ಹೋಗಿ ಅವರ ಸ್ಕೂಟಿಯ ಕೀಯನ್ನು ಪಡೆದುಕೊಂಡು ಮೊಬೈಲ್ ಫೋನ್ ಎಳೆದುಕೊಂಡು ಘಟನಾ ಸ್ಥಳದಿಂದ ಪರಾರಿಯಾಗಿದ್ದಾನೆ.
ಇದನ್ನೂ ಓದಿ: ಅಮೆರಿಕಾದ ಜಿಮ್ ನಲ್ಲಿ ವರ್ಕೌಟ್ ಮಾಡುವಾಗ ಪಂಜಾಬಿ ನಟನ ಮೇಲೆ ಚೂರಿಯಿಂದ ದಾಳಿ
ಈ ಕುರಿತು ಗಾಯಾಳು ಸೀತಾಲಕ್ಷ್ಮಿ ಅವರ ದೂರಿನ ಆಧಾರದ ಮೇಲೆ ಪೊಲೀಸರು ತಮಿಳುನಾಡಿನ ಪಜಮನಾರಿ ಮೂಲದ ಸೆಂಥಿಲ್ ಕುಮಾರ್ ಅವರನ್ನು ಬಂಧಿಸಿದ್ದಾರೆ.
ಪೊಲೀಸರು ಸೆಂಥಿಲ್ ಕುಮಾರ್ ನನ್ನು ಬಂಧಿಸಲು ತೆರಳುವಾಗ ಆತ ಪೊಲೀಸರಿಂದ ತಪ್ಪಿಸುವ ಭರದಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗಿ ಅಪಘಾತ ಮಾಡಿಕೊಂಡಿದ್ದಾನೆ. ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸೀತಾಲಕ್ಷ್ಮೀ ಅವರನ್ನು ಎಳೆದುಕೊಂಡು ಹೋಗುವ ವಿಡಿಯೋ ವೈರಲ್ ಆಗಿದ್ದು, ಸಾರ್ವಜನಿಕವಾಗಿ ಈ ರೀತಿಯ ವರ್ತನೆ ಕಂಡು ಜನ ಬೆಚ್ಚಿ ಬಿದ್ದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ