ಸೇನೆಯ ಮಿನಿ ಸರ್ಜಿಕಲ್ ಸ್ಟ್ರೈಕ್ ಗೆ 15 ಪಾಕ್ ಯೋಧರು ಮತ್ತು 8 ಉಗ್ರರು ಬಲಿ
Team Udayavani, Apr 12, 2020, 5:55 PM IST
ಶ್ರೀನಗರ: ಭಾರತ ಮತ್ತು ಪಾಕಿಸ್ತಾನದ ಗಡಿ ನಿಯಂತ್ರಣ ರೇಖೆಯ ಖೇರನ್ ಸೆಕ್ಟರ್ ನ ದೂಧ್ ನಿಯಾಲ್ ಎಂಬಲ್ಲಿ ಭಾರತೀಯ ಭದ್ರತಾ ಪಡೆಗಳು ಉಗ್ರರು ಹಾಗೂ ಪಾಕ್ ನೆಲದಲ್ಲಿನ ಉಗ್ರ ಶಿಬಿರಗಳ ಮೇಲೆ ಎಪ್ರಿಲ್ 10ರಂದು ನಡೆಸಿದ್ದ ಪ್ರತೀಕಾರ ದಾಳಿಯಲ್ಲಿ 15 ಪಾಕ್ ಯೋಧರು, 8 ಉಗ್ರಗಾಮಿಗಳು ಹಾಗೂ ಇತರೇ ಇಬ್ಬರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಗುಪ್ತಚರ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.
ಗಡಿಯಲ್ಲಿ ಉಗ್ರರ ವಿರುದ್ಧದ ಆಪರೇಷನ್ ‘ರಂಡೋರಿ ಬೆಹಕ್’ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಭಾರತೀಯ ವಿಶೇಷ ಪಡೆಯ ಐವರು ಕಮಾಂಡೋಗಳನ್ನು ಹತ್ಯೆ ಮಾಡಿದ್ದ ಪಾಕಿಸ್ಥಾನಿ ಉಗ್ರರ ವಿರುದ್ಧ ಭಾರತೀಯ ಸೇನೆ ಸೇಡು ತೀರಿಸಿಕೊಂಡಿದೆ. ಗಡಿ ನಿಯಂತ್ರಣ ರೇಖೆಗೆ ಸನಿಹದಲ್ಲಿದ್ದ ಪಾಕ್ ಆಕ್ರಮಿತ ಕಾಶ್ಮೀರ ನೆಲದಲ್ಲಿ ದಾಳಿ ನಡೆಸಿ ಉಗ್ರರ ಅಡಗುದಾಣಗಳನ್ನು ಧ್ವಂಸಗೊಳಿಸಿದೆ.
ಕಮಾಂಡೋಗಳ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳಲು ಕಾಯುತ್ತಿದ್ದ ಭಾರತೀಯಸೇನೆಯನ್ನು ಪಾಕ್ ಶುಕ್ರವಾರ ರಾತ್ರಿ ಕೆಣಕಿ ಚೆಕ್ಪೋಸ್ಟ್ಗಳ ಕಡೆಗೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿತ್ತು. ಇದಕ್ಕೆ ತಿರುಗೇಟು ನೀಡಿದ ಸೇನೆಯು ವಾಯುದಾಳಿ ನಡೆಸಿ, ಎಲ್ಒಸಿ ಆಚೆ ಬದಿಯ ಉಗ್ರರ ಅಡಗುದಾಣಗಳನ್ನು ಧ್ವಂಸಗೊಳಿಸಿದೆ.
ಪಾಕಿಸ್ಥಾನದ ಕದನ ವಿರಾಮ ಉಲ್ಲಂಘನೆಗೆ ಪ್ರತೀಕಾರವಾಗಿ ಪಾಕ್ ಆಕ್ರಮಿತ ಕಾಶ್ಮೀರ ಭಾಗದಲ್ಲಿರುವ ಉಗ್ರ ನೆಲೆಗಳು ಹಾಗೂ ಸೇನಾ ನೆಲೆಗಳ ಮೇಲೆ ದಾಳಿ ನಡೆಸಲು ಭಾರತೀಯ ಸೇನೆ ಕೃಷ್ಣಗಂಗಾ ನದಿ ತಟದ ದೂಧ್ ನಿಯಾಲ್ ಪ್ರದೇಶವನ್ನು ಗುರಿಮಾಡಿಕೊಂಡಿತ್ತು. ಬೆಟ್ಟಗಳಿಂದಾವೃತವಾಗಿರುವ ಈ ಪಟ್ಟಣದಲ್ಲಿರುವ ಕೇರನ್ ಸೆಕ್ಟರ್ ನಲ್ಲಿ ಎಪ್ರಿಲ್ 5ರಂದು ವಿಶೇಷ ಕಾರ್ಯಾಚರಣೆ ನಡೆಸಿದ್ದ ಸೇನೆಯ ವಿಶೇಷ ಕಮಾಂಡೋ ದಳಗಳು ಐವರು ಉಗ್ರಗಾಮಿಗಳನ್ನು ಸದೆಬಡಿಯುವಲ್ಲಿ ಯಶಸ್ವಿಯಾಗಿತ್ತು.
ಭಾರತದ ಕಡೆಯಿಂದ ನಡೆದಿರುವ ಸೇನಾ ದಾಳಿಯನ್ನು ಪಾಕ್ ಸೇನೆ ಖಚಿತಪಡಿಸಿದೆ. ಗಡಿನಿಯಂತ್ರನ ರೇಖೆಯುದ್ದಕ್ಕೂ ಶಾರ್ದಾ, ದೂಧ್ ನಿಯಾಲ್ ಮತ್ತು ಶಾಹ್ ಕೋಟ್ ಸೆಕ್ಟರ್ ಗಳಲ್ಲಿ ಭಾರತೀಯ ಸೇನೆ ಫೈರಿಂಗ್ ನಡೆಸಿದೆ ಮತ್ತು 15 ವರ್ಷದ ಬಾಲಕಿಯೂ ಸೇರಿದಂತೆ ಈ ದಾಳಿಯಲ್ಲಿ ನಾಲ್ಕು ಜನ ನಾಗರಿಕರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪಾಕ್ ಹೇಳಿಕೊಂಡಿದೆ.
2020ರಲ್ಲಿ ಇಲ್ಲಿಯವರೆಗೆ ಭಾರತ 708 ಸಲ ಕದನ ವಿರಾಮವನ್ನು ಉಲ್ಲಂಘಿಸಿದೆ ಎಂದು ಇಸ್ಲಾಮಾಬಾದ್ ಆರೋಪಿಸಿದೆ ಮತ್ತು ಇದರಿಂದಾಗಿ ಇಬ್ಬರು ನಾಗರಿಕರು ಮೃತಪಟ್ಟಿದ್ದಾರೆ ಹಾಗೂ 42 ಜನ ಗಾಯಗೊಂಡಿದ್ದಾರೆ ಎಂದು ಪಾಕ್ ಆರೋಪಿಸಿದೆ.
ಲಷ್ಕರ್, ಜೈಶ್ ಮತ್ತು ಹಿಜ್ಬುಲ್ ಉಗ್ರ ಸಂಘಟನೆಗಳಿಗೆ ಸೇರಿದ್ದ ಸುಮಾರು 160 ಉಗ್ರರು ಭಾರತದೊಳಕ್ಕೆ ನುಸುಳಲು ಗಡಿನಿಯಂತ್ರಣ ರೇಖೆಯ ಬಳಿ ಸನ್ನದ್ಧರಾಗಿದ್ದ ಸಂದರ್ಭದಲ್ಲಿ ಭಾರತಕ್ಕೆ ಈ ದಾಳಿ ನಡೆಸದೇ ವಿಧಿಯಿರಲಿಲ್ಲ ಎಂದು ಗುಪ್ತಚರ ಮೂಲಗಳ ಮಾಹಿತಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್