Modi ವಿರುದ್ಧ ಹೋರಾಟವೊಂದೇ ಗುರಿ: ಉದ್ಧವ್ ಭೇಟಿಯಾದ ವೇಣುಗೋಪಾಲ್
Team Udayavani, Apr 17, 2023, 9:55 PM IST
ಮುಂಬಯಿ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ಅವರನ್ನು ಮಾತೋಶ್ರೀಯಲ್ಲಿ ಸೋಮವಾರ ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಹಿರಿಯ ಕಾಂಗ್ರೆಸ್ ನಾಯಕರಾದ ಬಾಳಾಸಾಹೇಬ್ ಥೋರಟ್, ಭಾಯಿ ಜಗತಾಪ್ ಅವರೊಂದಿಗೆ ಶಿವಸೇನಾ (ಉದ್ಧವ್ ಬಣ) ನಾಯಕ ಸಂಜಯ್ ರಾವುತ್ ಅವರು ಉಪಸ್ಥಿತರಿದ್ದರು.
25-30 ವರ್ಷಗಳಿಂದ ಬಿಜೆಪಿ ಜತೆ ಸಂಬಂಧ ಇಟ್ಟುಕೊಂಡಿದ್ದೇವು, ಆದರೆ ಯಾರು ಮಿತ್ರರು, ಎದುರಾಳಿ ಯಾರು ಎಂಬುದು ಅರ್ಥವಾಗಲಿಲ್ಲ. ದೇಶದಲ್ಲಿ ಪ್ರಜಾಪ್ರಭುತ್ವಕ್ಕಾಗಿ ನಾವು ಒಟ್ಟಾಗಿ ಹೋರಾಡುತ್ತೇವೆ ಎಂದು ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ ನಂತರ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಸರ್ವಾಧಿಕಾರಿ ಮೋದಿ ಸರ್ಕಾರದ ವಿರುದ್ಧ ಹೋರಾಡುವುದೊಂದೇ ನಮ್ಮ ಗುರಿ. ಶಿವಸೇನೆ, ಕಾಂಗ್ರೆಸ್ ಮತ್ತು ಇತರ ಪಕ್ಷಗಳು ತಮ್ಮದೇ ಆದ ಸಿದ್ಧಾಂತಗಳನ್ನು ಹೊಂದಿವೆ ಆದರೆ ಈ ಸಮಯದಲ್ಲಿ ದೇಶವು ದೊಡ್ಡ ಬಿಕ್ಕಟ್ಟಿನಲ್ಲಿದೆ. ಈ ಹಿಂದೆ ಇಂತಹ ಪರಿಸ್ಥಿತಿಯನ್ನು ದೇಶ ಕಂಡಿರಲಿಲ್ಲ. ಈ ವಿಚಾರದಲ್ಲಿ ಎಲ್ಲ ಪ್ರತಿಪಕ್ಷಗಳು ಒಟ್ಟಾಗಿವೆ. ಈ ಬಗ್ಗೆ ಮಾತನಾಡಿದ್ದೇವೆ, ಒಟ್ಟಾಗಿ ಹೋರಾಟ ಮಾಡುತ್ತೇವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ