ಇನ್ನು ಫೈಟರ್ ಜೆಟ್ ಇಂಜಿನ್ ಗಳು ಭಾರತದಲ್ಲೇ ತಯಾರಾಗಲಿವೆ: ಯುಎಸ್ ಕಂಪನಿ ಜತೆ ಮೋದಿ ಒಪ್ಪಂದ
Team Udayavani, Jun 22, 2023, 5:36 PM IST
ವಾಷಿಂಗ್ಟನ್: ನರೇಂದ್ರ ಮೋದಿ ಸರ್ಕಾರದ ಮೇಕ್ ಇನ್ ಇಂಡಿಯಾ ಯೋಜನೆಗೆ ಭಾರಿ ಉತ್ತೇಜನ ನೀಡುವಲ್ಲಿ, ಜನರಲ್ ಎಲೆಕ್ಟ್ರಿಕ್ ನ ಏರೋಸ್ಪೇಸ್ ಆರ್ಮ್ ಭಾರತದಲ್ಲಿ ಭಾರತೀಯ ವಾಯುಪಡೆಗಾಗಿ ಫೈಟರ್ ಜೆಟ್ ಎಂಜಿನ್ ಗಳನ್ನು ತಯಾರಿಸಲು ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ನೊಂದಿಗೆ ಕೈಜೋಡಿಸಿದೆ ಎಂದು ಇಂದು ಘೋಷಿಸಿದೆ.
ವಾಷಿಂಗ್ಟನ್ ನಲ್ಲಿ ಜನರಲ್ ಎಲೆಕ್ಟ್ರಿಕ್ ಅಧ್ಯಕ್ಷ ಎಚ್ ಲಾರೆನ್ಸ್ ಕಲ್ಪ್ ಜೂನಿಯರ್ ಅವರನ್ನು ಪ್ರಧಾನಿ ಮೋದಿ ಭೇಟಿಯಾದ ಕೆಲವೇ ಗಂಟೆಗಳ ನಂತರ ಈ ಘೋಷಣೆ ಹೊರಬಿದ್ದಿದೆ.
ಸಭೆಯ ನಂತರ, ಪ್ರಧಾನ ಮಂತ್ರಿ ಕಚೇರಿಯು ಜಿಇ ಮುಖ್ಯಸ್ಥರೊಂದಿಗೆ ಅವರ ಫೋಟೋಗಳನ್ನು ಟ್ವೀಟ್ ಮಾಡಿದೆ. “ಪ್ರಧಾನಿ ಮೋದಿ ಅವರು ಜನರಲ್ ಎಲೆಕ್ಟ್ರಿಕ್ ನ ಸಿಇಓ, ಎಚ್. ಲಾರೆನ್ಸ್ ಕಲ್ಪ್ ಜೂನಿಯರ್ ಅವರೊಂದಿಗೆ ಉತ್ಪಾದಕ ಚರ್ಚೆಗಳನ್ನು ನಡೆಸಿದರು. ಅವರು ಭಾರತದಲ್ಲಿ ಉತ್ಪಾದನೆಯನ್ನು ಉತ್ತೇಜಿಸಲು ಜಿ.ಇ ಯ ಹೆಚ್ಚಿನ ತಂತ್ರಜ್ಞಾನದ ಸಹಯೋಗದ ಕುರಿತು ಚರ್ಚಿಸಿದರು” ಎಂದು ಟ್ವೀಟ್ ಮಾಡಿದೆ.
ಇದನ್ನೂ ಓದಿ:Goa”ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವ” ಅಂಗೀಕರಿಸಲ್ಪಟ್ಟ 12 ಠರಾವು
ಜಿಇ ಏರೋಸ್ಪೇಸ್ ಬಿಡುಗಡೆ ಮಾಡಿದ ಹೇಳಿಕೆಯು ಪ್ರಧಾನಿ ಮೋದಿಯವರ ಯುಎಸ್ ಪ್ರವಾಸದ ನಡುವೆ ತನ್ನ ಒಪ್ಪಂದವು “ಒಂದು ಪ್ರಮುಖ ಮೈಲಿಗಲ್ಲು” ಮತ್ತು “ಎರಡೂ ದೇಶಗಳ ನಡುವಿನ ರಕ್ಷಣಾ ಸಹಕಾರವನ್ನು ಬಲಪಡಿಸುವಲ್ಲಿ ಪ್ರಮುಖ ಅಂಶವಾಗಿದೆ” ಎಂದು ಹೇಳಿದೆ.
ಒಪ್ಪಂದವು ಭಾರತದಲ್ಲಿ ಜಿ.ಇ (GE) ಏರೋಸ್ಪೇಸ್ ನ F414 ಎಂಜಿನ್ ಗಳ ಸಂಭಾವ್ಯ ಜಂಟಿ ಉತ್ಪಾದನೆಯನ್ನು ಒಳಗೊಂಡಿದೆ ಎಂದು ಹೇಳಿಕೆ ತಿಳಿಸಿದೆ. “ಜಿಇ ಏರೋಸ್ಪೇಸ್ ಇದಕ್ಕಾಗಿ ಅಗತ್ಯ ರಫ್ತು ಅಧಿಕಾರವನ್ನು ಪಡೆಯಲು ಅಮೆರಿಕ ಸರ್ಕಾರದೊಂದಿಗೆ ಕೆಲಸ ಮಾಡುವುದನ್ನು ಮುಂದುವರೆಸಿದೆ. ಈ ಪ್ರಯತ್ನವು ಭಾರತೀಯ ವಾಯುಪಡೆಯ ಲಘು ಯುದ್ಧ ವಿಮಾನ Mk2 ಕಾರ್ಯಕ್ರಮದ ಭಾಗವಾಗಿದೆ” ಎಂದು ಅದು ಹೇಳಿದೆ.
ಜಿ.ಇ ಮುಖ್ಯಸ್ಥ ಎಚ್ ಲಾರೆನ್ಸ್ ಕಲ್ಪ್ ಜೂನಿಯರ್ ಒಪ್ಪಂದವನ್ನು “ಐತಿಹಾಸಿಕ” ಎಂದು ಕರೆದರು. ಭಾರತ ಮತ್ತು ಎಚ್ಎಎಲ್ ನೊಂದಿಗಿನ ನಮ್ಮ ದೀರ್ಘಕಾಲದ ಪಾಲುದಾರಿಕೆಯಿಂದ ಇದು ಐತಿಹಾಸಿಕ ಒಪ್ಪಂದವಾಗಿದೆ ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ