ದಕ್ಷಿಣದ ಭಾಷೆಗಳಿಗೆ ಫೈಲ್ಸ್ ಡಬ್ಬಿಂಗ್
Team Udayavani, Mar 21, 2022, 7:15 AM IST
ಹೊಸದಿಲ್ಲಿ: ದೇಶಾದ್ಯಂತ ಭಾರೀ ಮೆಚ್ಚುಗೆ ಪಡೆಯುತ್ತಿರುವ “ದಿ ಕಾಶ್ಮೀರ್ ಫೈಲ್ಸ್’ ಸಿನೆಮಾವನ್ನು ದಕ್ಷಿಣ ಭಾರತದ ನಾಲ್ಕು ಭಾಷೆಗಳಿಗೆ ಡಬ್ಬಿಂಗ್ ಮಾಡುವುದಾಗಿ ಚಿತ್ರತಂಡ ಘೋಷಿಸಿದೆ.
ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಕ್ಕೆೆ ಡಬ್ ಆಗಲಿದೆ. ಆದರೆ ಡಬ್ಬಿಂಗ್ ಆಗಿರುವ ಚಿತ್ರ ಯಾವಾಗ ತೆರೆ ಕಾಣಲಿದೆ ಎನ್ನುವ ಬಗ್ಗೆ ಇನ್ನೂ ಯಾವುದೇ ಮಾಹಿತಿ ಕೊಟ್ಟಿಲ್ಲ.
ಡಬ್ ಆದ ಚಿತ್ರ ಬರುವವರೆಗೂ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಮತ್ತು ಕೇರಳದಲ್ಲಿ ಸಿನೆಮಾವನ್ನು ಸಬ್ಟೈಟಲ್ಗಳೊಂದಿಗೆ ಪ್ರಸಾರ ಮಾಡಲಾಗುವುದು ಎಂದು ತಿಳಿಸಲಾಗಿದೆ.
ಕೆಲವು ದಿನಗಳ ಹಿಂದಷ್ಟೇ ಕರ್ನಾಟಕ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಸಿನೆಮಾವನ್ನು ಕನ್ನಡಕ್ಕೆ ಡಬ್ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದರು.
ಪಾಕಿಸ್ಥಾನ ಕಾರಣ: ಜಮ್ಮು ಕಾಶ್ಮೀರದಲ್ಲಿ ನಡೆದಿದ್ದ ಕಾಶ್ಮೀರಿ ಪಂಡಿತರ ಹತ್ಯೆ ಘಟನೆಗಳಿಗೆ ಪಾಕಿಸ್ಥಾನ ಮತ್ತು ಉಗ್ರಗಾಮಿಗಳೇ ಕಾರಣ. ನಾಗರಿಕ ಸಮಾಜಗಳು ಇವುಗಳ ವಿರುದ್ಧ ನಿಲ್ಲಬೇಕು ಎಂದು ಕಾಂಗ್ರೆಸ್ನ ಹಿರಿಯ ಮುಖಂಡ ಗುಲಾಂ ನಬಿ ಆಜಾದ್ ಹೇಳಿದ್ದಾರೆ.
ಖೇರ್ ತಾಯಿಯೂ ಭಾವುಕ
“ದ ಕಾಶ್ಮೀರ್ ಫೈಲ್ಸ್ ‘ ಸಿನೆಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ಅನುಪಮ್ ಖೇರ್, ತಮ್ಮ ತಾಯಿ ದುಲಾರಿ ಅವರೊಂದಿಗೆ ಸಿನೆಮಾ ಬಗ್ಗೆ ಮಾತನಾಡಿರುವ ವೀಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಮೂಲತಃ ಕಾಶ್ಮೀರಿ ಪಂಡಿತರೇ ಆಗಿರುವ ದುಲಾರಿ ಅವರು, ಹೊಸ ಮನೆ ಕಟ್ಟಿಕೊಂಡಿದ್ದ ನನ್ನ ತಮ್ಮನಿಗೆ ಇದ್ದಕ್ಕಿದ್ದಂತೆ ಮನೆ ಬಿಟ್ಟು ಓಡಿ ಹೋಗುವಂತೆ ಮಾಡಿದರು. ಅವನು ಎಲ್ಲವನ್ನೂ ಬಿಟ್ಟು ಟೆಂಟ್ ಒಂದರಲ್ಲಿ ಬದುಕಿದ. ಅದೇ ಕೊರಗಿನಲ್ಲೇ ಪ್ರಾಣ ಬಿಟ್ಟ. ಇದು ನಿಜಕ್ಕೂ ಸರಿಯಾದ ಸಿನೆಮಾ. ಕಾಶ್ಮೀರದಲ್ಲಿ ಏನಾಯಿತೋ ಅದನ್ನೇ ತೋರಿಸಿದ್ದರಿಂದ ಸಿನೆಮಾ ಗೆದ್ದಿದೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!