ಪ್ಯಾನ್- ಆಧಾರ್ ಲಿಂಕ್ ಇಲ್ಲದಿದ್ದರೆ ರಿಟರ್ನ್ಸ್ ಸಲ್ಲಿಕೆ ಆಗೋಲ್ಲ
Team Udayavani, Aug 31, 2017, 6:40 AM IST
ಹೊಸದಿಲ್ಲಿ: ಪ್ಯಾನ್ ಕಾರ್ಡ್ ಮತ್ತು ಆಧಾರ್ ಲಿಂಕ್ ಮಾಡಲು ಗುರುವಾರ ಕೊನೆಯ ದಿನ. ಲಿಂಕ್ ಮಾಡಿಕೊಳ್ಳದಿದ್ದವರು ಕೂಡಲೇ ಅದನ್ನು ಮಾಡಿಸುವಂತೆ ಆದಾಯ ತೆರಿಗೆ ಇಲಾಖೆ ಮನವಿ ಮಾಡಿದೆ. ಅಂಥ ಕ್ರಮ ಕೈಗೊಳ್ಳದಿದ್ದರೆ ರಿಟರ್ನ್ಸ್ ಸಲ್ಲಿಕೆ ಮಾಡಲು ಸಾಧ್ಯವಾಗಲಾರದು. ಇದೇ ವೇಳೆ ಗುರುವಾರ ಹಣಕಾಸು ಇಲಾಖೆ ಸಭೆಯಲ್ಲಿ ದಿನಾಂಕ ವಿಸ್ತರಣೆಗೆ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.
ಅರ್ಜಿಗಳ ವಿಚಾರಣೆ ನವೆಂಬರ್ನಿಂದ: ಸುಪ್ರೀಂ
ಸರಕಾರಿ ಯೋಜನೆಗಳ ಲಾಭ ಪಡೆಯಲು ಆಧಾರ್ ಬೇಕು ಎಂಬ ಸರಕಾರದ ಸೂಚನೆ ಪ್ರಶ್ನಿಸಿ ಸಲ್ಲಿಸಲಾಗಿರುವ ಹಲವು ಅರ್ಜಿಗಳ ವಿಚಾರಣೆ ಸುಪ್ರೀಂಕೋರ್ಟಲ್ಲಿ ನವೆಂಬರ್ನಿಂದ ಆರಂಭವಾಗಲಿದೆ.
ವಿವಿಧ ಯೋಜನೆಗಳ ಲಾಭ ಪಡೆಯಲು ಆಧಾರ್ ಸಂಯೋಜನೆ ಅವಧಿಯನ್ನು ಡಿ.31ರ ವರೆಗೆ ಕೇಂದ್ರ ವಿಸ್ತರಿಸಿದೆ ಎಂದು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠಕ್ಕೆ ಅರಿಕೆ ಮಾಡಿಕೊಂಡರು. ಹೀಗಾಗಿ, ನ್ಯಾಯಪೀಠ ಅದಕ್ಕೆ ಸಂಬಂಧಿಸಿದ ಅರ್ಜಿಗಳನ್ನು ತ್ವರಿತವಾಗಿ ನಡೆಸಬೇಕಾದ ಅಗತ್ಯವಿಲ್ಲ. ನವೆಂಬರ್ನಲ್ಲಿ ಅದನ್ನು ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಹೇಳಿತು.
ಇದಕ್ಕೂ ಮೊದಲು, ಹಿರಿಯ ವಕೀಲ ಶ್ಯಾಮ್ ದಿವಾನ್ “ಸರಕಾರ ಅವಧಿ ವಿಸ್ತರಣೆ ಮಾಡುವುದೇ ಆದಲ್ಲಿ ನವೆಂಬರ್ನಲ್ಲಿ ವಿಚಾರಣೆ ನಡೆಸಿದರೂ ಆದೀತು’ ಎಂದು ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
MUST WATCH
ಹೊಸ ಸೇರ್ಪಡೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ