ತುರ್ತು ಪರಿಸ್ಥಿತಿಯ ಬಗ್ಗೆಯೂ ಸಿನೆಮಾವಾಗಲಿ
Team Udayavani, Mar 18, 2022, 6:45 AM IST
ಲಕ್ನೋ: ಕಾಶ್ಮೀರಿ ಪಂಡಿತರ ಹತ್ಯಾಕಾಂಡದ ಬಗ್ಗೆ ಮಾಡಲಾಗಿ ರುವ “ದಿ ಕಾಶ್ಮೀರ್ ಫೈಲ್ಸ್’ ಸಿನೆಮಾದ ರೀತಿಯಲ್ಲೇ ಇಂದಿರಾ ಗಾಂಧಿ ಅವರು ಹೇರಿದ ತುರ್ತು ಪರಿಸ್ಥಿತಿ, ಮುಲಾಯಂ ಸಿಂಗ್ ಯಾದವ್ ಆಡಳಿತದ ಅವಧಿಯಲ್ಲಿ ರಾಮ ಭಕ್ತರ ಮೇಲೆ ನಡೆದ ಗುಂಡಿನ ದಾಳಿ ಬಗ್ಗೆಯೂ ಸಿನೆಮಾ ಮಾಡಬೇಕು ಎಂದು ಉತ್ತರ ಪ್ರದೇಶದ ಬಿಜೆಪಿ ಸಂಸದ ಮುಕೇಶ್ ರಜಪೂತ್ ಹೇಳಿದ್ದಾರೆ.
ಛತ್ತೀಸ್ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು “ದಿ ಕಾಶ್ಮೀರ್ ಫೈಲ್ಸ್’ ಸಿನೆಮಾ ವೀಕ್ಷಿಸಿದ್ದಾರೆ. ಅನಂತರ ಮಾತನಾಡಿದ ಅವರು, “ಈ ಸಿನೆಮಾ ಅರ್ಧ ಸತ್ಯವನ್ನು ಮಾತ್ರ ಹೇಳುತ್ತದೆ. ಸಿನೆಮಾದಲ್ಲಿ ಬರೀ ಕ್ರೂರತೆಯೇ ಇದೆ. ಅದರಿಂದ ಕಲಿಯುವಂಥದ್ದು ಏನೂ ಇಲ್ಲ’ ಎಂದಿದ್ದಾರೆ.
ಹ್ಯಾಕರ್ಗಳ ಕೈಚಳಕ: ಸಿನೆಮಾ ದೇಶಾದ್ಯಂತ ಪ್ರಚಾರ ಪಡೆಯುತ್ತಿದ್ದಂತೆಯೇ ಕೆಲವು ಹ್ಯಾಕರ್ಗಳು ಸಿನೆಮಾದ ಪ್ರಚಾರವನ್ನು ದುರ್ಬಳಕೆ ಮಾಡಿಕೊಳ್ಳಲಾರಂಭಿಸಿದ್ದಾರೆ. “ದಿ ಕಾಶ್ಮೀರ್ ಫೈಲ್ಸ್’ ಸಿನೆಮಾಕ್ಕೆ ಫ್ರೀ ಅಕ್ಸೆಸ್ ಎಂದು ಯಾವುದೋ ಲಿಂಕ್ ಕಳುಹಿಸಲು ಆರಂಭಿಸಿ ದ್ದಾರೆ. ಅದನ್ನು ಜನರು ಕ್ಲಿಕ್ ಮಾಡಿದಾಕ್ಷಣ, ಅವರ ಖಾತೆಗಳಿಂದ ಹಣ ಲೂಟಿ ಮಾಡುತ್ತಿದ್ದಾರೆ ಎಂದು ಉತ್ತರ ಪ್ರದೇಶದ ನೋಯ್ಡಾದ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಈಗಾಗಲೇ ಈ ಸಿನೆಮಾ ಹೆಸರಿನಲ್ಲಿ ಸೈಬರ್ ಕಳ್ಳರು 30 ಲಕ್ಷ ರೂ. ಲೂಟಿ ಮಾಡಿರುವುದಾಗಿ ದೂರು ಬಂದಿದೆಯೆಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ