ಸಿಪಿಎಸ್‌ಇ ಒಡೆತನದ ಭೂಮಿ: ಹಣಕಾಸು ಸಚಿವಾಲಯದಿಂದ ಹೊಸ ಚಿಂತನೆ


Team Udayavani, Oct 17, 2021, 4:36 PM IST

ಹಣಕಾಸು ಸಚಿವಾಲಯ ಸರ್ಕಾರಿ ಆಸ್ತಿಗಳ ಮೋನಿಟೈಷೇಶನ್ ಗಾಗಿ ಕ್ಯಾಬಿನೆಟ್‌ ಅನುಮೋದನೆ ಪಡೆಯಲಿದೆ

ನವದೆಹಲಿ: ಹಣಕಾಸು ಸಚಿವಾಲಯವು ಶೀಘ್ರದಲ್ಲೇ ಸಂಪುಟದೊಂದಿಗೆ ಚರ್ಚಿಸಿ ಸಿಪಿಯಸ್‌ಸಿಗೆ ಒಳಪಟ್ಟ ಭೂಮಿಯನ್ನು, ಖಾಸಗೀಕರಣಕ್ಕೆ ಒಳಪಟ್ಟ  ಆದಾಯವಿರದ ಆಸ್ತಿಗಳನ್ನು ವಶಕ್ಕೆ ಪಡೆಯಲು ಮತ್ತು ಅವುಗಳನ್ನು ಮೇಲ್ವಿಚಾರಣೆ ಮಾಡಲು ಕಂಪನಿಯೊಂದನ್ನು ಸ್ಥಾಪಿಸಲು ಅನುಮತಿ ಕೇಳುವ ಸಾಧ್ಯತೆಗಳಿವೆ.

ಚಾಲ್ತಿಯಲ್ಲಿಲ್ಲದ ಆಸ್ತಿಗಳನ್ನು ಸರಕಾರಿ ಬೊಕ್ಕಸಕ್ಕೆ ಅದರ ಮೌಲ್ಯವನ್ನು ಪುನಃ ಪಡೆಯಲು ಕಂಪನಿಯ ಉಸ್ತುವಾರಿಯೊಂದಿಗೆ ಹೊಸ ರೂಪದಲ್ಲಿ ವಿಶೇಷ ಉದ್ದೇಶದ ವಾಹನವನ್ನು (ಎಸ್‌ಪಿವಿ) ಸಿದ್ದ ಪಡಿಸಲಾಗುವುದು ಎಂದು ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣಾ (ಡಿಐಪಿಎಎಂ) ಕಾರ್ಯದರ್ಶಿ ತುಹಿನ್ ಕಾಂತ ಪಾಂಡೆ ಹೇಳಿದರು.

ಸರಕಾರವು ಹಲವು ವರ್ಷಗಳಿಂದ ಅಸ್ಥಿತ್ವದಲ್ಲಿರುವ ಈ ಹಣಕಾಸು ಮತ್ತು ಆಸ್ತಿ ನಿರ್ವಹಣಾ ಕಂಪನಿಯ ಬಗ್ಗೆ ಹೇಳುತ್ತಿದೆ ಮತ್ತು ಶೀಘ್ರದಲ್ಲಿ ಕ್ಯಾಬಿನೆಟ್‌ ಅನುಮೋದನೆ ಪಡೆಯಲಿದೆ ಎಂದು ಪಾಂಡೆ ಸ್ಪಷ್ಟಪಡಿಸಿದರು.

ಅವರು ಹೇಳಿರುವಂತೆ ಈ ಭೂಮಿಗಳಲ್ಲಿ ಹೆಚ್ಚಿನ ಭಾಗ ಸರಕಾರಿ ಉಪಯೋಗಕ್ಕೆ ಯೋಗ್ಯವಿಲ್ಲದ ಕಾರಣ ಕ್ಯಾಬಿನೆಟ್‌ ಅನುಮತಿ ಸಿಕ್ಕ ಬಳಿಕ ಆದಾಯ ಗಳಿಕಾ ಆಸ್ತಿಗಳಾಗಿ (ಮಾನಿಟೈಷೇಶನ್) ಮಾಡಲಾಗುವುದು ಎಂದು ತಿಳಿಸಿದರು.

ಕ್ಯಾಬಿನೆಟ್ ಅನುಮೋದನೆಯ ನಂತರ, ಈಗ ಹಣಕಾಸು ಸಚಿವಾಲಯದ ಅಧೀನದಲ್ಲಿರುವ ಸಾರ್ವಜನಿಕ ಉದ್ಯಮಗಳ ಇಲಾಖೆಗೆ (ಡಿಪಿಇ) ಸ್ವತ್ತುಗಳ ಹಣಗಳಿಕೆಯ ಜವಾಬ್ದಾರಿಯನ್ನು ವಹಿಸಲಾಗುವುದು ಎಂದರು.

ಪ್ರಸಕ್ತ  ಆರ್ಥಿಕ ವರ್ಷದಲ್ಲಿ ಬಿಪಿಸಿಎಲ್, ಶಿಪ್ಪಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ, ಐಡಿಬಿಐ ಬ್ಯಾಂಕ್, ಬಿಇಎಂಎಲ್, ಪವನ್ ಹನ್ಸ್, ನೀಲಾಚಲ್ ಇಸ್ಪಾಟ್ ನಿಗಮ್ ಲಿಮಿಟೆಡ್‌ನ ಕಾರ್ಯತಂತ್ರ ಆಧಾರಿತ ಮಾರಾಟವನ್ನು ಮುಕ್ತಾಯಗೊಳಿಸುವ ಗುರಿಯನ್ನು ಸರಕಾರ ಹೊಂದಿದೆ.

2021-22 ಬಜೆಟ್‌ನಲ್ಲಿ, ಸರಕಾರವು ಪಿಎಸ್‌ಇ (ಸಾರ್ವಜನಿಕ ವಲಯದ ಉದ್ಯಮಗಳು) ಖಾಸಗೀಕರಣ ನೀತಿಯನ್ನು ಘೋಷಿಸಿತ್ತು, ಅದರ ಪ್ರಕಾರ ಎಲ್ಲಾ ಸರಕಾರಿ ಒಡೆತನದ ಆಸ್ತಿ (ಪಿಎಸ್ಯು)ಗಳನ್ನು ಖಾಸಗೀಕರಣ ಗೊಳಿಸಲಾಗುವುದು, ಪರಮಾಣು ಶಕ್ತಿ, ಬಾಹ್ಯಾಕಾಶ ಮತ್ತು ರಕ್ಷಣೆ; ಸಾರಿಗೆ ಮತ್ತು ದೂರಸಂಪರ್ಕ; ವಿದ್ಯುತ್, ಪೆಟ್ರೋಲಿಯಂ, ಕಲ್ಲಿದ್ದಲು ಮತ್ತು ಇತರ ಖನಿಜಗಳು; ಮತ್ತು ಬ್ಯಾಂಕಿಂಗ್, ವಿಮೆ ಖಾಸಗೀಕರಣಕ್ಕೆ ಒಳಪಡಲಿವೆ ಎಂದು ತಿಳಿಸಿದರು.

ಈ ವಲಯಗಳಲ್ಲಿ,ಸರಕಾರವು ಕನಿಷ್ಟ ಸಂಖ್ಯೆಯ ಪಿಎಸ್‌ಯು (ಸರಕಾರಿ ಒಡೆತನ)ಗಳನ್ನು ಮಾತ್ರ ಉಳಿಸಿಕೊಳ್ಳುತ್ತದೆ ಎಂದರು.

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.