ಪ್ರಧಾನಿ ಮೋದಿ ವಿರುದ್ಧ ಟೀಕೆ; BSP ಮಾಜಿ ಎಂಪಿ ವಿರುದ್ಧ ಬಿಜೆಪಿ ಉಪಾಧ್ಯಕ್ಷೆ ಶಾಜಿಯಾ ದೂರು
ದೂರಿನ ಆಧಾರ ಮೇಲೆ ಐಪಿಸಿ ಸೆಕ್ಷನ್ 506 ಹಾಗೂ 509ರಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ
Team Udayavani, Feb 20, 2021, 2:51 PM IST
ನವದೆಹಲಿ : ಅಸಭ್ಯವರ್ತನೆ ತೋರಿದ ಆರೋಪದಡಿ ಬಹುಜನ ಸಮಾಜ ಪಕ್ಷದ ಮಾಜಿ ಸಂಸದ ಅಕ್ಬರ್ ಅಹ್ಮದ್ ವಿರುದ್ಧ ದೆಹಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಶಾಜಿಯಾ ಇಲ್ಮಿ ಇಂದು (ಫೆ.20) ವಸಂತ ನಗರದ ಕುಂಜ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಫೆ. 5 ರಂದು ಹಲವು ದೇಶಗಳಲ್ಲಿ ರಾಯಭಾರಿಯಾಗಿ ಕಾರ್ಯನಿರ್ವಹಿಸಿರುವ ಚೇತನ್ ಸೇಠ್ ಅವರ ಪಾರ್ಟಿಗೆ ತೆರಳಿದ್ದೆ. ಪಾರ್ಟಿಯಲ್ಲಿ ಚೇತನ್ ಜತೆ ಕುಶಲೋಪರಿಯಾಗಿ ಮಾತಾಡುತ್ತಿದ್ದ ವೇಳೆ ಮಧ್ಯ ಪ್ರವೇಶಿಸಿದ ಅಕ್ಬರ್, ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ವಿರುದ್ಧ ಕೆಟ್ಟದಾಗಿ ಟೀಕೆ ಮಾಡಲು ಶುರುಮಾಡಿದರು. ಅಲ್ಲಿದ್ದ ಜನರೆಲ್ಲ ಮಾತು ನಿಲ್ಲಿಸುವಂತೆ ಕೇಳಿಕೊಂಡರೂ ಕೂಡ, ಇನ್ನೂ ಅಶ್ಲೀಲವಾಗಿ ಮಾತಾಡಿದರು. ನನಗೂ ಕೂಡ ಅಸಂಬದ್ಧ ಪದಗಳನ್ನು ಬಳಿಸಿದರು ಎಂದು ಶಾಜಿಯಾ ದೂರಿನಲ್ಲಿ ಆರೋಪಿಸಿದ್ದಾರೆ.
ಘಟನೆ ಕುರಿತು ಮೊದಲು ಸಿಆರ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೆ. ಆದರೆ, ಘಟನೆ ವಸಂತ ನಗರದಲ್ಲಿ ನಡೆದಿದ್ದರಿಂದ ಕುಂಜ್ ಠಾಣೆಯಲ್ಲಿ ದೂರು ನೀಡಿದ್ದೇನೆ ಎಂದಿದ್ದಾರೆ.
ಇನ್ನು ಶಾಜಿಯಾ ಅವರ ದೂರಿನ ಆಧಾರ ಮೇಲೆ ಐಪಿಸಿ ಸೆಕ್ಷನ್ 506 ಹಾಗೂ 509ರಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ