ಔಷಧಿ ಘಟಕದಲ್ಲಿ ಅಗ್ನಿ ಆಕಸ್ಮಿಕ; ಆರು ಮಂದಿ ಸಾವು, 12 ಜನರಿಗೆ ಗಾಯ!
Team Udayavani, Apr 14, 2022, 9:40 AM IST
ಹೈದರಾಬಾದ್: ಔಷಧ ಘಟಕವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡ ಘಟನೆ ಗುರುವಾರ ಮಧ್ಯರಾತ್ರಿ ಆಂಧ್ರಪ್ರದೇಶದಲ್ಲಿ ನಡೆದಿದೆ. ಅನಿಲ ಸೋರಿಕೆಯಿಂದ ರಿಯಾಕ್ಟರ್ ಸ್ಫೋಟಗೊಂಡಿದ್ದು ಬೆಂಕಿಗೆ ಕಾರಣ ಎಂದು ಶಂಕಿಸಲಾಗಿದೆ.
ಪಶ್ಚಿಮ ಗೋದಾವರಿ ಜಿಲ್ಲೆಯ ಅಕ್ಕಿರೆಡ್ಡಿಗುಡೆಂನಲ್ಲಿ ಈ ಘಟನೆ ನಡೆದಿದೆ. ಬೆಂಕಿ ಕಾಣಿಸಿಕೊಂಡಾಗ 18 ಸಂತ್ರಸ್ತರು ಔಷಧೀಯ ಘಟಕದ 4 ನೇ ಘಟಕದಲ್ಲಿ ಕೆಲಸ ಮಾಡುತ್ತಿದ್ದರು.
ಎರಡು ಗಂಟೆಯಲ್ಲಿ ಬೆಂಕಿಯನ್ನು ಹತೋಟಿಗೆ ತರಲಾಯಿತು. ಮೃತಪಟ್ಟ ಆರು ಮಂದಿಯಲ್ಲಿ ನಾಲ್ವರು ಬಿಹಾರದಿಂದ ವಲಸೆ ಬಂದ ಕಾರ್ಮಿಕರು.
ಮೃತರನ್ನು ಉದುರುಪತಿ ಕೃಷ್ಣಯ್ಯ, ಬಿ ಕಿರಣ್ ಕುಮಾರ್, ಕಾರು ರವಿ ದಾಸ್, ಮನೋಜ್ ಕುಮಾರ್, ಸುವಾಸ್ ರವಿ ದಾಸ್ ಮತ್ತು ಹಬ್ದಾಸ್ ರವಿ ದಾಸ್ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ಅಮೆರಿಕದ ಮಾನವ ಹಕ್ಕುಗಳ ಪರಿಸ್ಥಿತಿಯ ಬಗ್ಗೆ ಭಾರತವೂ ಅಭಿಪ್ರಾಯ ಹೊಂದಿದೆ: ಜೈಶಂಕರ್ ತಿರುಗೇಟು
ಘಟನೆ ಬಗ್ಗೆ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ತೀವ್ರವಾಗಿ ಗಾಯಗೊಂಡವರಿಗೆ ತಲಾ 5 ಲಕ್ಷ ರೂ. ಹಾಗೂ ಸಣ್ಣಪುಟ್ಟ ಗಾಯಗಳಾದವರಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದರು. ಗಾಯಗೊಂಡವರ ಸ್ಥಿತಿಯ ಮೇಲೆ ನಿಗಾ ಇಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ
Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ
POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್ ದಾಖಲು
ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ
MUST WATCH
ಹೊಸ ಸೇರ್ಪಡೆ
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ
Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ
Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು
Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ
Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ