ಮುಂಬೈ ಸಿಟಿ ಸೆಂಟರ್ ಮಾಲ್ ನಲ್ಲಿ ಅಗ್ನಿ ಅವಗಢ: 20 ಅಗ್ನಿಶಾಮಕ ವಾಹನಗಳು ದೌಡು
Team Udayavani, Oct 23, 2020, 7:42 AM IST
ಮುಂಬೈ: ಇಲ್ಲಿನ ದಕ್ಷಿಣ ಮುಂಬೈನಲ್ಲಿರುವ ಸಿಟಿ ಸೆಂಟರ್ ಮಾಲ್ ನಲ್ಲಿ ಭಾರಿ ಅಗ್ನಿ ಅವಗಢ ಸಂಭವಿಸಿದ್ದು, ಸುಮಾರು 20 ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿದೆ.
ಗುರುವಾರ ರಾತ್ರಿ ಈ ಅಗ್ನಿ ಅವಗಢ ನಡೆದಿದ್ದು, ಆ ವೇಳೆಯಲ್ಲಿ ಮಾಲ್ ನಲ್ಲಿ 200-300 ಮಂದಿ ಇದ್ದರು ಎಂದು ಅಗ್ನಿಶಾಮಕ ದಳ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸ್ಥಳದಲ್ಲಿ 20 ಅಗ್ನಿ ಶಾಮಕ ದಳ ವಾಹನಗಳು, ಏಳು ಜಟ್ಟಿಗಳ ಸಹಾಯದಿಂದ ಕಾರ್ಯಾಚರಣೆ ಮಾಡಲಾಗಿದೆ. ನಾಲ್ಕು ಮಹಡಿಯ ಕಟ್ಟಡದ ಹಲವು ಕಡೆ ಅಗ್ನಿಯ ಕೆನ್ನಾಲಿಗೆ ಹರಡಿದೆ.
ಘಟನೆಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಅಗ್ನಿಶಾಮಕ ಸಿಬ್ಬಂದಿಯೋರ್ವರಿಗೆ ಗಾಯವಾಗಿದ್ದು, ಕೂಡಲೇ ಅವರನ್ನು ಮುಂಬೈ ನ ಜೆಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:ಪ್ರಣಾಳಿಕೆಯಲ್ಲಿ ಉಚಿತ ಲಸಿಕೆ ಸದ್ದು; ರಂಗೇರಿದ ಬಿಹಾರ ಚುನಾವಣೆ ಕಣ
ಏತನ್ಮಧ್ಯೆ, ಎಲ್ಲಾ 200-300 ಜನರನ್ನು ಅಗ್ನಿಶಾಮಕ ದಳದ ಅಧಿಕಾರಿಗಳು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಆದರೆ ಇನ್ನೂ ಬೆಂಕಿ ನಿಯಂತ್ರಣದಲ್ಲಿರಲಿಲ್ಲ ಎಂದು ವರದಿ ತಿಳಿಸಿದೆ.
ಅಗ್ನಿಶಾಮಕ ದಳದ ಅಧಿಕಾರಿಗಳ ಪ್ರಕಾರ, ಬೆಂಕಿಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಇದು ನಗರದಲ್ಲಿ ಗುರುವಾರ ಸಂಭವಿಸಿದ ಎರಡನೇ ಅಗ್ನಿ ಅವಗಢ ಎಂದು ವರದಿಯಾಗಿದೆ. ಕುರ್ಲಾ ವೆಸ್ಟ್ನ ಗಾರ್ಮೆಂಟ್ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಎರಡು ಗಂಟೆಗಳಿಗಿಂತ ಹೆಚ್ಚು ಪ್ರಯತ್ನದ ನಂತರ ಅದನ್ನು ಬೆಂಕಿ ನಂದಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ