ಆಂಧ್ರ ಪ್ರದೇಶದ ಎಚ್ ಪಿ ಸಿ ಎಲ್ ಘಟಕದಲ್ಲಿ ಬೆಂಕಿ ಅವಘಡ..! : ಕಾರ್ಮಿಕರ ರಕ್ಷಣೆ
ಘಟಕದೊಳಗೆ ಕಾರ್ಯ ನಿರ್ವಹಿಸುತ್ತಿದ್ದ ಕಾರ್ಯ ನಿರ್ವಹಿಸುತ್ತಿದ್ದ ಆರು ಮಂದಿಯ ರಕ್ಷಣೆ
Team Udayavani, May 25, 2021, 5:20 PM IST
ವಿಶಾಖಪಟ್ಟಣಂ : ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್(ಎಚ್ ಪಿ ಸಿ ಎಲ್) ನಲ್ಲಿ ಇಂದು(ಮಂಗಳವಾರ, ಮೇ 25) ಮಧ್ಯಾಹ್ನ ದೊಡ್ಡ ಪ್ರಮಾಣದಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಸ್ಥಳಕ್ಕೆ ತೆರಳಿದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ಅಲ್ಲಿದ್ದ ಎಲ್ಲ ಕೆಲಸಗಾರರನ್ನೂ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಸ್ಥಳೀಯ ಆಡಳಿತ ತಿಳಿಸಿರುವುದಾಗಿ ವರದಿಯಾಗಿದೆ.
ಇದನ್ನೂ ಓದಿ : ನಿಯಮ ಉಲ್ಲಂಘಿಸಿ ಮದುವೆ:ಅಧಿಕಾರಿಗಳನ್ನು ಕಂಡು ವೇದಿಕೆಯಲ್ಲೇ ವಧುವನ್ನು ಬಿಟ್ಟು ವರ ಎಸ್ಕೇಪ್!
ವಿಶಾಖಪಟ್ಟಣಂನಲ್ಲಿರುವ ಎಚ್ ಪಿ ಸಿ ಎಲ್ ಘಟಕದಲ್ಲಿ ಏನೋ ಸ್ಫೋಟಗೊಂಡ ಶಬ್ದ ಕೇಳಿಬಂತು. ಅದರ ಬೆನ್ನಲ್ಲೇ ಭಾರೀ ಪ್ರಮಾಣದಲ್ಲಿ ಬೆಂಕಿ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಇನ್ನು, ಭಾರಿ ಪ್ರಮಾಣದಲ್ಲಿ ಬೆಂಕಿ ಕಾನಿಸಿಕೊಂಡ ಸಂದರ್ಭದಲ್ಲಿ ಸುಮಾರು 6 ಮಂದಿ ಘಟಕದೊಳಗೆ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದ್ದು, ಆ ಆರು ಮಂದಿಯನ್ನೂ ಕೂಡ ಸುರಕ್ಷಿತವವಾಗಿ ಸ್ಥಳಾಂತರ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಎಚ್ ಪಿ ಸಿ ಎಲ್ ನ ಕಚ್ಚಾ ಶುದ್ಧೀಕರಣ ಘಟಕದ ಪೈಪ್ ಲೈನ್ ಸ್ಫೋಟಗೊಂಡ ಕಾರಣ ಇಷ್ಟು ದೊಡ್ಡ ಪ್ರಮಾಣದಲ್ಲಿ ಬೆಂಕಿ ಹೊತ್ತಿ ಉರಿಯಲು ಕಾರಣ ಎಂದು ಸ್ಥಳೀಯ ಆಡಳಿತದ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಿಂದಾಗಿ ಯಾವುದೇ ಸಾವು ನೋವುಗಳಾಗಿಲ್ಲವೆಂದು ಅಲ್ಲಿನ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆಂದು ವರದಿ ತಿಳಿಸಿದೆ.
ಇದನ್ನೂ ಓದಿ : ನ್ಯೂಯಾರ್ಕ್ ಸಿನಿಮೋತ್ಸವಕ್ಕೆ ಕುಂದಾಪ್ರ ಕನ್ನಡದ ‘ಕೋಳಿ ತಾಳ್’ ಚಿತ್ರ ಆಯ್ಕೆ